Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...