Homeಅಂಕಣಗಳುಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

ಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

- Advertisement -
- Advertisement -

| ಮಲ್ಲಿ |

ಮೋದಿಯ ಲೋಕಸಂಚಾರದ ಫಲಾನುಭವಿಗಳು: ಅಂಬಾನಿ ಮತ್ತು ಅದಾನಿ

ಮೋದಿ ವಿದೇಶ ಪ್ರವಾಸ ಕೈಗೊಂಡಾಗ ಸಾಕಷ್ಟು ಸಲ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿ ಜೊತೆಗಿದ್ದು, ಭೇಟಿಯಾದ ದೇಶಗಳ ಕಂಪನಿಗಳ ಜೊತೆಗೆ  ಇವರಿಬ್ಬರ ಕಂಪನಿಗಳು ಕನಿಷ್ಠ 18 ಪ್ರಮುಖ ಡೀಲ್‍ಗಳಿಗೆ ಸಹಿ ಹಾಕಿವೆ….. ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ.

ತಮ್ಮ ಅಧಿಕಾರವಧಿಯ ಮೊದಲ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 41 ಸಲ ವಿದೇಶ ಪ್ರವಾಸ ಮಾಡಿದ್ದು, 52 ದೇಶಗಳನ್ನು ಸಂದರ್ಶಿಸಿದ್ದಾರೆ. ಈ ಪ್ರವಾಸದ ಒಟ್ಟು ಅವಧಿ 165 ದಿನಗಳು. ಇದಕ್ಕಾಗಿ ಅವರು 355 ಕೋಟಿ ರೂ ಖರ್ಚು ಮಾಡಿದ್ದು, ಅದು ತೆರೆಗೆದಾರನ ಹಣವಾಗಿದೆ. ಬಹುಪಾಲು ವಿದೇಶಿ ಭೇಟಿಗಳಲ್ಲಿ ಅವರ ಜೊತೆ ಅಂಬಾನಿ, ಅದಾನಿ ಇದ್ದು, 16 ರಾಷ್ಟ್ರಗಳಲ್ಲಿ ಇವರಿಬ್ಬರ ಕಂಪನಿಗಳು 18 ಡೀಲ್‍ಗಳಿಗೆ ಸಹಿ ಹಾಕಿವೆ. ಇದರಲ್ಲಿ ಅದಾನಿ ಕಂಪನಿಗಳು 13 ಮತ್ತು ಅನಿಲ್ ಅಂಬಾನಿಯ ಕಂಪನಿ 5 ಡೀಲ್‍ಗಳಿಗೆ ಸಹಿ ಹಾಕಿವೆ. ಇಲ್ಲಿ ಅಂತಹ ಡೀಲ್‍ಗಳ ಕೆಲವನ್ನು ಇಲ್ಲಿ ನೀಡಿದ್ದೇವೆ.

ರಕ್ಷಣೆ

ಫ್ರಾನ್ಸ್

ಮೋದಿ ಭೇಟಿ: ಏಪ್ರಿಲ್ 09-12-2015 ಮತ್ತು  ಜೂನ್ 02-03-2017 (ಅನಿಲ್ ಅಂಬಾನಿ)

ಡೀಲ್ ದಿನ: ಮಾರ್ಚ್ 28-2015

ಮೋದಿ ರಫೇಲ್ ಡೀಲ್ ಘೋಷಿಸುವ 12 ದಿನ ಮೊದಲು ಅನಿಲ್ ಅಂಬಾನಿಯ ಆಗತಾನೇ ಹುಟ್ಟಿದ ಕಂಪನಿಯೊಂದು ಡಸಾಲ್ಟ್ ಕಂಪನಿಯೊಂದಿಗೆ ರಫೇಲ್ ಡೀಲ್ ಭಾಗವಾಗಿ ಒಪ್ಪಂದ ಮಾಡಿಕೊಂಡಿತು. ಅನುಭವಿ ಸರ್ಕಾರಿ ಎಚ್‍ಎಎಲ್ ಕಂಪನಿಯನ್ನು ತಿರಸ್ಕರಿಸಿ ಅಂಬಾನಿಯ ಅನನನುಭವಿ ಕಂಪನಿಯನ್ನು ರಿಲೆಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿಕೊಳ್ಳಲು ಪ್ರಧಾನಿ ಮೋದಿಯೇ ಕಾರಣ ಎಂಬ ಆರೋಪವಿದೆ. ಎರಡು ವರ್ಷಗಳಲ್ಲಿ ರಫೇಲ್ ವಿಮಾನಗಳು ಭಾರತಕ್ಕೆ ತಲುಪಬೇಕಿತ್ತು. ಇನ್ನೂ ಒಂದೂ ವಾಯುಸೇನೆಗೆ ದೊರೆತಿಲ್ಲ.

