Homeಕರ್ನಾಟಕಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

ಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

- Advertisement -
- Advertisement -

ಚೌಕಿದಾರರು ಎಂದೇಳಿಕೊಂಡು ಓಡಾಡುತ್ತಿರುವ ಬಿಜೆಪಿ ನಾಯಕರ ಹಗರಣಗಳು ಒಂದೊದೇ ಹೊರಬರುತ್ತಿದ್ದು ಈಗ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿಧರರಾವ್ ಮೇಲೆ ಕೇಸ್ ಬುಕ್ ಮಾಡಲು ಕೋರ್ಟ್ ಆದೇಶ ನೀಡಿದೆ.

ಇದು ನಿಜಕ್ಕೂ ಗಾಬರಿಗೊಳಿಸುವ ಆರೋಪ. ಕರ್ನಾಟಕದ ಉಸ್ತುವಾರಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ ರಾವ್ ಆರೋಪಿಗಳಲ್ಲೊಬ್ಬರು. ಇರುವ ಆರೋಪವಾದರೂ ಎಂಥದ್ದು? ನಿಮ್ಮನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ನಿಗಮ/ಮಂಡಳಿಯೊಂದರ ಅಧ್ಯಕ್ಷನನ್ನಾಗಿಸುತ್ತೇವೆಂದು 2.17 ಕೋಟಿ ರೂ.ಗಳನ್ನು ಪಡೆದಿದ್ದಾರೆ ಮತ್ತು ಆ ರೀತಿ ನೇಮಕ ಮಾಡಿದ ಆದೇಶವಿದ್ದಂತೆ ಬರೆಯಲಾಗಿದ್ದ ಪತ್ರಕ್ಕೆ ಅಂದು ವಾಣಿಜ್ಯ ಇಲಾಖೆಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್‍ರ ಫೋರ್ಜರಿ ಸಹಿಯನ್ನೂ ಮಾಡಲಾಗಿತ್ತೆಂಬ ಆರೋಪ. ಈ ಪ್ರಕರಣದಲ್ಲಿ ಮುರಳಿಧರರಾವ್ ಮತ್ತಿತರರ ಮೇಲೆ ಐಪಿಸಿ ಸೆಕ್ಷನ್ 406 (ನಂಬಿಕೆಗೆ ಕ್ರಿಮಿನಲ್ ದ್ರೋಹ), 420 (ವಂಚನೆ), 468, 471 (ಫೋರ್ಜರಿ), 506 (ಕ್ರಿಮಿನಲ್ ಬೆದರಿಕೆ) ಮತ್ತು 120-ಬಿ (ಕ್ರಿಮಿನಲ್ ಸಂಚು) ಮತ್ತು ಸಿಆರ್‍ಪಿಸಿಯ ಸೆಕ್ಷನ್ 156(3)ರ ಅಡಿಯಲ್ಲಿ ಮೊಕದ್ದಮೆಯ ದಾಖಲು ಮಾಡಲಾಗಿದೆ.

ತೆಲಂಗಾಣದ ಚಂಪಾಪೇಟೆಯ ನಿವಾಸಿ ಮಹಿಪಾಲ್ ರೆಡ್ಡಿಯವರ ಪತ್ನಿ ಟಿ.ಪ್ರವರ್ಣಾ ರೆಡ್ಡಿಯವರು ನೀಡಿದ ಈ ದೂರನ್ನು ಹೈದ್ರಾಬಾದ್‍ನ ಸರೂರ್‍ನಗರ ಠಾಣೆಯಲ್ಲಿ ದಾಖಲಿಸಲಾಗಿದೆ. ಸದರಿ ಎಫ್‍ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆಯೆಂಬುದು ಗಮನಾರ್ಹ. ದೂರುದಾರರ ಪ್ರಕಾರ 2015ರಲ್ಲೇ ಈಶ್ವರ್ ರೆಡ್ಡಿ, ಕೃಷ್ಣ ಕಿಶೋರ್ ಎಂಬುವವರು ಮುರಳೀಧರರಾವ್‍ರಲ್ಲಿ ಕರೆದುಕೊಂಡು ಹೋಗಿ ಈ ಡೀಲ್ ಕುದುರಿಸಿದರು. ಇದರಲ್ಲಿ ಸ್ಥಳೀಯ ಬಿಜೆಪಿ ನಾಯಕ ಮಂಡ ರಾಮಚಂದ್ರ ರೆಡ್ಡಿ ಮತ್ತು ಅವರ ಸಹಚರರಾದ ಎಸ್.ಚಂದ್ರಶೇಖರ ರೆಡ್ಡಿ, ಬಾಬಾ, ಶ್ರೀಕಾಂತ್, ಜಿ.ಶ್ರೀನಿವಾಸ್ ಇವರೆಲ್ಲರೂ ಮುರಳೀಧರರಾವ್ ಜೊತೆಗೆ ಶಾಮೀಲಾಗಿದ್ದರು ಎಂದು ಹೇಳಲಾಗಿದೆ. ಇವರುಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಔಷಧಿಗಳ ರಫ್ತನ್ನು ಉತ್ತೇಜಿಸುವ ಫಾರ್ಮಾ ಎಕ್ಸಿಲ್ ಎಂಬ ಸಂಸ್ಥೆಯ ಅಧ್ಯಕ್ಷರನ್ನಾಗಿ ದೂರುದಾರರನ್ನು ನೇಮಿಸಿದ, ನಿರ್ಮಲಾ ಸೀತಾರಾಮನ್‍ರ ಸಹಿ ಇದ್ದ ಪತ್ರವನ್ನೂ ತೋರಿಸಿದ್ದರು ಎನ್ನಲಾಗಿದೆ.

ಆರೋಪವನ್ನು ನಿರಾಕರಿಸಿರುವ ಮುರಳೀಧರರಾವ್, ಈ ಬಗ್ಗೆ ದೂರುದಾರರು ತನ್ನನ್ನು ಫೋನಿನಲ್ಲಿ ಸಂಪರ್ಕಿಸಿದ್ದು ನಿಜವೆಂತಲೂ, ಆರೋಪಿಗಳಲ್ಲಿ ಕೆಲವರನ್ನು ತನ್ನ ಕೆಲಸದ ಕಾರಣಕ್ಕೆ ಬಲ್ಲೆನೆಂತಲೂ ಹೇಳಿದ್ದಾರೆ. ಆದರೆ ಈ ಕೇಸು ಅಥವಾ ಹಣಕಾಸಿನ ವ್ಯವಹಾರ ತನಗೆ ಗೊತ್ತಿಲ್ಲವೆಂದು ಹೇಳಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಒಟ್ಟಿನಲ್ಲಿ ತಾವು ಚೌಕಿದಾರರೆಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರುಗಳಲ್ಲಿ ಒಬ್ಬರ ನಂತರ ಒಬ್ಬರು ಹಗರಣಗಳಲ್ಲಿ ಆರೋಪಿಯಾಗುತ್ತಿರುವುದು ಚುನಾವಣಾ ಸಂದರ್ಭದಲ್ಲಿ ಬಿಜೆಪಿಗೆ ಮುಜುಗರವನ್ನಂತೂ ತರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...