Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...