Homeಕರ್ನಾಟಕಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌‌ 10ರಂದು (ನಾಳೆ) ‘ಮಕ್ಕಳೊಡನೆ ನಾವು’ ಬೃಹತ್ ಜಾಥಾವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಈ ಕಾಲದ ಮಕ್ಕಳಿಗೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಎನ್ನುವ ಪ್ರಶ್ನೆ ಕಾಡುವಂತಾಗಿದೆ. ಇದರಿಂದ ಸುಮಾರು ಹೆಣ್ಣು ಮಕ್ಕಳು ನೊಂದು ಕಣ್ಣೀರಿಡುವಂತಾಗಿದೆ. ಈ ರೀತಿ ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ, ದೈರ್ಯ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಚಿತ್ರದುರ್ಗದಲ್ಲಿ “ಮಕ್ಕಳೊಡನೆ ನಾವು” ಎನ್ನುವ ಬೃಹತ್ ಜಾಥಾ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಕ್ಕಳೊಡನೆ ನಾವು” ಎಂಬ ಬೈಕ್‌ ಮೆರವಣಿಗೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ಸರ್ಕಲ್‌, ಬರಗೇರಮ್ಮ ದೇವಸ್ಥಾನದ ಹತ್ತಿರ, ಹೊಳಲ್ಕೆರೆ ರಸ್ತೆಯಿಂದ ಆರಂಭಗೊಂಡು ಚಿತ್ರದುರ್ಗದ ಮುಖ್ಯ ರಸ್ತೆಯ ಮೂಲಕ ಬಾಲ ಭವನ (CWC) ತಲುಪಲಿದೆ.

ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಅವರ ಸಮ್ಮುಖದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಸಂವೇದನಶೀಲ ಮನಸುಳ್ಳವರು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

ಪರಶು ಹಾಗೂ ಸ್ಟ್ಯಾನ್ಲಿಯವರ ಪತ್ರಿಕಾ ಹೇಳಿಕೆ

ಆತ್ಮೀಯ ಮಿತ್ರರೇ ಹಾಗೂ ಸಮಾನ ಮನಸ್ಕ ಪ್ರಗತಿಪರ, ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಂಡ ಸಂಘ ಸಂಸ್ಥೆಗಳ, ಜನಪರ ಸಂಘಟನೆಗಳ ಪದಾಧಿಕಾರಿಗಳೇ, ತಮಗೆಲ್ಲರಿಗೂ ಒಡನಾಡಿಯ ನಮಸ್ಕಾರಗಳು.ಇತ್ತೀಚೆಗೆ ತಳಮಟ್ಟದ, ದುರ್ಬಲ ಕುಟುಂಬಗಳಿಗೆ ಸೇರಿದ ಇಬ್ಬರು ಮುಗ್ಧ ಬಾಲಕಿಯರ ಮೇಲೆ ಎಸಗಲಾಗಿದ್ದ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದು ಅದನ್ನು ಕಾನೂನಿನ ಚೌಕಟ್ಟಿಗೆ ತರುವಲ್ಲಿ ನಿಮ್ಮೆಲ್ಲರಂತೆಯೇ ಮಕ್ಕಳ ಘನತೆಯುಕ್ತ ಬಾಳ್ವೆಗೆ ಹಂಬಲಿಸುವ ಒಡನಾಡಿಯು ಪ್ರಾಮಾಣಿಕವಾಗಿ ಶ್ರಮಿಸಿರುವುದನ್ನು ತಾವೆಲ್ಲರೂ ಗಮನಿಸಿ, ತಾರ್ಕಿಕವಾಗಿ ಚಿಂತಿಸಿ, ಸಕಾಲಿಕವಾಗಿ ನಮಗೂ, ನೊಂದ ಮಕ್ಕಳಿಗೂ ಬೆಂಬಲವನ್ನು ನೀಡಿರುತ್ತೀರಿ. ಅದಕ್ಕಾಗಿ ಅನಂತಾನಂತ ವಂದನೆಗಳು.

ಸ್ನೇಹಿತರೇ, ಈ ಒಂದು ಪ್ರಕರಣವು ಹಿಂದೆ ಘಟಿಸಿರುವ ನೂರಾರು ಭಯಾನಕ ಹಾಗೂ ಭೀಭತ್ಸ್ಯಕರವಾದ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣಗಳ ಗೋರಿಯನ್ನು ಬಗೆದು ತೆಗೆದು ಸಮಾಜದ ಮುಂದಿಟ್ಟಿದೆ. ನೂರಾರು ಹೆಂಗಳೆಯರು ಕರೆ ಮಾಡಿ, ನಮನ್ನು ಹಾರೈಸಿ, ಕಣ್ಣೀರು ಹಾಕಿ ತಮ್ಮ ಕಥೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನೊಂದ ಬಾಲಕಿಯರು ತಮ್ಮಂತೆಯೇ ಬಹಳಷ್ಟು ಮಕ್ಕಳಿಗೆ ಈ ದುರ್ಗತಿಯಾಗಿರುವುದನ್ನು ಹೇಳಿಕೊಂಡಿರುತ್ತಾರೆ. ಹಾಗಾಗಿ ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಆತ್ಮೀಯರೇ, ಈ ಪ್ರಕರಣಕ್ಕೆ ಮಿಡಿದು ರಾಜ್ಯ ಹಾಗೂ ದೇಶದ ಬಹಳಷ್ಟು ಮಾನವೀಯ ಮನಸುಗಳು ಹಾಗೂ ನಿಜವಾದ ಧಾರ್ಮಿಕರು ಸ್ಪಂದಿಸುತ್ತಿದ್ದಾರೆ. ಇದೊಂದು ಸಾಮಾಜಿಕ ಸಾಂಸ್ಕೃತಿಕ ಬದಲಾವಣೆಯನ್ನು ಉಂಟು ಮಾಡಿ, ನಿಜ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪರ್ವಕಾಲ.

