Homeಕರ್ನಾಟಕಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

ಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

- Advertisement -
- Advertisement -

ಚೌಕಿದಾರರು ಎಂದೇಳಿಕೊಂಡು ಓಡಾಡುತ್ತಿರುವ ಬಿಜೆಪಿ ನಾಯಕರ ಹಗರಣಗಳು ಒಂದೊದೇ ಹೊರಬರುತ್ತಿದ್ದು ಈಗ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿಧರರಾವ್ ಮೇಲೆ ಕೇಸ್ ಬುಕ್ ಮಾಡಲು ಕೋರ್ಟ್ ಆದೇಶ ನೀಡಿದೆ.

ಇದು ನಿಜಕ್ಕೂ ಗಾಬರಿಗೊಳಿಸುವ ಆರೋಪ. ಕರ್ನಾಟಕದ ಉಸ್ತುವಾರಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ ರಾವ್ ಆರೋಪಿಗಳಲ್ಲೊಬ್ಬರು. ಇರುವ ಆರೋಪವಾದರೂ ಎಂಥದ್ದು? ನಿಮ್ಮನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ನಿಗಮ/ಮಂಡಳಿಯೊಂದರ ಅಧ್ಯಕ್ಷನನ್ನಾಗಿಸುತ್ತೇವೆಂದು 2.17 ಕೋಟಿ ರೂ.ಗಳನ್ನು ಪಡೆದಿದ್ದಾರೆ ಮತ್ತು ಆ ರೀತಿ ನೇಮಕ ಮಾಡಿದ ಆದೇಶವಿದ್ದಂತೆ ಬರೆಯಲಾಗಿದ್ದ ಪತ್ರಕ್ಕೆ ಅಂದು ವಾಣಿಜ್ಯ ಇಲಾಖೆಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್‍ರ ಫೋರ್ಜರಿ ಸಹಿಯನ್ನೂ ಮಾಡಲಾಗಿತ್ತೆಂಬ ಆರೋಪ. ಈ ಪ್ರಕರಣದಲ್ಲಿ ಮುರಳಿಧರರಾವ್ ಮತ್ತಿತರರ ಮೇಲೆ ಐಪಿಸಿ ಸೆಕ್ಷನ್ 406 (ನಂಬಿಕೆಗೆ ಕ್ರಿಮಿನಲ್ ದ್ರೋಹ), 420 (ವಂಚನೆ), 468, 471 (ಫೋರ್ಜರಿ), 506 (ಕ್ರಿಮಿನಲ್ ಬೆದರಿಕೆ) ಮತ್ತು 120-ಬಿ (ಕ್ರಿಮಿನಲ್ ಸಂಚು) ಮತ್ತು ಸಿಆರ್‍ಪಿಸಿಯ ಸೆಕ್ಷನ್ 156(3)ರ ಅಡಿಯಲ್ಲಿ ಮೊಕದ್ದಮೆಯ ದಾಖಲು ಮಾಡಲಾಗಿದೆ.

ತೆಲಂಗಾಣದ ಚಂಪಾಪೇಟೆಯ ನಿವಾಸಿ ಮಹಿಪಾಲ್ ರೆಡ್ಡಿಯವರ ಪತ್ನಿ ಟಿ.ಪ್ರವರ್ಣಾ ರೆಡ್ಡಿಯವರು ನೀಡಿದ ಈ ದೂರನ್ನು ಹೈದ್ರಾಬಾದ್‍ನ ಸರೂರ್‍ನಗರ ಠಾಣೆಯಲ್ಲಿ ದಾಖಲಿಸಲಾಗಿದೆ. ಸದರಿ ಎಫ್‍ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆಯೆಂಬುದು ಗಮನಾರ್ಹ. ದೂರುದಾರರ ಪ್ರಕಾರ 2015ರಲ್ಲೇ ಈಶ್ವರ್ ರೆಡ್ಡಿ, ಕೃಷ್ಣ ಕಿಶೋರ್ ಎಂಬುವವರು ಮುರಳೀಧರರಾವ್‍ರಲ್ಲಿ ಕರೆದುಕೊಂಡು ಹೋಗಿ ಈ ಡೀಲ್ ಕುದುರಿಸಿದರು. ಇದರಲ್ಲಿ ಸ್ಥಳೀಯ ಬಿಜೆಪಿ ನಾಯಕ ಮಂಡ ರಾಮಚಂದ್ರ ರೆಡ್ಡಿ ಮತ್ತು ಅವರ ಸಹಚರರಾದ ಎಸ್.ಚಂದ್ರಶೇಖರ ರೆಡ್ಡಿ, ಬಾಬಾ, ಶ್ರೀಕಾಂತ್, ಜಿ.ಶ್ರೀನಿವಾಸ್ ಇವರೆಲ್ಲರೂ ಮುರಳೀಧರರಾವ್ ಜೊತೆಗೆ ಶಾಮೀಲಾಗಿದ್ದರು ಎಂದು ಹೇಳಲಾಗಿದೆ. ಇವರುಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಔಷಧಿಗಳ ರಫ್ತನ್ನು ಉತ್ತೇಜಿಸುವ ಫಾರ್ಮಾ ಎಕ್ಸಿಲ್ ಎಂಬ ಸಂಸ್ಥೆಯ ಅಧ್ಯಕ್ಷರನ್ನಾಗಿ ದೂರುದಾರರನ್ನು ನೇಮಿಸಿದ, ನಿರ್ಮಲಾ ಸೀತಾರಾಮನ್‍ರ ಸಹಿ ಇದ್ದ ಪತ್ರವನ್ನೂ ತೋರಿಸಿದ್ದರು ಎನ್ನಲಾಗಿದೆ.

ಆರೋಪವನ್ನು ನಿರಾಕರಿಸಿರುವ ಮುರಳೀಧರರಾವ್, ಈ ಬಗ್ಗೆ ದೂರುದಾರರು ತನ್ನನ್ನು ಫೋನಿನಲ್ಲಿ ಸಂಪರ್ಕಿಸಿದ್ದು ನಿಜವೆಂತಲೂ, ಆರೋಪಿಗಳಲ್ಲಿ ಕೆಲವರನ್ನು ತನ್ನ ಕೆಲಸದ ಕಾರಣಕ್ಕೆ ಬಲ್ಲೆನೆಂತಲೂ ಹೇಳಿದ್ದಾರೆ. ಆದರೆ ಈ ಕೇಸು ಅಥವಾ ಹಣಕಾಸಿನ ವ್ಯವಹಾರ ತನಗೆ ಗೊತ್ತಿಲ್ಲವೆಂದು ಹೇಳಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಒಟ್ಟಿನಲ್ಲಿ ತಾವು ಚೌಕಿದಾರರೆಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರುಗಳಲ್ಲಿ ಒಬ್ಬರ ನಂತರ ಒಬ್ಬರು ಹಗರಣಗಳಲ್ಲಿ ಆರೋಪಿಯಾಗುತ್ತಿರುವುದು ಚುನಾವಣಾ ಸಂದರ್ಭದಲ್ಲಿ ಬಿಜೆಪಿಗೆ ಮುಜುಗರವನ್ನಂತೂ ತರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...