Homeಅಂಕಣಗಳುಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

ಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

- Advertisement -
- Advertisement -

| ಮಲ್ಲಿ |

ಮೋದಿಯ ಲೋಕಸಂಚಾರದ ಫಲಾನುಭವಿಗಳು: ಅಂಬಾನಿ ಮತ್ತು ಅದಾನಿ

ಮೋದಿ ವಿದೇಶ ಪ್ರವಾಸ ಕೈಗೊಂಡಾಗ ಸಾಕಷ್ಟು ಸಲ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿ ಜೊತೆಗಿದ್ದು, ಭೇಟಿಯಾದ ದೇಶಗಳ ಕಂಪನಿಗಳ ಜೊತೆಗೆ  ಇವರಿಬ್ಬರ ಕಂಪನಿಗಳು ಕನಿಷ್ಠ 18 ಪ್ರಮುಖ ಡೀಲ್‍ಗಳಿಗೆ ಸಹಿ ಹಾಕಿವೆ….. ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ.

ತಮ್ಮ ಅಧಿಕಾರವಧಿಯ ಮೊದಲ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 41 ಸಲ ವಿದೇಶ ಪ್ರವಾಸ ಮಾಡಿದ್ದು, 52 ದೇಶಗಳನ್ನು ಸಂದರ್ಶಿಸಿದ್ದಾರೆ. ಈ ಪ್ರವಾಸದ ಒಟ್ಟು ಅವಧಿ 165 ದಿನಗಳು. ಇದಕ್ಕಾಗಿ ಅವರು 355 ಕೋಟಿ ರೂ ಖರ್ಚು ಮಾಡಿದ್ದು, ಅದು ತೆರೆಗೆದಾರನ ಹಣವಾಗಿದೆ. ಬಹುಪಾಲು ವಿದೇಶಿ ಭೇಟಿಗಳಲ್ಲಿ ಅವರ ಜೊತೆ ಅಂಬಾನಿ, ಅದಾನಿ ಇದ್ದು, 16 ರಾಷ್ಟ್ರಗಳಲ್ಲಿ ಇವರಿಬ್ಬರ ಕಂಪನಿಗಳು 18 ಡೀಲ್‍ಗಳಿಗೆ ಸಹಿ ಹಾಕಿವೆ. ಇದರಲ್ಲಿ ಅದಾನಿ ಕಂಪನಿಗಳು 13 ಮತ್ತು ಅನಿಲ್ ಅಂಬಾನಿಯ ಕಂಪನಿ 5 ಡೀಲ್‍ಗಳಿಗೆ ಸಹಿ ಹಾಕಿವೆ. ಇಲ್ಲಿ ಅಂತಹ ಡೀಲ್‍ಗಳ ಕೆಲವನ್ನು ಇಲ್ಲಿ ನೀಡಿದ್ದೇವೆ.

ರಕ್ಷಣೆ

ಫ್ರಾನ್ಸ್

ಮೋದಿ ಭೇಟಿ: ಏಪ್ರಿಲ್ 09-12-2015 ಮತ್ತು  ಜೂನ್ 02-03-2017 (ಅನಿಲ್ ಅಂಬಾನಿ)

ಡೀಲ್ ದಿನ: ಮಾರ್ಚ್ 28-2015

ಮೋದಿ ರಫೇಲ್ ಡೀಲ್ ಘೋಷಿಸುವ 12 ದಿನ ಮೊದಲು ಅನಿಲ್ ಅಂಬಾನಿಯ ಆಗತಾನೇ ಹುಟ್ಟಿದ ಕಂಪನಿಯೊಂದು ಡಸಾಲ್ಟ್ ಕಂಪನಿಯೊಂದಿಗೆ ರಫೇಲ್ ಡೀಲ್ ಭಾಗವಾಗಿ ಒಪ್ಪಂದ ಮಾಡಿಕೊಂಡಿತು. ಅನುಭವಿ ಸರ್ಕಾರಿ ಎಚ್‍ಎಎಲ್ ಕಂಪನಿಯನ್ನು ತಿರಸ್ಕರಿಸಿ ಅಂಬಾನಿಯ ಅನನನುಭವಿ ಕಂಪನಿಯನ್ನು ರಿಲೆಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿಕೊಳ್ಳಲು ಪ್ರಧಾನಿ ಮೋದಿಯೇ ಕಾರಣ ಎಂಬ ಆರೋಪವಿದೆ. ಎರಡು ವರ್ಷಗಳಲ್ಲಿ ರಫೇಲ್ ವಿಮಾನಗಳು ಭಾರತಕ್ಕೆ ತಲುಪಬೇಕಿತ್ತು. ಇನ್ನೂ ಒಂದೂ ವಾಯುಸೇನೆಗೆ ದೊರೆತಿಲ್ಲ.

