Homeಕರ್ನಾಟಕಚಿತ್ರದುರ್ಗ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ರಂದು ವಿಚಾರಣೆಗೆ ನಿಗಧಿಪಡಿಸಿದೆ.

- Advertisement -
- Advertisement -

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಕೀಲರ ಮೂಲಕ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ರಂದು ವಿಚಾರಣೆಗೆ ನಿಗಧಿಪಡಿಸಿದೆ.

ಸ್ವಾಮೀಜಿಯವರನ್ನು ಪೊಲೀಸರು ಬಂಧಿಸಿಲ್ಲ: ಪೊಲೀಸರ ಸ್ಪಷ್ಟನೆ

ಪೋಕ್ಸೋ ಪ್ರಕರಣದ ಅಡಿಯಲ್ಲಿ ಮುರುಘ ಶರಣರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಪೊಲೀಸರು ಬಂಧಿಸಿಲ್ಲ, ಆದರೆ ವಶಕ್ಕೆ ಪಡೆದು ಮಠಕ್ಕೆ ವಾಪಸ್‌ ಕರೆತಂದಿದ್ದಾರೆಂದು ವರದಿಯಾಗಿದೆ.

ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ನಡುವೆಯೆ “ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಭಾನುವಾರ ಪ್ರಶ್ನಿಸಿದಾಗ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎಂದಿದ್ದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎಂದು ತಿಳಿಸಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಸೂಚನೆ ನೀಡಿದ್ದಾರೆ.

ಅಟ್ರಾಸಿಟಿ ಪ್ರಕರಣ ದಾಖಲಿಸಲು ಆಗ್ರಹ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಮುರುಘಾ ಶರಣರು ಇಂದು ಭಕ್ತರನ್ನು ಉದ್ದೇಶಿಸಿ ಮಠದ ಆವರಣದಲ್ಲಿ ಮಾತನಾಡಿದ್ದಾರೆ. “ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಅದನ್ನು ಗೌರವಿಸುತ್ತೇನೆ. ಪಲಾಯನವಾದ ಮಾಡುವುದಿಲ್ಲ. ಎಲ್ಲ ತನಿಖೆಗೂ ಸಹಕಾರ ಕೊಡುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ. ಊಹಾಪೋಹಗಳಿಗೆ ಅವಕಾಶ ಇಲ್ಲ” ಎಂದಿದ್ದಾರೆ.

“ಶ್ರೀ ಮಠದ ಅಸಂಖ್ಯಾತ ಭಕ್ತರು, ಅಭಿಮಾನಿಗಳು ಊಹಾಪೋಹಗಳನ್ನು, ಗಾಳಿ ಸುದ್ದಿಗಳನ್ನು ನಂಬಬಾರದು. ಈ ನೆಲದ ಕಾನೂನಿಗೆ ಬೆಲೆ ಕೊಡಬೇಕು. ಒಂದು ಕಾಲದಲ್ಲಿ ಮುರುಘಾ ಮಠ ಚಲಿಸುವ ನ್ಯಾಯಾಲಯವಾಗಿತ್ತು” ಎಂದರು.

“ವಿದ್ಯಾರ್ಥಿಗಳನ್ನು ಒಳಗೊಂಡಂತೆ ಎಲ್ಲ ಜನಾಂಗದವರನ್ನು, ಎಲ್ಲಾ ವರ್ಗದವರನ್ನು, ಪ್ರೀತಿಯಿಂದ ಅಕ್ಕರೆಯಿಂದ ನೋಡಿಕೊಂಡಿದ್ದೇವೆ. ಒಂದು ಅಹಿತಕರವಾದ ಬೆಳವಣಿಗೆಯಾಗಿದೆ. ಅದರಿಂದ ಹೊರಗಡೆ ಬಂದೇ ಬರುತ್ತೇನೆ. ಎಲ್ಲರಿಗೆ ಶುಭವಾಗಲಿ” ಎಂದು ಆಶಿಸಿದರು.

“ಪ್ರವಾಹೋಪಾದಿಯಲ್ಲಿ ಜನರು ಮಠಕ್ಕೆ ಬರುತ್ತಾರೆ. ಮೊನ್ನೆಯಿಂದಲೂ ಲಕ್ಷೋಪಲಕ್ಷ ಜನರು ಮಠಕ್ಕೆ ಬರುತ್ತಿರುವುದು ಅತೀವ ಧೈರ್ಯವನ್ನು ಉಂಟು ಮಾಡಿದೆ. ಕಾನೂನುನನ್ನು ಗೌರವಿಸೋಣ. ಇಂತಹದೊಂದು ಅಭಿಮಾನದ ಚಿಲುಮೆ ಚುಮ್ಮಲು ಕಾರಣವಾದವರಿಗೂ ಧನ್ಯವಾದಗಳನ್ನು ಹೇಳುತ್ತೇವೆ. ಅಭಿಮಾನವನ್ನು ಜಾಗೃತಿಗೊಳಿಸಿದ್ದೇವೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ರಂಭಾಪುರಿ ಪೀಠಾಧೀಶ್ವರರ ಭೇಟಿ; ಮತ್ತೆ ಭುಗಿಲೆದ್ದ ಲಿಂಗಾಯತ ಧರ್ಮ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...