Homeಕರ್ನಾಟಕಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

- Advertisement -
- Advertisement -

ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.

ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.

ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.


ಇದನ್ನೂ ಓದಿ:  ಸ್ಯಾಂಡಲ್‌ವುಡ್ ಚಿತ್ರ ನಟ ಚಿರಂಜೀವಿ ಸರ್ಜಾ ನಿಧನ


ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.

ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.

ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.

ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನಮನ ಮಿಡಿಯುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...