Homeಕರ್ನಾಟಕಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ

- Advertisement -
- Advertisement -

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌‌ 10ರಂದು (ನಾಳೆ) ‘ಮಕ್ಕಳೊಡನೆ ನಾವು’ ಬೃಹತ್ ಜಾಥಾವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಈ ಕಾಲದ ಮಕ್ಕಳಿಗೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಎನ್ನುವ ಪ್ರಶ್ನೆ ಕಾಡುವಂತಾಗಿದೆ. ಇದರಿಂದ ಸುಮಾರು ಹೆಣ್ಣು ಮಕ್ಕಳು ನೊಂದು ಕಣ್ಣೀರಿಡುವಂತಾಗಿದೆ. ಈ ರೀತಿ ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ, ದೈರ್ಯ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಚಿತ್ರದುರ್ಗದಲ್ಲಿ “ಮಕ್ಕಳೊಡನೆ ನಾವು” ಎನ್ನುವ ಬೃಹತ್ ಜಾಥಾ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಕ್ಕಳೊಡನೆ ನಾವು” ಎಂಬ ಬೈಕ್‌ ಮೆರವಣಿಗೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ಸರ್ಕಲ್‌, ಬರಗೇರಮ್ಮ ದೇವಸ್ಥಾನದ ಹತ್ತಿರ, ಹೊಳಲ್ಕೆರೆ ರಸ್ತೆಯಿಂದ ಆರಂಭಗೊಂಡು ಚಿತ್ರದುರ್ಗದ ಮುಖ್ಯ ರಸ್ತೆಯ ಮೂಲಕ ಬಾಲ ಭವನ (CWC) ತಲುಪಲಿದೆ.

ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಅವರ ಸಮ್ಮುಖದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಿಂದ ಸಂವೇದನಶೀಲ ಮನಸುಳ್ಳವರು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

ಪರಶು ಹಾಗೂ ಸ್ಟ್ಯಾನ್ಲಿಯವರ ಪತ್ರಿಕಾ ಹೇಳಿಕೆ

ಆತ್ಮೀಯ ಮಿತ್ರರೇ ಹಾಗೂ ಸಮಾನ ಮನಸ್ಕ ಪ್ರಗತಿಪರ, ಸಾಮಾಜಿಕ ಬದಲಾವಣೆಯಲ್ಲಿ ತೊಡಗಿಸಿಕೊಂಡ ಸಂಘ ಸಂಸ್ಥೆಗಳ, ಜನಪರ ಸಂಘಟನೆಗಳ ಪದಾಧಿಕಾರಿಗಳೇ, ತಮಗೆಲ್ಲರಿಗೂ ಒಡನಾಡಿಯ ನಮಸ್ಕಾರಗಳು.ಇತ್ತೀಚೆಗೆ ತಳಮಟ್ಟದ, ದುರ್ಬಲ ಕುಟುಂಬಗಳಿಗೆ ಸೇರಿದ ಇಬ್ಬರು ಮುಗ್ಧ ಬಾಲಕಿಯರ ಮೇಲೆ ಎಸಗಲಾಗಿದ್ದ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದು ಅದನ್ನು ಕಾನೂನಿನ ಚೌಕಟ್ಟಿಗೆ ತರುವಲ್ಲಿ ನಿಮ್ಮೆಲ್ಲರಂತೆಯೇ ಮಕ್ಕಳ ಘನತೆಯುಕ್ತ ಬಾಳ್ವೆಗೆ ಹಂಬಲಿಸುವ ಒಡನಾಡಿಯು ಪ್ರಾಮಾಣಿಕವಾಗಿ ಶ್ರಮಿಸಿರುವುದನ್ನು ತಾವೆಲ್ಲರೂ ಗಮನಿಸಿ, ತಾರ್ಕಿಕವಾಗಿ ಚಿಂತಿಸಿ, ಸಕಾಲಿಕವಾಗಿ ನಮಗೂ, ನೊಂದ ಮಕ್ಕಳಿಗೂ ಬೆಂಬಲವನ್ನು ನೀಡಿರುತ್ತೀರಿ. ಅದಕ್ಕಾಗಿ ಅನಂತಾನಂತ ವಂದನೆಗಳು.