ಸ್ವೀಡನ್

ಡೀಲ್ ದಿನ: ಮಾರ್ಚ್ 22-2015 (ಅಂಬಾನಿ)

ಸ್ವೀಡನ್ ಪ್ರಧಾನಿಯ ಭಾರತ ಭೇಟಿ: ಫೆಬ್ರುವರಿ 13, 2016

ಡೀಲ್ ದಿನ : ಸೆಪ್ಟೆಂಬರ್ 1, 2017 (ಅದಾನಿ)

ಪ್ರಧಾನಿ ಭೇಟಿ: ಏಪ್ರಿಲ್ 16-18,  2018

ಇಲ್ಲಿ ಅಂಬಾನಿಯ ಕಂಪನಿ ಸ್ವೀಡನ್ನಿನ SAAB ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಭಾರತೀಯ ನೌಕಾದಳಕ್ಕೆ ಉನಮ್ಯಾನಡ್ ಏರಿಯಲ್ ವೆಹಿಕಲ್ (ಯುಎವಿ) ಪೂರೈಸುವ ಜವಾಬ್ದಾರಿ ಹೊರುತ್ತದೆ. ಪ್ರತಿ ಸಾಧನದ ಬೆಲೆ 1 ಸಾವಿರ ಕೋಟಿ.

ಅದೇ ಸ್ವೀಡನ್ ಕಂಪನಿಯೊಂದಿಗೆ ಸಿಂಗಲ್ ಎಂಜಿನ್ ಏರ್‍ಕ್ರಾಫ್ಟ್ ತಯಾರಿಸುವ 60 ಸಾವಿರ ಕೋಟಿ ಮೊತ್ತದ ಡೀಲ್‍ಗೆ ಅದಾನಿ ಸಹಿ ಮಾಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ 16 ದೇಶಗಳ  ಕಂಪನಿಗಳ ಜೊತೆಗೆ ಅಂಬಾನಿ ಮತ್ತು ಅದಾನಿಯ ಕಂಪನಿಗಳು ಡೀಲ್ ಮಾಡಿಕೊಳ್ಳುತ್ತವೆ. ಇಸ್ರೇಲ್, ರಷ್ಯಾ, ಅಮೆರಿಕ, ಜಪಾನ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಮೊಜಾಂಬಿಕ್, ಇರಾನ್, ಒಮನ್, ಬಾಂಗ್ಲಾ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ ಅವರ ಜತೆ ಅಂಬಾನಿ ಅಥವಾ ಅದಾನಿ ಅಥವಾ ಇಬ್ಬರೂ ಇರುತ್ತಿದ್ದರು.

ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ. ವಿಚಿತ್ರ ಎಂದರೆ ಡಿಫೆನ್ಸ್ ಸಲಕರಣೆಗಳಲ್ಲಿ ಯಾವುದೇ ಅನುಭವ ಇಲ್ಲದ ಅಂಬಾನಿ, ಅದಾನಿ ಕಂಪನಿಗಳಿಗೆ ಪ್ರಧಾನಿಯ ಪ್ರಭಾವದಿಂದ ಡಿಫೆನ್ಸ್ ಡೀಲ್‍ಗಳು ಸಿಕ್ಕಿವೆ!

 ಪಾಕ್ ಜತೆಗೂ ಚಕ್ಕಂದ!

ಮಾತೆತ್ತಿದ್ದರೆ ಪಾಕ್ ವಿರುದ್ಧ ಹರಿಹಾಯುವ ಮೋದಿ ಮತ್ತು ಅವರ ಭಕ್ತರಿಗೆ ಇದೇ ಅದಾನಿ ಪಾಕ್ ಜೊತೆಗೆ ಹಲವು ವಾಣಿಜ್ಯ ವ್ಯಹಾರ ಹೊಂದಿದ್ದಾರೆ. ಪ್ರಧಾನಿ ಏಕಾಏಕಿ 2015 ಡಿಸೆಂಬರ್ 25ರಂದು ಪಾಕ್‍ಗೆ ಭೇಟಿ ನೀಡಿದಾಗ ಅವರ ಜೊತೆ ಅದಾನಿಯೂ ಇದ್ದ! ಅದರ ಹಿಂದಿನ ವರ್ಷವೇ ಅದಾನಿ 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಡೀಲ್‍ಗೆ ಸಹಿ ಹಾಕಿದ್ದರು. ಎರಡು ದೇಶಗಳ ನಡುವಿನ ತಿಕ್ಕಾಟದ ಕಾರಣಕ್ಕೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ.

ಮೋದಿ ಗುಜರಾತಿನ ಮುಖ್ಯಮಂತ್ರಿ ಆದಾಗಿನಿಂದ ಅದಾನಿಯ ಕಂಪನಿ ಕ್ರಮೇಣ ಮುನ್ನೆಲೆಗೆ ಬಂದಿದೆ. ಪ್ರಧಾನಿಯಾದ ಮೇಲಂತೂ ಅದಾನಿಯ ಆದಾಯ ಸಿಕ್ಕಾಪಟ್ಟೆ ಏರಿಕೆ ಕಂಡಿದೆ. ಇನ್ನು ಸಾಲದ ಸುಳಿಯಲ್ಲಿದ್ದ ಅನಿಲ್ ಅಂಬಾನಿ ಚೇತರಿಸಿಕೊಳ್ಳಲೂ ಮೋದಿ ನೆರವಾಗಿದ್ದಾರೆ.

(ಆಧಾರ: ನ್ಯೂಸ್‍ಕ್ಲಿಕ್)

ಅನುವಾದ: ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...