Homeಕರ್ನಾಟಕಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌‌ 10ರಂದು (ನಾಳೆ) ‘ಮಕ್ಕಳೊಡನೆ ನಾವು’ ಬೃಹತ್ ಜಾಥಾವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಈ ಕಾಲದ ಮಕ್ಕಳಿಗೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಎನ್ನುವ ಪ್ರಶ್ನೆ ಕಾಡುವಂತಾಗಿದೆ. ಇದರಿಂದ ಸುಮಾರು ಹೆಣ್ಣು ಮಕ್ಕಳು ನೊಂದು ಕಣ್ಣೀರಿಡುವಂತಾಗಿದೆ. ಈ ರೀತಿ ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ, ದೈರ್ಯ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಚಿತ್ರದುರ್ಗದಲ್ಲಿ “ಮಕ್ಕಳೊಡನೆ ನಾವು” ಎನ್ನುವ ಬೃಹತ್ ಜಾಥಾ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಕ್ಕಳೊಡನೆ ನಾವು” ಎಂಬ ಬೈಕ್‌ ಮೆರವಣಿಗೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ಸರ್ಕಲ್‌, ಬರಗೇರಮ್ಮ ದೇವಸ್ಥಾನದ ಹತ್ತಿರ, ಹೊಳಲ್ಕೆರೆ ರಸ್ತೆಯಿಂದ ಆರಂಭಗೊಂಡು ಚಿತ್ರದುರ್ಗದ ಮುಖ್ಯ ರಸ್ತೆಯ ಮೂಲಕ ಬಾಲ ಭವನ (CWC) ತಲುಪಲಿದೆ.

ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಅವರ ಸಮ್ಮುಖದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಸಂವೇದನಶೀಲ ಮನಸುಳ್ಳವರು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

ಪರಶು ಹಾಗೂ ಸ್ಟ್ಯಾನ್ಲಿಯವರ ಪತ್ರಿಕಾ ಹೇಳಿಕೆ

ಆತ್ಮೀಯ ಮಿತ್ರರೇ ಹಾಗೂ ಸಮಾನ ಮನಸ್ಕ ಪ್ರಗತಿಪರ, ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಂಡ ಸಂಘ ಸಂಸ್ಥೆಗಳ, ಜನಪರ ಸಂಘಟನೆಗಳ ಪದಾಧಿಕಾರಿಗಳೇ, ತಮಗೆಲ್ಲರಿಗೂ ಒಡನಾಡಿಯ ನಮಸ್ಕಾರಗಳು.ಇತ್ತೀಚೆಗೆ ತಳಮಟ್ಟದ, ದುರ್ಬಲ ಕುಟುಂಬಗಳಿಗೆ ಸೇರಿದ ಇಬ್ಬರು ಮುಗ್ಧ ಬಾಲಕಿಯರ ಮೇಲೆ ಎಸಗಲಾಗಿದ್ದ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದು ಅದನ್ನು ಕಾನೂನಿನ ಚೌಕಟ್ಟಿಗೆ ತರುವಲ್ಲಿ ನಿಮ್ಮೆಲ್ಲರಂತೆಯೇ ಮಕ್ಕಳ ಘನತೆಯುಕ್ತ ಬಾಳ್ವೆಗೆ ಹಂಬಲಿಸುವ ಒಡನಾಡಿಯು ಪ್ರಾಮಾಣಿಕವಾಗಿ ಶ್ರಮಿಸಿರುವುದನ್ನು ತಾವೆಲ್ಲರೂ ಗಮನಿಸಿ, ತಾರ್ಕಿಕವಾಗಿ ಚಿಂತಿಸಿ, ಸಕಾಲಿಕವಾಗಿ ನಮಗೂ, ನೊಂದ ಮಕ್ಕಳಿಗೂ ಬೆಂಬಲವನ್ನು ನೀಡಿರುತ್ತೀರಿ. ಅದಕ್ಕಾಗಿ ಅನಂತಾನಂತ ವಂದನೆಗಳು.

ಸ್ನೇಹಿತರೇ, ಈ ಒಂದು ಪ್ರಕರಣವು ಹಿಂದೆ ಘಟಿಸಿರುವ ನೂರಾರು ಭಯಾನಕ ಹಾಗೂ ಭೀಭತ್ಸ್ಯಕರವಾದ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣಗಳ ಗೋರಿಯನ್ನು ಬಗೆದು ತೆಗೆದು ಸಮಾಜದ ಮುಂದಿಟ್ಟಿದೆ. ನೂರಾರು ಹೆಂಗಳೆಯರು ಕರೆ ಮಾಡಿ, ನಮನ್ನು ಹಾರೈಸಿ, ಕಣ್ಣೀರು ಹಾಕಿ ತಮ್ಮ ಕಥೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನೊಂದ ಬಾಲಕಿಯರು ತಮ್ಮಂತೆಯೇ ಬಹಳಷ್ಟು ಮಕ್ಕಳಿಗೆ ಈ ದುರ್ಗತಿಯಾಗಿರುವುದನ್ನು ಹೇಳಿಕೊಂಡಿರುತ್ತಾರೆ. ಹಾಗಾಗಿ ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಆತ್ಮೀಯರೇ, ಈ ಪ್ರಕರಣಕ್ಕೆ ಮಿಡಿದು ರಾಜ್ಯ ಹಾಗೂ ದೇಶದ ಬಹಳಷ್ಟು ಮಾನವೀಯ ಮನಸುಗಳು ಹಾಗೂ ನಿಜವಾದ ಧಾರ್ಮಿಕರು ಸ್ಪಂದಿಸುತ್ತಿದ್ದಾರೆ. ಇದೊಂದು ಸಾಮಾಜಿಕ ಸಾಂಸ್ಕೃತಿಕ ಬದಲಾವಣೆಯನ್ನು ಉಂಟು ಮಾಡಿ, ನಿಜ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪರ್ವಕಾಲ.