ಸ್ನೇಹಿತರೇ, ಈ ಒಂದು ಪ್ರಕರಣವು ಹಿಂದೆ ಘಟಿಸಿರುವ ನೂರಾರು ಭಯಾನಕ ಹಾಗೂ ಭೀಭತ್ಸ್ಯಕರವಾದ ಮಕ್ಕಳ ಮತ್ತು ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣಗಳ ಗೋರಿಯನ್ನು ಬಗೆದು ತೆಗೆದು ಸಮಾಜದ ಮುಂದಿಟ್ಟಿದೆ. ನೂರಾರು ಹೆಂಗಳೆಯರು ಕರೆ ಮಾಡಿ, ನಮನ್ನು ಹಾರೈಸಿ, ಕಣ್ಣೀರು ಹಾಕಿ ತಮ್ಮ ಕಥೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನೊಂದ ಬಾಲಕಿಯರು ತಮ್ಮಂತೆಯೇ ಬಹಳಷ್ಟು ಮಕ್ಕಳಿಗೆ ಈ ದುರ್ಗತಿಯಾಗಿರುವುದನ್ನು ಹೇಳಿಕೊಂಡಿರುತ್ತಾರೆ. ಹಾಗಾಗಿ ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಆತ್ಮೀಯರೇ, ಈ ಪ್ರಕರಣಕ್ಕೆ ಮಿಡಿದು ರಾಜ್ಯ ಹಾಗೂ ದೇಶದ ಬಹಳಷ್ಟು ಮಾನವೀಯ ಮನಸುಗಳು ಹಾಗೂ ನಿಜವಾದ ಧಾರ್ಮಿಕರು ಸ್ಪಂದಿಸುತ್ತಿದ್ದಾರೆ. ಇದೊಂದು ಸಾಮಾಜಿಕ ಸಾಂಸ್ಕೃತಿಕ ಬದಲಾವಣೆಯನ್ನು ಉಂಟು ಮಾಡಿ, ನಿಜ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪರ್ವಕಾಲ.

ಇದನ್ನೂ ಓದಿರಿ:ಒಡನಾಡಿ’ ಮತಾಂತರ ಮಾಡುತ್ತಿದೆಯೇ? ಮುರುಘಾ ಮಠದ ಸಮಿತಿ ಸದಸ್ಯನ ಆರೋಪಕ್ಕೆ ಒಡನಾಡಿ ಮಡಿಲಲ್ಲಿ ಬೆಳೆದವರು ಹೇಳಿದ್ದೇನು?

ಬಲಿಷ್ಠರ ಮುಷ್ಟಿಗೆ ಸಿಕ್ಕಿ, ನೊಂದು, ಉಸಿರುಗಟ್ಟಿ ಬದುಕುತ್ತಿರುವ ಎಳೆಯ ಜೀವಿಗಳಿಗೆ ಸಾಂತ್ವನ ಹಾಗೂ ನ್ಯಾಯ ದೊರಕಿಸುವ ಸಕಾಲ! ಹಾಗಾಗಿ ನಾವೆಲ್ಲರೂ ಒಟ್ಟಾಗಿ ಒಂದೇ ಧ್ವನಿಯಾಗಿ ನಿಲ್ಲಬೇಕಾಗಿದೆ. ನ್ಯಾಯ, ಸತ್ಯ ಹಾಗೂ ಮಕ್ಕಳ ಪರನಿಂತ ಸಾರ್ಥಕತೆಯನ್ನು ತಂದುಕೊಳ್ಳಬೇಕಾಗಿದೆ. ಆದುದರಿಂದ ನೊಂದ ಬಾಲಕಿಯರಿಗೆ ಸಾಂತ್ವನ ಹಾಗೂ ಅಭಯ ನೀಡಲು ಹಾಗೂ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹಿಸಲು ರಾಜ್ಯದ ನಾನಾ ಕಡೆಗಳಿಂದ ಪ್ರಜ್ಞಾವಂತ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಸ್ವಜವಾಬ್ದಾರಿಯಿಂದ ದಿನಾಂಕ 10.9.2022 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಕನಕ ವೃತದಲ್ಲಿ ಸಮಾವೇಶ ಗೊಳ್ಳುತ್ತಿರುವ ಸಂದರ್ಭದಲ್ಲಿ ತಾವು ಹಾಗೂ ತಮ್ಮ ಸಂಗಡಿಗರೆಲ್ಲರೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಹರಿದು ಬಂದು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂಬುದು ನಮ್ಮ ಹಂಬಲವಾಗಿದೆ.

