Homeಕರ್ನಾಟಕಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ: ನ್ಯಾಯಾಂಗ/COD/CBI ತನಿಖೆಗೆ ಆಗ್ರಹಿಸಿ DSS ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ: ನ್ಯಾಯಾಂಗ/COD/CBI ತನಿಖೆಗೆ ಆಗ್ರಹಿಸಿ DSS ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

- Advertisement -
- Advertisement -

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕುಡಿಯುವ ನೀರಿನ ಕೊಳಾಯಿಯಲ್ಲಿನ ವಿಷಪೂರಿತ ನೀರನ್ನು ಕುಡಿದು ಅನೇಕರು ಸಾವಿಗೀಡಾಗಿದ್ದರು ಮತ್ತು 200ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ನರಳಾಡಿದ್ದರು. ಈ ದುರಂತಕ್ಕೆ ಅಂತರ್‌ಜಾತಿ ಪ್ರೇಮ ವಿವಾಹವೇ ಕಾರಣ, ಹಾಗಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿ.ಓ.ಡಿ. ಅಥವಾ ಸಿ.ಬಿ.ಐ.ಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಇಂದು(ಶುಕ್ರವಾರ) ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕಾ ಪ್ರಕಟಣೆ ಹೊರಡಿಸಿದ್ದು, ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಸಹಸ್ರಾರು ವರ್ಷಗಳಿಂದ ನಡೆಯುತ್ತಲೇ ಬಂದಿದೆ. ತಮಿಳುನಾಡಿನ ಕೈಲಾರಾಂಜಿಯಲ್ಲಿ ಮಾರಣಹೋಮ ನಡೆಯಿತು.

ಆಂಧ್ರದ ಬೆಲ್ಚಿ, ಪಿಜ್ರ, ಕರಂಚೇಡು, ಸಂಡೂರಿನಲ್ಲಿ ದಲಿತರ ಅತಿದೊಡ್ಡ ನರಮೇಧ ಇತಿಹಾಸದ ಕಪ್ಪುಚುಕ್ಕೆಯಾಗಿದೆ. ಕರ್ನಾಕಟದಲ್ಲಿ ಕಂಬಾಲಪಲ್ಲಿಯಲ್ಲಿ 7 ಜನ ದಲಿತರನ್ನು ಸಜೀವ ದಹನ ಮಾಡಲಾಯಿತು. ಬೆಂಡಿಗೇರಿಯಲ್ಲಿ ದಲಿತರಿಗೆ ಮಲ ತಿನ್ನಿಸಲಾಯಿತು.

”ಇದೀಗ ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕುಡಿಯುವ ನೀರಿನ ಕೊಳಾಯಿಯಲ್ಲಿನ ವಿಷಪೂರಿತ ನೀರನ್ನು ಕುಡಿದು ಅಸುನೀಗಿದರು. ಸುಮಾರು 200ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ನರಳಿದರು. ವಿಷಪೂರಿತ ನೀರನ್ನು ನಗರಸಭೆ ಪೂರೈಸಿದೆ. ಈ ಕೃತ್ಯದ ಹಿನ್ನೆಲೆ ದಲಿತ ಯುವಕ ಮತ್ತು ಸವರ್ಣಿಯ ಯುವತಿಯ ಅಂತರ್‌ಜಾತಿ ಪ್ರೇಮ ವಿವಾಹವೇ ಕಾರಣವಾಗಿದೆ. ಆದರೆ ಜಿಲ್ಲಾಡಳಿತವು ದಲಿತರ ಸಾವಿಗೆ ಕಾಲರಾ ಇರಬಹುದೆಂದು ಅನುಮಾನಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದೆ” ಎಂದು ದ.ಸಂ.ಸ. ಹೇಳಿದೆ.

”ರಾಜಕಾರಣಿಗಳು ದಲಿತರ ಸಾವು-ನೋವನ್ನು ರಾಜಕೀಯ ಮೇಲಾಟಕ್ಕೆ ಬಳಸಿಕೊಂಡಿದೆ. ಅಲ್ಲದೆ ಸರ್ಕಾರ ಚೂರು-ಪಾರು ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಹಾಗೂ ಪೊಲೀಸ್ ಇಲಾಖೆ ಕೊಲೆ ಪ್ರಕರಣ ದಾಖಲಿಸಿಕೊಳ್ಳಲು ಹಿಂಜರಿದಿದೆ. ಆದ್ದರಿಂದ ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿ.ಓ.ಡಿ. ಅಥವಾ ಸಿ.ಬಿ.ಐ.ಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಿನಾಂಕ : 01-09-2023 ರಂದು ದ.ಸಂ.ಸ. ಮತ್ತು ದಲಿತ ಸಂಘಟನೆಗಳ ಒಕ್ಕೂಟ ಸರದಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು :-

1) ಕವಾಡಿಗರಹಟ್ಟಿ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ಒಪ್ಪಿಸಬೇಕು.

2) ಸಾವನ್ನಪ್ಪಿದ 6 ದಲಿತ ಕುಟುಂಬಗಳಿಗೆ ತಲಾ 50.00 ಲಕ್ಷ ಪರಿಹಾರ ಹಾಗೂ ಕುಟುಂಬದಲ್ಲಿ, ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು.

3) ವಿಷಪೂರಿತ ನೀರು ಕುಡಿದು ಆಸ್ಪತ್ರೆ ಸೇರಿ ನರಳಿದ ಪ್ರತಿಯೊಬ್ಬರಿಗೂ 5.00 ಲಕ್ಷ ಪರಿಹಾರ ನೀಡಬೇಕು.

4) ಮೃತ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ತಲಾ 3 ಎಕರೆ ಜಮೀನನ್ನು ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...