Homeಕರ್ನಾಟಕಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌‌ 10ರಂದು (ನಾಳೆ) ‘ಮಕ್ಕಳೊಡನೆ ನಾವು’ ಬೃಹತ್ ಜಾಥಾವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಈ ಕಾಲದ ಮಕ್ಕಳಿಗೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಎನ್ನುವ ಪ್ರಶ್ನೆ ಕಾಡುವಂತಾಗಿದೆ. ಇದರಿಂದ ಸುಮಾರು ಹೆಣ್ಣು ಮಕ್ಕಳು ನೊಂದು ಕಣ್ಣೀರಿಡುವಂತಾಗಿದೆ. ಈ ರೀತಿ ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ, ದೈರ್ಯ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಚಿತ್ರದುರ್ಗದಲ್ಲಿ “ಮಕ್ಕಳೊಡನೆ ನಾವು” ಎನ್ನುವ ಬೃಹತ್ ಜಾಥಾ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಕ್ಕಳೊಡನೆ ನಾವು” ಎಂಬ ಬೈಕ್‌ ಮೆರವಣಿಗೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ಸರ್ಕಲ್‌, ಬರಗೇರಮ್ಮ ದೇವಸ್ಥಾನದ ಹತ್ತಿರ, ಹೊಳಲ್ಕೆರೆ ರಸ್ತೆಯಿಂದ ಆರಂಭಗೊಂಡು ಚಿತ್ರದುರ್ಗದ ಮುಖ್ಯ ರಸ್ತೆಯ ಮೂಲಕ ಬಾಲ ಭವನ (CWC) ತಲುಪಲಿದೆ.

ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಅವರ ಸಮ್ಮುಖದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಸಂವೇದನಶೀಲ ಮನಸುಳ್ಳವರು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

ಪರಶು ಹಾಗೂ ಸ್ಟ್ಯಾನ್ಲಿಯವರ ಪತ್ರಿಕಾ ಹೇಳಿಕೆ

ಆತ್ಮೀಯ ಮಿತ್ರರೇ ಹಾಗೂ ಸಮಾನ ಮನಸ್ಕ ಪ್ರಗತಿಪರ, ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಂಡ ಸಂಘ ಸಂಸ್ಥೆಗಳ, ಜನಪರ ಸಂಘಟನೆಗಳ ಪದಾಧಿಕಾರಿಗಳೇ, ತಮಗೆಲ್ಲರಿಗೂ ಒಡನಾಡಿಯ ನಮಸ್ಕಾರಗಳು.ಇತ್ತೀಚೆಗೆ ತಳಮಟ್ಟದ, ದುರ್ಬಲ ಕುಟುಂಬಗಳಿಗೆ ಸೇರಿದ ಇಬ್ಬರು ಮುಗ್ಧ ಬಾಲಕಿಯರ ಮೇಲೆ ಎಸಗಲಾಗಿದ್ದ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದು ಅದನ್ನು ಕಾನೂನಿನ ಚೌಕಟ್ಟಿಗೆ ತರುವಲ್ಲಿ ನಿಮ್ಮೆಲ್ಲರಂತೆಯೇ ಮಕ್ಕಳ ಘನತೆಯುಕ್ತ ಬಾಳ್ವೆಗೆ ಹಂಬಲಿಸುವ ಒಡನಾಡಿಯು ಪ್ರಾಮಾಣಿಕವಾಗಿ ಶ್ರಮಿಸಿರುವುದನ್ನು ತಾವೆಲ್ಲರೂ ಗಮನಿಸಿ, ತಾರ್ಕಿಕವಾಗಿ ಚಿಂತಿಸಿ, ಸಕಾಲಿಕವಾಗಿ ನಮಗೂ, ನೊಂದ ಮಕ್ಕಳಿಗೂ ಬೆಂಬಲವನ್ನು ನೀಡಿರುತ್ತೀರಿ. ಅದಕ್ಕಾಗಿ ಅನಂತಾನಂತ ವಂದನೆಗಳು.

ಸ್ನೇಹಿತರೇ, ಈ ಒಂದು ಪ್ರಕರಣವು ಹಿಂದೆ ಘಟಿಸಿರುವ ನೂರಾರು ಭಯಾನಕ ಹಾಗೂ ಭೀಭತ್ಸ್ಯಕರವಾದ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣಗಳ ಗೋರಿಯನ್ನು ಬಗೆದು ತೆಗೆದು ಸಮಾಜದ ಮುಂದಿಟ್ಟಿದೆ. ನೂರಾರು ಹೆಂಗಳೆಯರು ಕರೆ ಮಾಡಿ, ನಮನ್ನು ಹಾರೈಸಿ, ಕಣ್ಣೀರು ಹಾಕಿ ತಮ್ಮ ಕಥೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನೊಂದ ಬಾಲಕಿಯರು ತಮ್ಮಂತೆಯೇ ಬಹಳಷ್ಟು ಮಕ್ಕಳಿಗೆ ಈ ದುರ್ಗತಿಯಾಗಿರುವುದನ್ನು ಹೇಳಿಕೊಂಡಿರುತ್ತಾರೆ. ಹಾಗಾಗಿ ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಆತ್ಮೀಯರೇ, ಈ ಪ್ರಕರಣಕ್ಕೆ ಮಿಡಿದು ರಾಜ್ಯ ಹಾಗೂ ದೇಶದ ಬಹಳಷ್ಟು ಮಾನವೀಯ ಮನಸುಗಳು ಹಾಗೂ ನಿಜವಾದ ಧಾರ್ಮಿಕರು ಸ್ಪಂದಿಸುತ್ತಿದ್ದಾರೆ. ಇದೊಂದು ಸಾಮಾಜಿಕ ಸಾಂಸ್ಕೃತಿಕ ಬದಲಾವಣೆಯನ್ನು ಉಂಟು ಮಾಡಿ, ನಿಜ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪರ್ವಕಾಲ.

