Homeಕರ್ನಾಟಕಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌‌ 10ರಂದು (ನಾಳೆ) ‘ಮಕ್ಕಳೊಡನೆ ನಾವು’ ಬೃಹತ್ ಜಾಥಾವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಈ ಕಾಲದ ಮಕ್ಕಳಿಗೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಎನ್ನುವ ಪ್ರಶ್ನೆ ಕಾಡುವಂತಾಗಿದೆ. ಇದರಿಂದ ಸುಮಾರು ಹೆಣ್ಣು ಮಕ್ಕಳು ನೊಂದು ಕಣ್ಣೀರಿಡುವಂತಾಗಿದೆ. ಈ ರೀತಿ ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ, ದೈರ್ಯ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಚಿತ್ರದುರ್ಗದಲ್ಲಿ “ಮಕ್ಕಳೊಡನೆ ನಾವು” ಎನ್ನುವ ಬೃಹತ್ ಜಾಥಾ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಕ್ಕಳೊಡನೆ ನಾವು” ಎಂಬ ಬೈಕ್‌ ಮೆರವಣಿಗೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ಸರ್ಕಲ್‌, ಬರಗೇರಮ್ಮ ದೇವಸ್ಥಾನದ ಹತ್ತಿರ, ಹೊಳಲ್ಕೆರೆ ರಸ್ತೆಯಿಂದ ಆರಂಭಗೊಂಡು ಚಿತ್ರದುರ್ಗದ ಮುಖ್ಯ ರಸ್ತೆಯ ಮೂಲಕ ಬಾಲ ಭವನ (CWC) ತಲುಪಲಿದೆ.

ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಅವರ ಸಮ್ಮುಖದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಸಂವೇದನಶೀಲ ಮನಸುಳ್ಳವರು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

ಪರಶು ಹಾಗೂ ಸ್ಟ್ಯಾನ್ಲಿಯವರ ಪತ್ರಿಕಾ ಹೇಳಿಕೆ

ಆತ್ಮೀಯ ಮಿತ್ರರೇ ಹಾಗೂ ಸಮಾನ ಮನಸ್ಕ ಪ್ರಗತಿಪರ, ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಂಡ ಸಂಘ ಸಂಸ್ಥೆಗಳ, ಜನಪರ ಸಂಘಟನೆಗಳ ಪದಾಧಿಕಾರಿಗಳೇ, ತಮಗೆಲ್ಲರಿಗೂ ಒಡನಾಡಿಯ ನಮಸ್ಕಾರಗಳು.ಇತ್ತೀಚೆಗೆ ತಳಮಟ್ಟದ, ದುರ್ಬಲ ಕುಟುಂಬಗಳಿಗೆ ಸೇರಿದ ಇಬ್ಬರು ಮುಗ್ಧ ಬಾಲಕಿಯರ ಮೇಲೆ ಎಸಗಲಾಗಿದ್ದ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದು ಅದನ್ನು ಕಾನೂನಿನ ಚೌಕಟ್ಟಿಗೆ ತರುವಲ್ಲಿ ನಿಮ್ಮೆಲ್ಲರಂತೆಯೇ ಮಕ್ಕಳ ಘನತೆಯುಕ್ತ ಬಾಳ್ವೆಗೆ ಹಂಬಲಿಸುವ ಒಡನಾಡಿಯು ಪ್ರಾಮಾಣಿಕವಾಗಿ ಶ್ರಮಿಸಿರುವುದನ್ನು ತಾವೆಲ್ಲರೂ ಗಮನಿಸಿ, ತಾರ್ಕಿಕವಾಗಿ ಚಿಂತಿಸಿ, ಸಕಾಲಿಕವಾಗಿ ನಮಗೂ, ನೊಂದ ಮಕ್ಕಳಿಗೂ ಬೆಂಬಲವನ್ನು ನೀಡಿರುತ್ತೀರಿ. ಅದಕ್ಕಾಗಿ ಅನಂತಾನಂತ ವಂದನೆಗಳು.

ಸ್ನೇಹಿತರೇ, ಈ ಒಂದು ಪ್ರಕರಣವು ಹಿಂದೆ ಘಟಿಸಿರುವ ನೂರಾರು ಭಯಾನಕ ಹಾಗೂ ಭೀಭತ್ಸ್ಯಕರವಾದ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣಗಳ ಗೋರಿಯನ್ನು ಬಗೆದು ತೆಗೆದು ಸಮಾಜದ ಮುಂದಿಟ್ಟಿದೆ. ನೂರಾರು ಹೆಂಗಳೆಯರು ಕರೆ ಮಾಡಿ, ನಮನ್ನು ಹಾರೈಸಿ, ಕಣ್ಣೀರು ಹಾಕಿ ತಮ್ಮ ಕಥೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನೊಂದ ಬಾಲಕಿಯರು ತಮ್ಮಂತೆಯೇ ಬಹಳಷ್ಟು ಮಕ್ಕಳಿಗೆ ಈ ದುರ್ಗತಿಯಾಗಿರುವುದನ್ನು ಹೇಳಿಕೊಂಡಿರುತ್ತಾರೆ. ಹಾಗಾಗಿ ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಆತ್ಮೀಯರೇ, ಈ ಪ್ರಕರಣಕ್ಕೆ ಮಿಡಿದು ರಾಜ್ಯ ಹಾಗೂ ದೇಶದ ಬಹಳಷ್ಟು ಮಾನವೀಯ ಮನಸುಗಳು ಹಾಗೂ ನಿಜವಾದ ಧಾರ್ಮಿಕರು ಸ್ಪಂದಿಸುತ್ತಿದ್ದಾರೆ. ಇದೊಂದು ಸಾಮಾಜಿಕ ಸಾಂಸ್ಕೃತಿಕ ಬದಲಾವಣೆಯನ್ನು ಉಂಟು ಮಾಡಿ, ನಿಜ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪರ್ವಕಾಲ.

