Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...