ಸ್ವೀಡನ್

ಡೀಲ್ ದಿನ: ಮಾರ್ಚ್ 22-2015 (ಅಂಬಾನಿ)

ಸ್ವೀಡನ್ ಪ್ರಧಾನಿಯ ಭಾರತ ಭೇಟಿ: ಫೆಬ್ರುವರಿ 13, 2016

ಡೀಲ್ ದಿನ : ಸೆಪ್ಟೆಂಬರ್ 1, 2017 (ಅದಾನಿ)

ಪ್ರಧಾನಿ ಭೇಟಿ: ಏಪ್ರಿಲ್ 16-18,  2018

ಇಲ್ಲಿ ಅಂಬಾನಿಯ ಕಂಪನಿ ಸ್ವೀಡನ್ನಿನ SAAB ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಭಾರತೀಯ ನೌಕಾದಳಕ್ಕೆ ಉನಮ್ಯಾನಡ್ ಏರಿಯಲ್ ವೆಹಿಕಲ್ (ಯುಎವಿ) ಪೂರೈಸುವ ಜವಾಬ್ದಾರಿ ಹೊರುತ್ತದೆ. ಪ್ರತಿ ಸಾಧನದ ಬೆಲೆ 1 ಸಾವಿರ ಕೋಟಿ.

ಅದೇ ಸ್ವೀಡನ್ ಕಂಪನಿಯೊಂದಿಗೆ ಸಿಂಗಲ್ ಎಂಜಿನ್ ಏರ್‍ಕ್ರಾಫ್ಟ್ ತಯಾರಿಸುವ 60 ಸಾವಿರ ಕೋಟಿ ಮೊತ್ತದ ಡೀಲ್‍ಗೆ ಅದಾನಿ ಸಹಿ ಮಾಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ 16 ದೇಶಗಳ  ಕಂಪನಿಗಳ ಜೊತೆಗೆ ಅಂಬಾನಿ ಮತ್ತು ಅದಾನಿಯ ಕಂಪನಿಗಳು ಡೀಲ್ ಮಾಡಿಕೊಳ್ಳುತ್ತವೆ. ಇಸ್ರೇಲ್, ರಷ್ಯಾ, ಅಮೆರಿಕ, ಜಪಾನ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಮೊಜಾಂಬಿಕ್, ಇರಾನ್, ಒಮನ್, ಬಾಂಗ್ಲಾ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ ಅವರ ಜತೆ ಅಂಬಾನಿ ಅಥವಾ ಅದಾನಿ ಅಥವಾ ಇಬ್ಬರೂ ಇರುತ್ತಿದ್ದರು.

ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ. ವಿಚಿತ್ರ ಎಂದರೆ ಡಿಫೆನ್ಸ್ ಸಲಕರಣೆಗಳಲ್ಲಿ ಯಾವುದೇ ಅನುಭವ ಇಲ್ಲದ ಅಂಬಾನಿ, ಅದಾನಿ ಕಂಪನಿಗಳಿಗೆ ಪ್ರಧಾನಿಯ ಪ್ರಭಾವದಿಂದ ಡಿಫೆನ್ಸ್ ಡೀಲ್‍ಗಳು ಸಿಕ್ಕಿವೆ!

 ಪಾಕ್ ಜತೆಗೂ ಚಕ್ಕಂದ!

ಮಾತೆತ್ತಿದ್ದರೆ ಪಾಕ್ ವಿರುದ್ಧ ಹರಿಹಾಯುವ ಮೋದಿ ಮತ್ತು ಅವರ ಭಕ್ತರಿಗೆ ಇದೇ ಅದಾನಿ ಪಾಕ್ ಜೊತೆಗೆ ಹಲವು ವಾಣಿಜ್ಯ ವ್ಯಹಾರ ಹೊಂದಿದ್ದಾರೆ. ಪ್ರಧಾನಿ ಏಕಾಏಕಿ 2015 ಡಿಸೆಂಬರ್ 25ರಂದು ಪಾಕ್‍ಗೆ ಭೇಟಿ ನೀಡಿದಾಗ ಅವರ ಜೊತೆ ಅದಾನಿಯೂ ಇದ್ದ! ಅದರ ಹಿಂದಿನ ವರ್ಷವೇ ಅದಾನಿ 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಡೀಲ್‍ಗೆ ಸಹಿ ಹಾಕಿದ್ದರು. ಎರಡು ದೇಶಗಳ ನಡುವಿನ ತಿಕ್ಕಾಟದ ಕಾರಣಕ್ಕೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ.

ಮೋದಿ ಗುಜರಾತಿನ ಮುಖ್ಯಮಂತ್ರಿ ಆದಾಗಿನಿಂದ ಅದಾನಿಯ ಕಂಪನಿ ಕ್ರಮೇಣ ಮುನ್ನೆಲೆಗೆ ಬಂದಿದೆ. ಪ್ರಧಾನಿಯಾದ ಮೇಲಂತೂ ಅದಾನಿಯ ಆದಾಯ ಸಿಕ್ಕಾಪಟ್ಟೆ ಏರಿಕೆ ಕಂಡಿದೆ. ಇನ್ನು ಸಾಲದ ಸುಳಿಯಲ್ಲಿದ್ದ ಅನಿಲ್ ಅಂಬಾನಿ ಚೇತರಿಸಿಕೊಳ್ಳಲೂ ಮೋದಿ ನೆರವಾಗಿದ್ದಾರೆ.

(ಆಧಾರ: ನ್ಯೂಸ್‍ಕ್ಲಿಕ್)

ಅನುವಾದ: ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...