Homeಕರ್ನಾಟಕಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’

- Advertisement -
- Advertisement -

ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.

ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.

ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.


ಇದನ್ನೂ ಓದಿ:  ಸ್ಯಾಂಡಲ್‌ವುಡ್ ಚಿತ್ರ ನಟ ಚಿರಂಜೀವಿ ಸರ್ಜಾ ನಿಧನ


ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.

ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.

ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.

ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಕನ್ನಡಿಗರ ಮನಸೆಳೆದಿದ್ದ ಚಿರಂಜೀವಿ ಸರ್ಜಾ ನಟನೆಯ ’ಅಮ್ಮಾ ಐ ಲವ್‌ ಯೂ’ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನಮನ ಮಿಡಿಯುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...