Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...