Homeಅಂಕಣಗಳುಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

ಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

- Advertisement -
- Advertisement -

| ಮಲ್ಲಿ |

ಮೋದಿಯ ಲೋಕಸಂಚಾರದ ಫಲಾನುಭವಿಗಳು: ಅಂಬಾನಿ ಮತ್ತು ಅದಾನಿ

ಮೋದಿ ವಿದೇಶ ಪ್ರವಾಸ ಕೈಗೊಂಡಾಗ ಸಾಕಷ್ಟು ಸಲ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿ ಜೊತೆಗಿದ್ದು, ಭೇಟಿಯಾದ ದೇಶಗಳ ಕಂಪನಿಗಳ ಜೊತೆಗೆ  ಇವರಿಬ್ಬರ ಕಂಪನಿಗಳು ಕನಿಷ್ಠ 18 ಪ್ರಮುಖ ಡೀಲ್‍ಗಳಿಗೆ ಸಹಿ ಹಾಕಿವೆ….. ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ.

ತಮ್ಮ ಅಧಿಕಾರವಧಿಯ ಮೊದಲ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 41 ಸಲ ವಿದೇಶ ಪ್ರವಾಸ ಮಾಡಿದ್ದು, 52 ದೇಶಗಳನ್ನು ಸಂದರ್ಶಿಸಿದ್ದಾರೆ. ಈ ಪ್ರವಾಸದ ಒಟ್ಟು ಅವಧಿ 165 ದಿನಗಳು. ಇದಕ್ಕಾಗಿ ಅವರು 355 ಕೋಟಿ ರೂ ಖರ್ಚು ಮಾಡಿದ್ದು, ಅದು ತೆರೆಗೆದಾರನ ಹಣವಾಗಿದೆ. ಬಹುಪಾಲು ವಿದೇಶಿ ಭೇಟಿಗಳಲ್ಲಿ ಅವರ ಜೊತೆ ಅಂಬಾನಿ, ಅದಾನಿ ಇದ್ದು, 16 ರಾಷ್ಟ್ರಗಳಲ್ಲಿ ಇವರಿಬ್ಬರ ಕಂಪನಿಗಳು 18 ಡೀಲ್‍ಗಳಿಗೆ ಸಹಿ ಹಾಕಿವೆ. ಇದರಲ್ಲಿ ಅದಾನಿ ಕಂಪನಿಗಳು 13 ಮತ್ತು ಅನಿಲ್ ಅಂಬಾನಿಯ ಕಂಪನಿ 5 ಡೀಲ್‍ಗಳಿಗೆ ಸಹಿ ಹಾಕಿವೆ. ಇಲ್ಲಿ ಅಂತಹ ಡೀಲ್‍ಗಳ ಕೆಲವನ್ನು ಇಲ್ಲಿ ನೀಡಿದ್ದೇವೆ.

ರಕ್ಷಣೆ

ಫ್ರಾನ್ಸ್

ಮೋದಿ ಭೇಟಿ: ಏಪ್ರಿಲ್ 09-12-2015 ಮತ್ತು  ಜೂನ್ 02-03-2017 (ಅನಿಲ್ ಅಂಬಾನಿ)

ಡೀಲ್ ದಿನ: ಮಾರ್ಚ್ 28-2015

ಮೋದಿ ರಫೇಲ್ ಡೀಲ್ ಘೋಷಿಸುವ 12 ದಿನ ಮೊದಲು ಅನಿಲ್ ಅಂಬಾನಿಯ ಆಗತಾನೇ ಹುಟ್ಟಿದ ಕಂಪನಿಯೊಂದು ಡಸಾಲ್ಟ್ ಕಂಪನಿಯೊಂದಿಗೆ ರಫೇಲ್ ಡೀಲ್ ಭಾಗವಾಗಿ ಒಪ್ಪಂದ ಮಾಡಿಕೊಂಡಿತು. ಅನುಭವಿ ಸರ್ಕಾರಿ ಎಚ್‍ಎಎಲ್ ಕಂಪನಿಯನ್ನು ತಿರಸ್ಕರಿಸಿ ಅಂಬಾನಿಯ ಅನನನುಭವಿ ಕಂಪನಿಯನ್ನು ರಿಲೆಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿಕೊಳ್ಳಲು ಪ್ರಧಾನಿ ಮೋದಿಯೇ ಕಾರಣ ಎಂಬ ಆರೋಪವಿದೆ. ಎರಡು ವರ್ಷಗಳಲ್ಲಿ ರಫೇಲ್ ವಿಮಾನಗಳು ಭಾರತಕ್ಕೆ ತಲುಪಬೇಕಿತ್ತು. ಇನ್ನೂ ಒಂದೂ ವಾಯುಸೇನೆಗೆ ದೊರೆತಿಲ್ಲ.