ದಯಮಾಡಿ ಈ ವಿಚಾರವನ್ನು ಆದಷ್ಟು ಜನರಿಗೆ ತಿಳಿಸಿ. ಮಕ್ಕಳ ಪರವಾದ ಸಾಮಾಜಿಕ ಧ್ವನಿಯೊಂದು ಇತಿಹಾಸದಲ್ಲಿ ದಾಖಲಾಗಲಿ. ತಮ್ಮ ಮೂಲಕ ಮೌಲ್ಯಾಧಾರಿತ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯೊಂದು ಉದಯಿಸುವಂತಾಗಲಿ. ಅದರ ಯಶಸ್ಸಿನ ಕೃತಾರ್ಥ ಭಾವನೆ ನಮ್ಮೆಲ್ಲರದಾಗಲಿ ಎಂದು ಆಶಿಸುತ್ತಾ ಕಾರ್ಯ ಕ್ರಮಕ್ಕೆ ಆಹ್ವಾನಿಸುತ್ತಿದ್ದೇವೆ.

  • ಸ್ಟ್ಯಾನ್ಲಿ-ಪರಶು, ಒಡನಾಡಿ ಸೇವಾ ಸಂಸ್ಥೆ, ಮೈಸೂರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈ ಮೆರವಣಿಗೆ ಯಶಸ್ವಿಯಾಗಲಿ. ಮಕ್ಕಳ ಮೇಲಿನ ದೌರ್ಜನ್ಯ ಕೊನೆಕೊಳ್ಳಲಿ.

  2. ಸ್ಟ್ಯಾನ್ಲಿ ಹಾಗೂ ಪರಶು ಸರ್, ನಿಮ್ಮ ಕೆಲಸ ದೇವರು ಮೆಚ್ಚುವಂತಹದು. ವಿಶೇಷವಾಗಿ ಟಿವಿ ಕಾರ್ಯಕ್ರಮಗಳಲ್ಲಿ ಪರಶು ಸರ್ ಮಾತುಗಳನ್ನು ಕೇಳಿದ್ದೇನೆ. ಕಲ್ಲು ಹೃದಯಗಳನ್ನೂ ಕರಗಿಸಬಲ್ಲುದು ನಿಮ್ಮ ಮಾತುಗಳು. ಹೃದಯಕ್ಕೆ ತಟ್ಟುವಂತಹದು. ಭಗವಂತ ನಿಮ್ಮೊಂದಿಗಿದ್ನಾನೆ. ನಿಮ್ಮ ಕಾರ್ಯಕ್ಕೆ ಸದಾ ಜಯವಾಗಲಿ.

  3. I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

  4. Your comment is awaiting moderation
    I am with this campaign. TV & PRESS medias are restrained from judiciary, through this network work only we have to advance towards the justice for innocent children.

    Mruthyunjaya EX-ARMY Retd. Principal,
    Ex-CEO of Murugharajendra Vidyapeetha & Anatha Sevashrama, Malladihalli.
    9980895885-9448372888
    msm. [email protected]

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...