Homeಕರ್ನಾಟಕಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ: ನ್ಯಾಯಾಂಗ/COD/CBI ತನಿಖೆಗೆ ಆಗ್ರಹಿಸಿ DSS ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಚಿತ್ರದುರ್ಗದ ಕವಾಡಿಗರಹಟ್ಟಿ ದುರಂತ: ನ್ಯಾಯಾಂಗ/COD/CBI ತನಿಖೆಗೆ ಆಗ್ರಹಿಸಿ DSS ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

- Advertisement -
- Advertisement -

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕುಡಿಯುವ ನೀರಿನ ಕೊಳಾಯಿಯಲ್ಲಿನ ವಿಷಪೂರಿತ ನೀರನ್ನು ಕುಡಿದು ಅನೇಕರು ಸಾವಿಗೀಡಾಗಿದ್ದರು ಮತ್ತು 200ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ನರಳಾಡಿದ್ದರು. ಈ ದುರಂತಕ್ಕೆ ಅಂತರ್‌ಜಾತಿ ಪ್ರೇಮ ವಿವಾಹವೇ ಕಾರಣ, ಹಾಗಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿ.ಓ.ಡಿ. ಅಥವಾ ಸಿ.ಬಿ.ಐ.ಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಇಂದು(ಶುಕ್ರವಾರ) ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕಾ ಪ್ರಕಟಣೆ ಹೊರಡಿಸಿದ್ದು, ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಸಹಸ್ರಾರು ವರ್ಷಗಳಿಂದ ನಡೆಯುತ್ತಲೇ ಬಂದಿದೆ. ತಮಿಳುನಾಡಿನ ಕೈಲಾರಾಂಜಿಯಲ್ಲಿ ಮಾರಣಹೋಮ ನಡೆಯಿತು.

ಆಂಧ್ರದ ಬೆಲ್ಚಿ, ಪಿಜ್ರ, ಕರಂಚೇಡು, ಸಂಡೂರಿನಲ್ಲಿ ದಲಿತರ ಅತಿದೊಡ್ಡ ನರಮೇಧ ಇತಿಹಾಸದ ಕಪ್ಪುಚುಕ್ಕೆಯಾಗಿದೆ. ಕರ್ನಾಕಟದಲ್ಲಿ ಕಂಬಾಲಪಲ್ಲಿಯಲ್ಲಿ 7 ಜನ ದಲಿತರನ್ನು ಸಜೀವ ದಹನ ಮಾಡಲಾಯಿತು. ಬೆಂಡಿಗೇರಿಯಲ್ಲಿ ದಲಿತರಿಗೆ ಮಲ ತಿನ್ನಿಸಲಾಯಿತು.

”ಇದೀಗ ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕುಡಿಯುವ ನೀರಿನ ಕೊಳಾಯಿಯಲ್ಲಿನ ವಿಷಪೂರಿತ ನೀರನ್ನು ಕುಡಿದು ಅಸುನೀಗಿದರು. ಸುಮಾರು 200ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ನರಳಿದರು. ವಿಷಪೂರಿತ ನೀರನ್ನು ನಗರಸಭೆ ಪೂರೈಸಿದೆ. ಈ ಕೃತ್ಯದ ಹಿನ್ನೆಲೆ ದಲಿತ ಯುವಕ ಮತ್ತು ಸವರ್ಣಿಯ ಯುವತಿಯ ಅಂತರ್‌ಜಾತಿ ಪ್ರೇಮ ವಿವಾಹವೇ ಕಾರಣವಾಗಿದೆ. ಆದರೆ ಜಿಲ್ಲಾಡಳಿತವು ದಲಿತರ ಸಾವಿಗೆ ಕಾಲರಾ ಇರಬಹುದೆಂದು ಅನುಮಾನಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದೆ” ಎಂದು ದ.ಸಂ.ಸ. ಹೇಳಿದೆ.

”ರಾಜಕಾರಣಿಗಳು ದಲಿತರ ಸಾವು-ನೋವನ್ನು ರಾಜಕೀಯ ಮೇಲಾಟಕ್ಕೆ ಬಳಸಿಕೊಂಡಿದೆ. ಅಲ್ಲದೆ ಸರ್ಕಾರ ಚೂರು-ಪಾರು ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಹಾಗೂ ಪೊಲೀಸ್ ಇಲಾಖೆ ಕೊಲೆ ಪ್ರಕರಣ ದಾಖಲಿಸಿಕೊಳ್ಳಲು ಹಿಂಜರಿದಿದೆ. ಆದ್ದರಿಂದ ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಸಿ.ಓ.ಡಿ. ಅಥವಾ ಸಿ.ಬಿ.ಐ.ಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಿನಾಂಕ : 01-09-2023 ರಂದು ದ.ಸಂ.ಸ. ಮತ್ತು ದಲಿತ ಸಂಘಟನೆಗಳ ಒಕ್ಕೂಟ ಸರದಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು :-

1) ಕವಾಡಿಗರಹಟ್ಟಿ ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ಒಪ್ಪಿಸಬೇಕು.

2) ಸಾವನ್ನಪ್ಪಿದ 6 ದಲಿತ ಕುಟುಂಬಗಳಿಗೆ ತಲಾ 50.00 ಲಕ್ಷ ಪರಿಹಾರ ಹಾಗೂ ಕುಟುಂಬದಲ್ಲಿ, ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು.

3) ವಿಷಪೂರಿತ ನೀರು ಕುಡಿದು ಆಸ್ಪತ್ರೆ ಸೇರಿ ನರಳಿದ ಪ್ರತಿಯೊಬ್ಬರಿಗೂ 5.00 ಲಕ್ಷ ಪರಿಹಾರ ನೀಡಬೇಕು.

4) ಮೃತ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ತಲಾ 3 ಎಕರೆ ಜಮೀನನ್ನು ನೀಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...