Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...