Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...