ಇದನ್ನೂ ಓದಿರಿ:ಒಡನಾಡಿ’ ಮತಾಂತರ ಮಾಡುತ್ತಿದೆಯೇ? ಮುರುಘಾ ಮಠದ ಸಮಿತಿ ಸದಸ್ಯನ ಆರೋಪಕ್ಕೆ ಒಡನಾಡಿ ಮಡಿಲಲ್ಲಿ ಬೆಳೆದವರು ಹೇಳಿದ್ದೇನು?

ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ ಹಾಗೂ ನ್ಯಾಯ ದೊರಕಿಸುವ ಸಕಾಲ! ಹಾಗಾಗಿ ನಾವೆಲ್ಲರೂ ಒಟ್ಟಾಗಿ ಒಂದೇ ಧ್ವನಿಯಾಗಿ ನಿಲ್ಲಬೇಕಾಗಿದೆ. ನ್ಯಾಯ, ಸತ್ಯ ಹಾಗೂ ಮಕ್ಕಳ ಪರನಿಂತ ಸಾರ್ಥಕತೆಯನ್ನು ತಂದುಕೊಳ್ಳಬೇಕಾಗಿದೆ. ಆದುದರಿಂದ ನೊಂದ ಬಾಲಕಿಯರಿಗೆ ಸಾಂತ್ವನ ಹಾಗೂ ಅಭಯ ನೀಡಲು ಹಾಗೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಲು ರಾಜ್ಯದ ನಾನಾ ಕಡೆಗಳಿಂದ ಪ್ರಜ್ಞಾವಂತ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಸ್ವಜವಾಬ್ದಾರಿಯಿಂದ ದಿನಾಂಕ 10.9.2022 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ವೃತದಲ್ಲಿ ಸಮಾವೇಶ ಗೊಳ್ಳುತ್ತಿರುವ ಸಂದರ್ಭದಲ್ಲಿ ತಾವು ಹಾಗೂ ತಮ್ಮ ಸಂಗಡಿಗರೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹರಿದು ಬಂದು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂಬುದು ನಮ್ಮ ಹಂಬಲವಾಗಿದೆ.

ದಯಮಾಡಿ ಈ ವಿಚಾರವನ್ನು ಆದಷ್ಟು ಜನರಿಗೆ ತಿಳಿಸಿ. ಮಕ್ಕಳ ಪರವಾದ ಸಾಮಾಜಿಕ ಧ್ವನಿಯೊಂದು ಇತಿಹಾಸದಲ್ಲಿ ದಾಖಲಾಗಲಿ. ತಮ್ಮ ಮೂಲಕ ಮೌಲ್ಯಾಧಾರಿತ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯೊಂದು ಉದಯಿಸುವಂತಾಗಲಿ. ಅದರ ಯಶಸ್ಸಿನ ಕೃತಾರ್ಥ ಭಾವನೆ ನಮ್ಮೆಲ್ಲರದಾಗಲಿ ಎಂದು ಆಶಿಸುತ್ತಾ ಕಾರ್ಯ ಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ.

  • ಸ್ಟ್ಯಾನ್ಲಿ-ಪರಶು, ಒಡನಾಡಿ ಸೇವಾ ಸಂಸ್ಥೆ, ಮೈಸೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈ ಮೆರವಣಿಗೆ ಯಶಸ್ವಿಯಾಗಲಿ. ಮಕ್ಕಳ ಮೇಲಿನ ದೌರ್ಜನ್ಯ ಕೊನೆಕೊಳ್ಳಲಿ.

  2. ಸ್ಟ್ಯಾನ್ಲಿ ಹಾಗೂ ಪರಶು ಸರ್, ನಿಮ್ಮ ಕೆಲಸ ದೇವರು ಮೆಚ್ಚುವಂತಹದು. ವಿಶೇಷವಾಗಿ ಟಿವಿ ಕಾರ್ಯಕ್ರಮಗಳಲ್ಲಿ ಪರಶು ಸರ್ ಮಾತುಗಳನ್ನು ಕೇಳಿದ್ದೇನೆ. ಕಲ್ಲು ಹೃದಯಗಳನ್ನೂ ಕರಗಿಸಬಲ್ಲುದು ನಿಮ್ಮ ಮಾತುಗಳು. ಹೃದಯಕ್ಕೆ ತಟ್ಟುವಂತಹದು. ಭಗವಂತ ನಿಮ್ಮೊಂದಿಗಿದ್ನಾನೆ. ನಿಮ್ಮ ಕಾರ್ಯಕ್ಕೆ ಸದಾ ಜಯವಾಗಲಿ.

  3. I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

  4. Your comment is awaiting moderation
    I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...