Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...