Homeನಿಜವೋ ಸುಳ್ಳೋಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

ಕಾಲುಭಾಗ ಸತ್ಯ, ಮುಕ್ಕಾಲು ಪಾಲು ಮಿಥ್ಯ: ಚೌಕಿದಾರ್ ಚೋರ್ ಹೈ ಮತ್ತು ಸುಪ್ರಿಂಗೆ ರಾಹುಲ್ ಉತ್ತರ!

- Advertisement -
- Advertisement -

ಒಂದು ಫೇಕ್ ನ್ಯೂಸ್ ಅನ್ನು ಅತ್ಯಂತ ತ್ವರಿತಗತವಾಗಿ ಬಿಜೆಪಿ ಐಟಿ ಸೆಲ್ ಹರಿಬಿಟ್ಟಿದೆ. ಅದು ದೇಶದ ಬಹುಭಾಷೆಗಳಲ್ಲಿ ಈಗ ಹರಿದಾಡುತ್ತಿದೆ. ಅದರ ಪ್ರಕಾರ, ‘ಸುಳ್ಳು ಹೇಳಿ ಸುಪ್ರಿಂ ಮುಂದೆ ಬೆತ್ತಲಾದ ರಾಹುಲ್ ಗಾಂಧಿ..’

ಇದರಲ್ಲಿ ಕಾಲುಭಾಗ ಸತ್ವವಷ್ಟೇ ಇದೆ. ಬಿಜೆಪಿ ಹಬ್ಬಿಸಿರುವ ಸುದ್ದಿ ಪ್ರಕಾರ, ‘ಸುಪ್ರಿಂಕೋರ್ಟೆ ಚೌಕಿದಾರ್ ಚೋರ್ ಹೈ ಎಂದಿದೆಯೆಂದು ಹೇಳಿದ್ದ ರಾಹುಲ್ ಸುಪ್ರಿಂಕೋರ್ಟಿಗೆ ಇವತ್ತು ಸಲ್ಲಿಸಿದ ಅಫಿಡವೆಟ್‍ನಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ. ಇದರಿಂದ ರಫೆಲ್‍ನಲ್ಲಿ ಮೋದಿ ತಪ್ಪು ಮಾಡಿಲ್ಲ. ರಾಹುಲ್ ಬರೀ ಸುಳ್ಳಲ್ಲೇ ಪ್ರಚಾರ ಮಾಡುತ್ತಿದ್ದಾರೆ’ ಎಂದೆಲ್ಲ ವಿವರಿಸಲಾಗಿದೆ.


ಇದರಲ್ಲಿ ಕಾಲುಭಾಗ ಮಾತ್ರ ಸತ್ವವಷ್ಟೇ. ಬಿಜೆಪಿ ನಾಯಕಿ ಮೀನಾಕ್ಷಿ ಲೇಣಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ರಫೆಲ್ ವಿಚಾರ ಇನ್ನೂ ಸಂಪೂರ್ಣ ಇತ್ಯರ್ಥವಾಗುವ ಮೊದಲೇ ರಾಹುಲ್ ಅವರು ‘ಸುಪ್ರಿಂಕೋರ್ಟೆ ಮೋದಿಯವರನ್ನು ಚೋರ್’ ಎಂದಿದೆ ಎಂಬರ್ಥದಲ್ಲಿ ಮಾತಾಡಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಏ. 22ರೊಳಗೆ ಇದಕ್ಕೆ ಉತ್ತರ ನೀಡಲು ಸುಪ್ರಿಂ ರಾಹುಲ್‍ಗೆ ನೋಟಿಸ್ ನೀಡಿತ್ತು.
ಇಂದು (ಏ 22) ರಾಹುಲ್ ಸುಪ್ರಿಂಗೆ ನೀಡಿದ ಉತ್ತರ/ವಿವರಣೆಯಲ್ಲಿ, ‘ಚುನಾವಣಾ ಭಾಷಣ ಮಾಡುವಾಗ ಮಾತಿನ ಭರಾಟೆ ಮತ್ತು ಜೋಶ್‍ನಲ್ಲಿ ಹಾಗೆ ತಪ್ಪಾಗಿ ಹೇಳಿದ್ದೇನೆ. ಆದರೆ ನನ್ನ ಬಹುತೇಕ ಚುನಾವಣಾ ಭಾಷಣಗಳಲ್ಲಿ ‘ಬಡವರ ದುಡ್ಡನ್ನು ಹೊಡೆದು ಶ್ರೀಮಂತರನ್ನು ಉದ್ಧಾರ ಮಾಡುವ ಚೌಕಿದಾರ್ ಚೋರ್’ ಎಂದು ಹೇಳುತ್ತಲೇ ಬಂದಿದ್ದೇನೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆಯೇ ಹೊರತು ಅವರೆಲ್ಲೂ ಕ್ಷಮೆ ಯಾಚನೆ ಮಾಡಿಲ್ಲ.

ಬಿಜೆಪಿಗೊಂದು ಪ್ರಶ್ನೆ: ರಾಹುಲ್ ತಪ್ಪಾಗಿ ನುಡಿದಿದ್ದನ್ನು ಒಪ್ಪಿಕೊಂಡ ಕೂಡಲೇ ಮೋದಿ ರಫೆಲ್ ಹಗರಣದಿಂದ ಮುಕ್ತರಾಗುವುದಿಲ್ಲ. ಚೌಕಿದಾರ್ ಚೋರ್ ಹೈ ಎಂಬುದು ಬರೀ ರಫೆಲ್‍ಗೆ ಸಂಬಂಧಿಸಿದ್ದಲ್ಲ, ಒಟ್ಟೂ ಐದು ವರ್ಷಗಳ ಆಡಳಿತ ನಿರ್ವಹಣೆಯಲ್ಲಿ ಈ ಚೌಕಿದಾರ್ ಚೋರ್ ಆಗಿಯೇ ಕೆಲಸ ಮಾಡಿದ್ದಾರೆ ಎಂಬ ಅಪಾದನೆಗಳು ಈಗಲೂ ಚಾಲ್ತಿಯಲ್ಲಿವೆ. ಈ ಕುರಿತಾಗಿ ಮೀನಾಕ್ಷಿ ಲೇಣಿ ಮತ್ತು ಬಿಜೆಪಿ ಐಟಿ ಸೆಲ್ ಸುಪ್ರಿಂಕೋರ್ಟ್ ಮೊರೆ ಹೋಗುತ್ತಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...