Homeಕರ್ನಾಟಕಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

ಬಿಜೆಪಿಯ ಕರ್ನಾಟಕದ ಮಾಜಿ ಚೌಕಿದಾರನೇ ಚೋರ್?

- Advertisement -
- Advertisement -

ಚೌಕಿದಾರರು ಎಂದೇಳಿಕೊಂಡು ಓಡಾಡುತ್ತಿರುವ ಬಿಜೆಪಿ ನಾಯಕರ ಹಗರಣಗಳು ಒಂದೊದೇ ಹೊರಬರುತ್ತಿದ್ದು ಈಗ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿಧರರಾವ್ ಮೇಲೆ ಕೇಸ್ ಬುಕ್ ಮಾಡಲು ಕೋರ್ಟ್ ಆದೇಶ ನೀಡಿದೆ.

ಇದು ನಿಜಕ್ಕೂ ಗಾಬರಿಗೊಳಿಸುವ ಆರೋಪ. ಕರ್ನಾಟಕದ ಉಸ್ತುವಾರಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ ರಾವ್ ಆರೋಪಿಗಳಲ್ಲೊಬ್ಬರು. ಇರುವ ಆರೋಪವಾದರೂ ಎಂಥದ್ದು? ನಿಮ್ಮನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ನಿಗಮ/ಮಂಡಳಿಯೊಂದರ ಅಧ್ಯಕ್ಷನನ್ನಾಗಿಸುತ್ತೇವೆಂದು 2.17 ಕೋಟಿ ರೂ.ಗಳನ್ನು ಪಡೆದಿದ್ದಾರೆ ಮತ್ತು ಆ ರೀತಿ ನೇಮಕ ಮಾಡಿದ ಆದೇಶವಿದ್ದಂತೆ ಬರೆಯಲಾಗಿದ್ದ ಪತ್ರಕ್ಕೆ ಅಂದು ವಾಣಿಜ್ಯ ಇಲಾಖೆಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್‍ರ ಫೋರ್ಜರಿ ಸಹಿಯನ್ನೂ ಮಾಡಲಾಗಿತ್ತೆಂಬ ಆರೋಪ. ಈ ಪ್ರಕರಣದಲ್ಲಿ ಮುರಳಿಧರರಾವ್ ಮತ್ತಿತರರ ಮೇಲೆ ಐಪಿಸಿ ಸೆಕ್ಷನ್ 406 (ನಂಬಿಕೆಗೆ ಕ್ರಿಮಿನಲ್ ದ್ರೋಹ), 420 (ವಂಚನೆ), 468, 471 (ಫೋರ್ಜರಿ), 506 (ಕ್ರಿಮಿನಲ್ ಬೆದರಿಕೆ) ಮತ್ತು 120-ಬಿ (ಕ್ರಿಮಿನಲ್ ಸಂಚು) ಮತ್ತು ಸಿಆರ್‍ಪಿಸಿಯ ಸೆಕ್ಷನ್ 156(3)ರ ಅಡಿಯಲ್ಲಿ ಮೊಕದ್ದಮೆಯ ದಾಖಲು ಮಾಡಲಾಗಿದೆ.

ತೆಲಂಗಾಣದ ಚಂಪಾಪೇಟೆಯ ನಿವಾಸಿ ಮಹಿಪಾಲ್ ರೆಡ್ಡಿಯವರ ಪತ್ನಿ ಟಿ.ಪ್ರವರ್ಣಾ ರೆಡ್ಡಿಯವರು ನೀಡಿದ ಈ ದೂರನ್ನು ಹೈದ್ರಾಬಾದ್‍ನ ಸರೂರ್‍ನಗರ ಠಾಣೆಯಲ್ಲಿ ದಾಖಲಿಸಲಾಗಿದೆ. ಸದರಿ ಎಫ್‍ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿದೆಯೆಂಬುದು ಗಮನಾರ್ಹ. ದೂರುದಾರರ ಪ್ರಕಾರ 2015ರಲ್ಲೇ ಈಶ್ವರ್ ರೆಡ್ಡಿ, ಕೃಷ್ಣ ಕಿಶೋರ್ ಎಂಬುವವರು ಮುರಳೀಧರರಾವ್‍ರಲ್ಲಿ ಕರೆದುಕೊಂಡು ಹೋಗಿ ಈ ಡೀಲ್ ಕುದುರಿಸಿದರು. ಇದರಲ್ಲಿ ಸ್ಥಳೀಯ ಬಿಜೆಪಿ ನಾಯಕ ಮಂಡ ರಾಮಚಂದ್ರ ರೆಡ್ಡಿ ಮತ್ತು ಅವರ ಸಹಚರರಾದ ಎಸ್.ಚಂದ್ರಶೇಖರ ರೆಡ್ಡಿ, ಬಾಬಾ, ಶ್ರೀಕಾಂತ್, ಜಿ.ಶ್ರೀನಿವಾಸ್ ಇವರೆಲ್ಲರೂ ಮುರಳೀಧರರಾವ್ ಜೊತೆಗೆ ಶಾಮೀಲಾಗಿದ್ದರು ಎಂದು ಹೇಳಲಾಗಿದೆ. ಇವರುಗಳು ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಔಷಧಿಗಳ ರಫ್ತನ್ನು ಉತ್ತೇಜಿಸುವ ಫಾರ್ಮಾ ಎಕ್ಸಿಲ್ ಎಂಬ ಸಂಸ್ಥೆಯ ಅಧ್ಯಕ್ಷರನ್ನಾಗಿ ದೂರುದಾರರನ್ನು ನೇಮಿಸಿದ, ನಿರ್ಮಲಾ ಸೀತಾರಾಮನ್‍ರ ಸಹಿ ಇದ್ದ ಪತ್ರವನ್ನೂ ತೋರಿಸಿದ್ದರು ಎನ್ನಲಾಗಿದೆ.

ಆರೋಪವನ್ನು ನಿರಾಕರಿಸಿರುವ ಮುರಳೀಧರರಾವ್, ಈ ಬಗ್ಗೆ ದೂರುದಾರರು ತನ್ನನ್ನು ಫೋನಿನಲ್ಲಿ ಸಂಪರ್ಕಿಸಿದ್ದು ನಿಜವೆಂತಲೂ, ಆರೋಪಿಗಳಲ್ಲಿ ಕೆಲವರನ್ನು ತನ್ನ ಕೆಲಸದ ಕಾರಣಕ್ಕೆ ಬಲ್ಲೆನೆಂತಲೂ ಹೇಳಿದ್ದಾರೆ. ಆದರೆ ಈ ಕೇಸು ಅಥವಾ ಹಣಕಾಸಿನ ವ್ಯವಹಾರ ತನಗೆ ಗೊತ್ತಿಲ್ಲವೆಂದು ಹೇಳಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಒಟ್ಟಿನಲ್ಲಿ ತಾವು ಚೌಕಿದಾರರೆಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರುಗಳಲ್ಲಿ ಒಬ್ಬರ ನಂತರ ಒಬ್ಬರು ಹಗರಣಗಳಲ್ಲಿ ಆರೋಪಿಯಾಗುತ್ತಿರುವುದು ಚುನಾವಣಾ ಸಂದರ್ಭದಲ್ಲಿ ಬಿಜೆಪಿಗೆ ಮುಜುಗರವನ್ನಂತೂ ತರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...