ಇದನ್ನೂ ಓದಿರಿ:ಒಡನಾಡಿ’ ಮತಾಂತರ ಮಾಡುತ್ತಿದೆಯೇ? ಮುರುಘಾ ಮಠದ ಸಮಿತಿ ಸದಸ್ಯನ ಆರೋಪಕ್ಕೆ ಒಡನಾಡಿ ಮಡಿಲಲ್ಲಿ ಬೆಳೆದವರು ಹೇಳಿದ್ದೇನು?

ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ ಹಾಗೂ ನ್ಯಾಯ ದೊರಕಿಸುವ ಸಕಾಲ! ಹಾಗಾಗಿ ನಾವೆಲ್ಲರೂ ಒಟ್ಟಾಗಿ ಒಂದೇ ಧ್ವನಿಯಾಗಿ ನಿಲ್ಲಬೇಕಾಗಿದೆ. ನ್ಯಾಯ, ಸತ್ಯ ಹಾಗೂ ಮಕ್ಕಳ ಪರನಿಂತ ಸಾರ್ಥಕತೆಯನ್ನು ತಂದುಕೊಳ್ಳಬೇಕಾಗಿದೆ. ಆದುದರಿಂದ ನೊಂದ ಬಾಲಕಿಯರಿಗೆ ಸಾಂತ್ವನ ಹಾಗೂ ಅಭಯ ನೀಡಲು ಹಾಗೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಲು ರಾಜ್ಯದ ನಾನಾ ಕಡೆಗಳಿಂದ ಪ್ರಜ್ಞಾವಂತ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಸ್ವಜವಾಬ್ದಾರಿಯಿಂದ ದಿನಾಂಕ 10.9.2022 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ವೃತದಲ್ಲಿ ಸಮಾವೇಶ ಗೊಳ್ಳುತ್ತಿರುವ ಸಂದರ್ಭದಲ್ಲಿ ತಾವು ಹಾಗೂ ತಮ್ಮ ಸಂಗಡಿಗರೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹರಿದು ಬಂದು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂಬುದು ನಮ್ಮ ಹಂಬಲವಾಗಿದೆ.

ದಯಮಾಡಿ ಈ ವಿಚಾರವನ್ನು ಆದಷ್ಟು ಜನರಿಗೆ ತಿಳಿಸಿ. ಮಕ್ಕಳ ಪರವಾದ ಸಾಮಾಜಿಕ ಧ್ವನಿಯೊಂದು ಇತಿಹಾಸದಲ್ಲಿ ದಾಖಲಾಗಲಿ. ತಮ್ಮ ಮೂಲಕ ಮೌಲ್ಯಾಧಾರಿತ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯೊಂದು ಉದಯಿಸುವಂತಾಗಲಿ. ಅದರ ಯಶಸ್ಸಿನ ಕೃತಾರ್ಥ ಭಾವನೆ ನಮ್ಮೆಲ್ಲರದಾಗಲಿ ಎಂದು ಆಶಿಸುತ್ತಾ ಕಾರ್ಯ ಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ.

  • ಸ್ಟ್ಯಾನ್ಲಿ-ಪರಶು, ಒಡನಾಡಿ ಸೇವಾ ಸಂಸ್ಥೆ, ಮೈಸೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈ ಮೆರವಣಿಗೆ ಯಶಸ್ವಿಯಾಗಲಿ. ಮಕ್ಕಳ ಮೇಲಿನ ದೌರ್ಜನ್ಯ ಕೊನೆಕೊಳ್ಳಲಿ.

  2. ಸ್ಟ್ಯಾನ್ಲಿ ಹಾಗೂ ಪರಶು ಸರ್, ನಿಮ್ಮ ಕೆಲಸ ದೇವರು ಮೆಚ್ಚುವಂತಹದು. ವಿಶೇಷವಾಗಿ ಟಿವಿ ಕಾರ್ಯಕ್ರಮಗಳಲ್ಲಿ ಪರಶು ಸರ್ ಮಾತುಗಳನ್ನು ಕೇಳಿದ್ದೇನೆ. ಕಲ್ಲು ಹೃದಯಗಳನ್ನೂ ಕರಗಿಸಬಲ್ಲುದು ನಿಮ್ಮ ಮಾತುಗಳು. ಹೃದಯಕ್ಕೆ ತಟ್ಟುವಂತಹದು. ಭಗವಂತ ನಿಮ್ಮೊಂದಿಗಿದ್ನಾನೆ. ನಿಮ್ಮ ಕಾರ್ಯಕ್ಕೆ ಸದಾ ಜಯವಾಗಲಿ.

  3. I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

  4. Your comment is awaiting moderation
    I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...