Homeಕರ್ನಾಟಕಚಿತ್ರದುರ್ಗ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ರಂದು ವಿಚಾರಣೆಗೆ ನಿಗಧಿಪಡಿಸಿದೆ.

- Advertisement -
- Advertisement -

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಕೀಲರ ಮೂಲಕ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ರಂದು ವಿಚಾರಣೆಗೆ ನಿಗಧಿಪಡಿಸಿದೆ.

ಸ್ವಾಮೀಜಿಯವರನ್ನು ಪೊಲೀಸರು ಬಂಧಿಸಿಲ್ಲ: ಪೊಲೀಸರ ಸ್ಪಷ್ಟನೆ

ಪೋಕ್ಸೋ ಪ್ರಕರಣದ ಅಡಿಯಲ್ಲಿ ಮುರುಘ ಶರಣರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಪೊಲೀಸರು ಬಂಧಿಸಿಲ್ಲ, ಆದರೆ ವಶಕ್ಕೆ ಪಡೆದು ಮಠಕ್ಕೆ ವಾಪಸ್‌ ಕರೆತಂದಿದ್ದಾರೆಂದು ವರದಿಯಾಗಿದೆ.

ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ನಡುವೆಯೆ “ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಭಾನುವಾರ ಪ್ರಶ್ನಿಸಿದಾಗ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎಂದಿದ್ದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎಂದು ತಿಳಿಸಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಸೂಚನೆ ನೀಡಿದ್ದಾರೆ.

ಅಟ್ರಾಸಿಟಿ ಪ್ರಕರಣ ದಾಖಲಿಸಲು ಆಗ್ರಹ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಮುರುಘಾ ಶರಣರು ಇಂದು ಭಕ್ತರನ್ನು ಉದ್ದೇಶಿಸಿ ಮಠದ ಆವರಣದಲ್ಲಿ ಮಾತನಾಡಿದ್ದಾರೆ. “ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಅದನ್ನು ಗೌರವಿಸುತ್ತೇನೆ. ಪಲಾಯನವಾದ ಮಾಡುವುದಿಲ್ಲ. ಎಲ್ಲ ತನಿಖೆಗೂ ಸಹಕಾರ ಕೊಡುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ. ಊಹಾಪೋಹಗಳಿಗೆ ಅವಕಾಶ ಇಲ್ಲ” ಎಂದಿದ್ದಾರೆ.

“ಶ್ರೀ ಮಠದ ಅಸಂಖ್ಯಾತ ಭಕ್ತರು, ಅಭಿಮಾನಿಗಳು ಊಹಾಪೋಹಗಳನ್ನು, ಗಾಳಿ ಸುದ್ದಿಗಳನ್ನು ನಂಬಬಾರದು. ಈ ನೆಲದ ಕಾನೂನಿಗೆ ಬೆಲೆ ಕೊಡಬೇಕು. ಒಂದು ಕಾಲದಲ್ಲಿ ಮುರುಘಾ ಮಠ ಚಲಿಸುವ ನ್ಯಾಯಾಲಯವಾಗಿತ್ತು” ಎಂದರು.

“ವಿದ್ಯಾರ್ಥಿಗಳನ್ನು ಒಳಗೊಂಡಂತೆ ಎಲ್ಲ ಜನಾಂಗದವರನ್ನು, ಎಲ್ಲಾ ವರ್ಗದವರನ್ನು, ಪ್ರೀತಿಯಿಂದ ಅಕ್ಕರೆಯಿಂದ ನೋಡಿಕೊಂಡಿದ್ದೇವೆ. ಒಂದು ಅಹಿತಕರವಾದ ಬೆಳವಣಿಗೆಯಾಗಿದೆ. ಅದರಿಂದ ಹೊರಗಡೆ ಬಂದೇ ಬರುತ್ತೇನೆ. ಎಲ್ಲರಿಗೆ ಶುಭವಾಗಲಿ” ಎಂದು ಆಶಿಸಿದರು.

“ಪ್ರವಾಹೋಪಾದಿಯಲ್ಲಿ ಜನರು ಮಠಕ್ಕೆ ಬರುತ್ತಾರೆ. ಮೊನ್ನೆಯಿಂದಲೂ ಲಕ್ಷೋಪಲಕ್ಷ ಜನರು ಮಠಕ್ಕೆ ಬರುತ್ತಿರುವುದು ಅತೀವ ಧೈರ್ಯವನ್ನು ಉಂಟು ಮಾಡಿದೆ. ಕಾನೂನುನನ್ನು ಗೌರವಿಸೋಣ. ಇಂತಹದೊಂದು ಅಭಿಮಾನದ ಚಿಲುಮೆ ಚುಮ್ಮಲು ಕಾರಣವಾದವರಿಗೂ ಧನ್ಯವಾದಗಳನ್ನು ಹೇಳುತ್ತೇವೆ. ಅಭಿಮಾನವನ್ನು ಜಾಗೃತಿಗೊಳಿಸಿದ್ದೇವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ರಂಭಾಪುರಿ ಪೀಠಾಧೀಶ್ವರರ ಭೇಟಿ; ಮತ್ತೆ ಭುಗಿಲೆದ್ದ ಲಿಂಗಾಯತ ಧರ್ಮ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...