ಸ್ವೀಡನ್

ಡೀಲ್ ದಿನ: ಮಾರ್ಚ್ 22-2015 (ಅಂಬಾನಿ)

ಸ್ವೀಡನ್ ಪ್ರಧಾನಿಯ ಭಾರತ ಭೇಟಿ: ಫೆಬ್ರುವರಿ 13, 2016

ಡೀಲ್ ದಿನ : ಸೆಪ್ಟೆಂಬರ್ 1, 2017 (ಅದಾನಿ)

ಪ್ರಧಾನಿ ಭೇಟಿ: ಏಪ್ರಿಲ್ 16-18,  2018

ಇಲ್ಲಿ ಅಂಬಾನಿಯ ಕಂಪನಿ ಸ್ವೀಡನ್ನಿನ SAAB ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಭಾರತೀಯ ನೌಕಾದಳಕ್ಕೆ ಉನಮ್ಯಾನಡ್ ಏರಿಯಲ್ ವೆಹಿಕಲ್ (ಯುಎವಿ) ಪೂರೈಸುವ ಜವಾಬ್ದಾರಿ ಹೊರುತ್ತದೆ. ಪ್ರತಿ ಸಾಧನದ ಬೆಲೆ 1 ಸಾವಿರ ಕೋಟಿ.

ಅದೇ ಸ್ವೀಡನ್ ಕಂಪನಿಯೊಂದಿಗೆ ಸಿಂಗಲ್ ಎಂಜಿನ್ ಏರ್‍ಕ್ರಾಫ್ಟ್ ತಯಾರಿಸುವ 60 ಸಾವಿರ ಕೋಟಿ ಮೊತ್ತದ ಡೀಲ್‍ಗೆ ಅದಾನಿ ಸಹಿ ಮಾಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ 16 ದೇಶಗಳ  ಕಂಪನಿಗಳ ಜೊತೆಗೆ ಅಂಬಾನಿ ಮತ್ತು ಅದಾನಿಯ ಕಂಪನಿಗಳು ಡೀಲ್ ಮಾಡಿಕೊಳ್ಳುತ್ತವೆ. ಇಸ್ರೇಲ್, ರಷ್ಯಾ, ಅಮೆರಿಕ, ಜಪಾನ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಮೊಜಾಂಬಿಕ್, ಇರಾನ್, ಒಮನ್, ಬಾಂಗ್ಲಾ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ ಅವರ ಜತೆ ಅಂಬಾನಿ ಅಥವಾ ಅದಾನಿ ಅಥವಾ ಇಬ್ಬರೂ ಇರುತ್ತಿದ್ದರು.

ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ. ವಿಚಿತ್ರ ಎಂದರೆ ಡಿಫೆನ್ಸ್ ಸಲಕರಣೆಗಳಲ್ಲಿ ಯಾವುದೇ ಅನುಭವ ಇಲ್ಲದ ಅಂಬಾನಿ, ಅದಾನಿ ಕಂಪನಿಗಳಿಗೆ ಪ್ರಧಾನಿಯ ಪ್ರಭಾವದಿಂದ ಡಿಫೆನ್ಸ್ ಡೀಲ್‍ಗಳು ಸಿಕ್ಕಿವೆ!

 ಪಾಕ್ ಜತೆಗೂ ಚಕ್ಕಂದ!

ಮಾತೆತ್ತಿದ್ದರೆ ಪಾಕ್ ವಿರುದ್ಧ ಹರಿಹಾಯುವ ಮೋದಿ ಮತ್ತು ಅವರ ಭಕ್ತರಿಗೆ ಇದೇ ಅದಾನಿ ಪಾಕ್ ಜೊತೆಗೆ ಹಲವು ವಾಣಿಜ್ಯ ವ್ಯಹಾರ ಹೊಂದಿದ್ದಾರೆ. ಪ್ರಧಾನಿ ಏಕಾಏಕಿ 2015 ಡಿಸೆಂಬರ್ 25ರಂದು ಪಾಕ್‍ಗೆ ಭೇಟಿ ನೀಡಿದಾಗ ಅವರ ಜೊತೆ ಅದಾನಿಯೂ ಇದ್ದ! ಅದರ ಹಿಂದಿನ ವರ್ಷವೇ ಅದಾನಿ 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಡೀಲ್‍ಗೆ ಸಹಿ ಹಾಕಿದ್ದರು. ಎರಡು ದೇಶಗಳ ನಡುವಿನ ತಿಕ್ಕಾಟದ ಕಾರಣಕ್ಕೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ.

ಮೋದಿ ಗುಜರಾತಿನ ಮುಖ್ಯಮಂತ್ರಿ ಆದಾಗಿನಿಂದ ಅದಾನಿಯ ಕಂಪನಿ ಕ್ರಮೇಣ ಮುನ್ನೆಲೆಗೆ ಬಂದಿದೆ. ಪ್ರಧಾನಿಯಾದ ಮೇಲಂತೂ ಅದಾನಿಯ ಆದಾಯ ಸಿಕ್ಕಾಪಟ್ಟೆ ಏರಿಕೆ ಕಂಡಿದೆ. ಇನ್ನು ಸಾಲದ ಸುಳಿಯಲ್ಲಿದ್ದ ಅನಿಲ್ ಅಂಬಾನಿ ಚೇತರಿಸಿಕೊಳ್ಳಲೂ ಮೋದಿ ನೆರವಾಗಿದ್ದಾರೆ.

(ಆಧಾರ: ನ್ಯೂಸ್‍ಕ್ಲಿಕ್)

ಅನುವಾದ: ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...