ಇದನ್ನೂ ಓದಿರಿ:ಒಡನಾಡಿ’ ಮತಾಂತರ ಮಾಡುತ್ತಿದೆಯೇ? ಮುರುಘಾ ಮಠದ ಸಮಿತಿ ಸದಸ್ಯನ ಆರೋಪಕ್ಕೆ ಒಡನಾಡಿ ಮಡಿಲಲ್ಲಿ ಬೆಳೆದವರು ಹೇಳಿದ್ದೇನು?

ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ ಹಾಗೂ ನ್ಯಾಯ ದೊರಕಿಸುವ ಸಕಾಲ! ಹಾಗಾಗಿ ನಾವೆಲ್ಲರೂ ಒಟ್ಟಾಗಿ ಒಂದೇ ಧ್ವನಿಯಾಗಿ ನಿಲ್ಲಬೇಕಾಗಿದೆ. ನ್ಯಾಯ, ಸತ್ಯ ಹಾಗೂ ಮಕ್ಕಳ ಪರನಿಂತ ಸಾರ್ಥಕತೆಯನ್ನು ತಂದುಕೊಳ್ಳಬೇಕಾಗಿದೆ. ಆದುದರಿಂದ ನೊಂದ ಬಾಲಕಿಯರಿಗೆ ಸಾಂತ್ವನ ಹಾಗೂ ಅಭಯ ನೀಡಲು ಹಾಗೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಲು ರಾಜ್ಯದ ನಾನಾ ಕಡೆಗಳಿಂದ ಪ್ರಜ್ಞಾವಂತ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಸ್ವಜವಾಬ್ದಾರಿಯಿಂದ ದಿನಾಂಕ 10.9.2022 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ವೃತದಲ್ಲಿ ಸಮಾವೇಶ ಗೊಳ್ಳುತ್ತಿರುವ ಸಂದರ್ಭದಲ್ಲಿ ತಾವು ಹಾಗೂ ತಮ್ಮ ಸಂಗಡಿಗರೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹರಿದು ಬಂದು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂಬುದು ನಮ್ಮ ಹಂಬಲವಾಗಿದೆ.

ದಯಮಾಡಿ ಈ ವಿಚಾರವನ್ನು ಆದಷ್ಟು ಜನರಿಗೆ ತಿಳಿಸಿ. ಮಕ್ಕಳ ಪರವಾದ ಸಾಮಾಜಿಕ ಧ್ವನಿಯೊಂದು ಇತಿಹಾಸದಲ್ಲಿ ದಾಖಲಾಗಲಿ. ತಮ್ಮ ಮೂಲಕ ಮೌಲ್ಯಾಧಾರಿತ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯೊಂದು ಉದಯಿಸುವಂತಾಗಲಿ. ಅದರ ಯಶಸ್ಸಿನ ಕೃತಾರ್ಥ ಭಾವನೆ ನಮ್ಮೆಲ್ಲರದಾಗಲಿ ಎಂದು ಆಶಿಸುತ್ತಾ ಕಾರ್ಯ ಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ.

  • ಸ್ಟ್ಯಾನ್ಲಿ-ಪರಶು, ಒಡನಾಡಿ ಸೇವಾ ಸಂಸ್ಥೆ, ಮೈಸೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈ ಮೆರವಣಿಗೆ ಯಶಸ್ವಿಯಾಗಲಿ. ಮಕ್ಕಳ ಮೇಲಿನ ದೌರ್ಜನ್ಯ ಕೊನೆಕೊಳ್ಳಲಿ.

  2. ಸ್ಟ್ಯಾನ್ಲಿ ಹಾಗೂ ಪರಶು ಸರ್, ನಿಮ್ಮ ಕೆಲಸ ದೇವರು ಮೆಚ್ಚುವಂತಹದು. ವಿಶೇಷವಾಗಿ ಟಿವಿ ಕಾರ್ಯಕ್ರಮಗಳಲ್ಲಿ ಪರಶು ಸರ್ ಮಾತುಗಳನ್ನು ಕೇಳಿದ್ದೇನೆ. ಕಲ್ಲು ಹೃದಯಗಳನ್ನೂ ಕರಗಿಸಬಲ್ಲುದು ನಿಮ್ಮ ಮಾತುಗಳು. ಹೃದಯಕ್ಕೆ ತಟ್ಟುವಂತಹದು. ಭಗವಂತ ನಿಮ್ಮೊಂದಿಗಿದ್ನಾನೆ. ನಿಮ್ಮ ಕಾರ್ಯಕ್ಕೆ ಸದಾ ಜಯವಾಗಲಿ.

  3. I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

  4. Your comment is awaiting moderation
    I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...