Homeನಿಜವೋ ಸುಳ್ಳೋಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

ಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

- Advertisement -
- Advertisement -

ಒಂದು ಫೇಕ್ ನ್ಯೂಸ್ ಅನ್ನು ಅತ್ಯಂತ ತ್ವರಿತಗತವಾಗಿ ಬಿಜೆಪಿ ಐಟಿ ಸೆಲ್ ಹರಿಬಿಟ್ಟಿದೆ. ಅದು ದೇಶದ ಬಹುಭಾಷೆಗಳಲ್ಲಿ ಈಗ ಹರಿದಾಡುತ್ತಿದೆ. ಅದರ ಪ್ರಕಾರ, ‘ಸುಳ್ಳು ಹೇಳಿ ಸುಪ್ರಿಂ ಮುಂದೆ ಬೆತ್ತಲಾದ ರಾಹುಲ್ ಗಾಂಧಿ..’

ಇದರಲ್ಲಿ ಕಾಲುಭಾಗ ಸತ್ವವಷ್ಟೇ ಇದೆ. ಬಿಜೆಪಿ ಹಬ್ಬಿಸಿರುವ ಸುದ್ದಿ ಪ್ರಕಾರ, ‘ಸುಪ್ರಿಂಕೋರ್ಟೆ ಚೌಕಿದಾರ್ ಚೋರ್ ಹೈ ಎಂದಿದೆಯೆಂದು ಹೇಳಿದ್ದ ರಾಹುಲ್ ಸುಪ್ರಿಂಕೋರ್ಟಿಗೆ ಇವತ್ತು ಸಲ್ಲಿಸಿದ ಅಫಿಡವೆಟ್‍ನಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ. ಇದರಿಂದ ರಫೆಲ್‍ನಲ್ಲಿ ಮೋದಿ ತಪ್ಪು ಮಾಡಿಲ್ಲ. ರಾಹುಲ್ ಬರೀ ಸುಳ್ಳಲ್ಲೇ ಪ್ರಚಾರ ಮಾಡುತ್ತಿದ್ದಾರೆ’ ಎಂದೆಲ್ಲ ವಿವರಿಸಲಾಗಿದೆ.


ಇದರಲ್ಲಿ ಕಾಲುಭಾಗ ಮಾತ್ರ ಸತ್ವವಷ್ಟೇ. ಬಿಜೆಪಿ ನಾಯಕಿ ಮೀನಾಕ್ಷಿ ಲೇಣಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ರಫೆಲ್ ವಿಚಾರ ಇನ್ನೂ ಸಂಪೂರ್ಣ ಇತ್ಯರ್ಥವಾಗುವ ಮೊದಲೇ ರಾಹುಲ್ ಅವರು ‘ಸುಪ್ರಿಂಕೋರ್ಟೆ ಮೋದಿಯವರನ್ನು ಚೋರ್’ ಎಂದಿದೆ ಎಂಬರ್ಥದಲ್ಲಿ ಮಾತಾಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಏ. 22ರೊಳಗೆ ಇದಕ್ಕೆ ಉತ್ತರ ನೀಡಲು ಸುಪ್ರಿಂ ರಾಹುಲ್‍ಗೆ ನೋಟಿಸ್ ನೀಡಿತ್ತು.
ಇಂದು (ಏ 22) ರಾಹುಲ್ ಸುಪ್ರಿಂಗೆ ನೀಡಿದ ಉತ್ತರ/ವಿವರಣೆಯಲ್ಲಿ, ‘ಚುನಾವಣಾ ಭಾಷಣ ಮಾಡುವಾಗ ಮಾತಿನ ಭರಾಟೆ ಮತ್ತು ಜೋಶ್‍ನಲ್ಲಿ ಹಾಗೆ ತಪ್ಪಾಗಿ ಹೇಳಿದ್ದೇನೆ. ಆದರೆ ನನ್ನ ಬಹುತೇಕ ಚುನಾವಣಾ ಭಾಷಣಗಳಲ್ಲಿ ‘ಬಡವರ ದುಡ್ಡನ್ನು ಹೊಡೆದು ಶ್ರೀಮಂತರನ್ನು ಉದ್ಧಾರ ಮಾಡುವ ಚೌಕಿದಾರ್ ಚೋರ್’ ಎಂದು ಹೇಳುತ್ತಲೇ ಬಂದಿದ್ದೇನೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆಯೇ ಹೊರತು ಅವರೆಲ್ಲೂ ಕ್ಷಮೆ ಯಾಚನೆ ಮಾಡಿಲ್ಲ.

ಬಿಜೆಪಿಗೊಂದು ಪ್ರಶ್ನೆ: ರಾಹುಲ್ ತಪ್ಪಾಗಿ ನುಡಿದಿದ್ದನ್ನು ಒಪ್ಪಿಕೊಂಡ ಕೂಡಲೇ ಮೋದಿ ರಫೆಲ್ ಹಗರಣದಿಂದ ಮುಕ್ತರಾಗುವುದಿಲ್ಲ. ಚೌಕಿದಾರ್ ಚೋರ್ ಹೈ ಎಂಬುದು ಬರೀ ರಫೆಲ್‍ಗೆ ಸಂಬಂಧಿಸಿದ್ದಲ್ಲ, ಒಟ್ಟೂ ಐದು ವರ್ಷಗಳ ಆಡಳಿತ ನಿರ್ವಹಣೆಯಲ್ಲಿ ಈ ಚೌಕಿದಾರ್ ಚೋರ್ ಆಗಿಯೇ ಕೆಲಸ ಮಾಡಿದ್ದಾರೆ ಎಂಬ ಅಪಾದನೆಗಳು ಈಗಲೂ ಚಾಲ್ತಿಯಲ್ಲಿವೆ. ಈ ಕುರಿತಾಗಿ ಮೀನಾಕ್ಷಿ ಲೇಣಿ ಮತ್ತು ಬಿಜೆಪಿ ಐಟಿ ಸೆಲ್ ಸುಪ್ರಿಂಕೋರ್ಟ್ ಮೊರೆ ಹೋಗುತ್ತಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....