Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...