Homeಕರ್ನಾಟಕಚಿತ್ರದುರ್ಗ: ಅಪ್ಪ, ಅಮ್ಮ, ಅಜ್ಜಿ, ಅಣ್ಣ, ತಂಗಿಗೆ ವಿಷವಿಟ್ಟ ವಾತ್ಸಲ್ಯ ವಂಚಿತ ಬಾಲಕಿ

ಚಿತ್ರದುರ್ಗ: ಅಪ್ಪ, ಅಮ್ಮ, ಅಜ್ಜಿ, ಅಣ್ಣ, ತಂಗಿಗೆ ವಿಷವಿಟ್ಟ ವಾತ್ಸಲ್ಯ ವಂಚಿತ ಬಾಲಕಿ

- Advertisement -
- Advertisement -

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯಲ್ಲಿ ಜುಲೈ 12 ರಂದು ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಮನೆ ಮಗಳೇ ಮುದ್ದೆಯಲ್ಲಿ ವಿಷವಿಟ್ಟಿರುವ ವಿಷಯ ಬೆಳಕಿಗೆ ಬಂದಿದೆ.

ಮನೆಯ ಮೂವರು ಮಕ್ಕಳಲ್ಲಿ ಎರಡನೇ ಮಗಳಾದ 17 ವರ್ಷದ ಅಪ್ರಾಪ್ತೆ ಮನೆಯಲ್ಲಿ ಇನ್ನಿಬ್ಬರು ಮಕ್ಕಳಿಗೆ ನೀಡುತ್ತಿದ್ದ ಪ್ರೀತಿಗೂ ತನಗೆ ದೊರೆಯುತ್ತಿದ್ದ ಪ್ರೀತಿ-ವಾತ್ಸಲ್ಯದ ತಾರತಮ್ಯದಿಂದ ಬೇಸತ್ತು ಇಂತಹ ಕೃತ್ಯಕ್ಕೆ ಕೈ ಹಾಕಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಜುಲೈ 12 ರಂದು ಭರಮಸಾಗರ ಹೋಬಳಿಯ ಇಸಾಮುದ್ರ ಗ್ರಾಮದ ಗೊಲ್ಲರಹಟ್ಟಿಗೆ ಹೊಂದಿಕೊಂಡಿರುವ ಲಂಬಾಣಿಹಟ್ಟಿಯಲ್ಲಿ ಮುದ್ದೆ ಊಟ ಮಾಡಿದ್ದ ಮನೆಯ ಮುಖ್ಯಸ್ಥ ತಿಪ್ಪನಾಯ್ಕ (45), ಪತ್ನಿ ಸುಧಾಬಾಯಿ (40) ತಾಯಿ ಗುಂಡಿಬಾಯಿ (80), ಮಗಳು ರಮ್ಯಾ (16) ಸಾವನ್ನಪ್ಪಿದ್ದರು. ಅಸ್ವಸ್ಥರಾಗಿದ್ದ ಮಗ ರಾಹುಲ್ (19) ರನ್ನು  ದಾವಣಗೆರೆಯ ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರಾಹುಲ್ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ’ಹಿಂದೂಗಳಿಗೆ ಮಾತ್ರ’: ವಿವಾದ ಸೃಷ್ಟಿಸಿದ ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಜಾಹೀರಾತು

ಮುದ್ದೆ ಊಟ ಮಾಡಿದ್ದವರು ಮಾತ್ರ ಸಾವನ್ನಪ್ಪಿದ್ದು, ಪೊಲೀಸರು ಊಟದಲ್ಲಿ ವಿಷ ಬೆರೆತಿರುವ ಶಂಕೆ ವ್ಯಕ್ತಪಡಿಸಿ, ಉಳಿದಿದ್ದ ಅಡುಗೆಯನ್ನು ದಾವಣಗೆರೆಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದರು. ಎಸ್‌ಎಫ್‌ಎಲ್‌ ವರದಿಯಲ್ಲಿ ಮುದ್ದೆಯಲ್ಲಿ ಕೀಟನಾಶಕ ಬೆರೆತಿರುವುದು ತಿಳಿದು ಬಂದಿತ್ತು.

ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ಅಂದು ಮನೆಯಲ್ಲಿ ಬರಿ ಅನ್ನ-ಸಾಂಬರ್‌ ಊಟ ಮಾಡಿ ಆರೋಗ್ಯವಾಗಿದ್ದ ಬಾಲಕಿಯನ್ನು ವಿಚಾರಣೆ ಒಳಪಡಿಸಿದ್ದಾರೆ. ಘಟನೆಯ ದಿನದಂದು ಮುದ್ದೆ ತಯಾರಿಸಿದ್ದ ಬಾಲಕಿ ಮುದ್ದೆಯಲ್ಲಿ ಕೀಟನಾಶಕ ಬೆರೆಸಿದದ್ದು ಬೆಳಕಿಗೆ ಬಂದಿದೆ. ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ಮನೆಯಲ್ಲಿ ರಮ್ಯಾ ಮತ್ತು ರಾಹುಲ್‌ಗೆ ಸಿಗುವ ಪ್ರೀತಿ ತನಗೆ ಸಿಗುತ್ತಿಲ್ಲ. ಅಜ್ಜಿ ಮನೆಯಿಂದ ಕರೆದುಕೊಂಡು ಬಂದು ಕೂಲಿ ಕೆಲಸಕ್ಕೆ ಆಕೆಯನ್ನು ಕಳುಹಿಸಲಾಗುತ್ತಿತ್ತು. ಜೊತೆಗೆ ಪೋಷಕರು ವಿನಾಕಾರಣ ಬೈಯುವುದು, ತಾತ್ಸಾರದಿಂದ ಕಾಣುವುದರಿಂದ ಬೇಸತ್ತು ಕೊಲೆಗೆ ಸಂಚು ಮಾಡಿದ್ದೆ ಎಂದು ಬಾಲಕಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಅನುಮಾನಸ್ಪದ ಸಾವು ಗ್ರಾಮದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಹಲವರ ಮೇಲೆ ಸಂಶಯ ವ್ಯಕ್ತವಾಗಿತ್ತು. ಆದರೆ ಮನೆ ಮಗಳೇ ಮನೆಯವಿಗೆ ವಿಷವಿಟ್ಟಿರುವ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಚಿತ್ರದುರ್ಗ: ವಿಷಾಹಾರ ಸೇವನೆ ಅನುಮಾನ- ಒಂದೇ ಕುಟುಂಬದ ನಾಲ್ವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...