Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...