ಇದನ್ನೂ ಓದಿರಿ:ಒಡನಾಡಿ’ ಮತಾಂತರ ಮಾಡುತ್ತಿದೆಯೇ? ಮುರುಘಾ ಮಠದ ಸಮಿತಿ ಸದಸ್ಯನ ಆರೋಪಕ್ಕೆ ಒಡನಾಡಿ ಮಡಿಲಲ್ಲಿ ಬೆಳೆದವರು ಹೇಳಿದ್ದೇನು?

ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ ಹಾಗೂ ನ್ಯಾಯ ದೊರಕಿಸುವ ಸಕಾಲ! ಹಾಗಾಗಿ ನಾವೆಲ್ಲರೂ ಒಟ್ಟಾಗಿ ಒಂದೇ ಧ್ವನಿಯಾಗಿ ನಿಲ್ಲಬೇಕಾಗಿದೆ. ನ್ಯಾಯ, ಸತ್ಯ ಹಾಗೂ ಮಕ್ಕಳ ಪರನಿಂತ ಸಾರ್ಥಕತೆಯನ್ನು ತಂದುಕೊಳ್ಳಬೇಕಾಗಿದೆ. ಆದುದರಿಂದ ನೊಂದ ಬಾಲಕಿಯರಿಗೆ ಸಾಂತ್ವನ ಹಾಗೂ ಅಭಯ ನೀಡಲು ಹಾಗೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಲು ರಾಜ್ಯದ ನಾನಾ ಕಡೆಗಳಿಂದ ಪ್ರಜ್ಞಾವಂತ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಸ್ವಜವಾಬ್ದಾರಿಯಿಂದ ದಿನಾಂಕ 10.9.2022 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ವೃತದಲ್ಲಿ ಸಮಾವೇಶ ಗೊಳ್ಳುತ್ತಿರುವ ಸಂದರ್ಭದಲ್ಲಿ ತಾವು ಹಾಗೂ ತಮ್ಮ ಸಂಗಡಿಗರೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹರಿದು ಬಂದು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂಬುದು ನಮ್ಮ ಹಂಬಲವಾಗಿದೆ.

ದಯಮಾಡಿ ಈ ವಿಚಾರವನ್ನು ಆದಷ್ಟು ಜನರಿಗೆ ತಿಳಿಸಿ. ಮಕ್ಕಳ ಪರವಾದ ಸಾಮಾಜಿಕ ಧ್ವನಿಯೊಂದು ಇತಿಹಾಸದಲ್ಲಿ ದಾಖಲಾಗಲಿ. ತಮ್ಮ ಮೂಲಕ ಮೌಲ್ಯಾಧಾರಿತ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯೊಂದು ಉದಯಿಸುವಂತಾಗಲಿ. ಅದರ ಯಶಸ್ಸಿನ ಕೃತಾರ್ಥ ಭಾವನೆ ನಮ್ಮೆಲ್ಲರದಾಗಲಿ ಎಂದು ಆಶಿಸುತ್ತಾ ಕಾರ್ಯ ಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ.

  • ಸ್ಟ್ಯಾನ್ಲಿ-ಪರಶು, ಒಡನಾಡಿ ಸೇವಾ ಸಂಸ್ಥೆ, ಮೈಸೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈ ಮೆರವಣಿಗೆ ಯಶಸ್ವಿಯಾಗಲಿ. ಮಕ್ಕಳ ಮೇಲಿನ ದೌರ್ಜನ್ಯ ಕೊನೆಕೊಳ್ಳಲಿ.

  2. ಸ್ಟ್ಯಾನ್ಲಿ ಹಾಗೂ ಪರಶು ಸರ್, ನಿಮ್ಮ ಕೆಲಸ ದೇವರು ಮೆಚ್ಚುವಂತಹದು. ವಿಶೇಷವಾಗಿ ಟಿವಿ ಕಾರ್ಯಕ್ರಮಗಳಲ್ಲಿ ಪರಶು ಸರ್ ಮಾತುಗಳನ್ನು ಕೇಳಿದ್ದೇನೆ. ಕಲ್ಲು ಹೃದಯಗಳನ್ನೂ ಕರಗಿಸಬಲ್ಲುದು ನಿಮ್ಮ ಮಾತುಗಳು. ಹೃದಯಕ್ಕೆ ತಟ್ಟುವಂತಹದು. ಭಗವಂತ ನಿಮ್ಮೊಂದಿಗಿದ್ನಾನೆ. ನಿಮ್ಮ ಕಾರ್ಯಕ್ಕೆ ಸದಾ ಜಯವಾಗಲಿ.

  3. I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

  4. Your comment is awaiting moderation
    I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...