Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...