Homeಅಂಕಣಗಳುಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

ಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

- Advertisement -
- Advertisement -

| ಮಲ್ಲಿ |

ಮೋದಿಯ ಲೋಕಸಂಚಾರದ ಫಲಾನುಭವಿಗಳು: ಅಂಬಾನಿ ಮತ್ತು ಅದಾನಿ

ಮೋದಿ ವಿದೇಶ ಪ್ರವಾಸ ಕೈಗೊಂಡಾಗ ಸಾಕಷ್ಟು ಸಲ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿ ಜೊತೆಗಿದ್ದು, ಭೇಟಿಯಾದ ದೇಶಗಳ ಕಂಪನಿಗಳ ಜೊತೆಗೆ  ಇವರಿಬ್ಬರ ಕಂಪನಿಗಳು ಕನಿಷ್ಠ 18 ಪ್ರಮುಖ ಡೀಲ್‍ಗಳಿಗೆ ಸಹಿ ಹಾಕಿವೆ….. ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ.

ತಮ್ಮ ಅಧಿಕಾರವಧಿಯ ಮೊದಲ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 41 ಸಲ ವಿದೇಶ ಪ್ರವಾಸ ಮಾಡಿದ್ದು, 52 ದೇಶಗಳನ್ನು ಸಂದರ್ಶಿಸಿದ್ದಾರೆ. ಈ ಪ್ರವಾಸದ ಒಟ್ಟು ಅವಧಿ 165 ದಿನಗಳು. ಇದಕ್ಕಾಗಿ ಅವರು 355 ಕೋಟಿ ರೂ ಖರ್ಚು ಮಾಡಿದ್ದು, ಅದು ತೆರೆಗೆದಾರನ ಹಣವಾಗಿದೆ. ಬಹುಪಾಲು ವಿದೇಶಿ ಭೇಟಿಗಳಲ್ಲಿ ಅವರ ಜೊತೆ ಅಂಬಾನಿ, ಅದಾನಿ ಇದ್ದು, 16 ರಾಷ್ಟ್ರಗಳಲ್ಲಿ ಇವರಿಬ್ಬರ ಕಂಪನಿಗಳು 18 ಡೀಲ್‍ಗಳಿಗೆ ಸಹಿ ಹಾಕಿವೆ. ಇದರಲ್ಲಿ ಅದಾನಿ ಕಂಪನಿಗಳು 13 ಮತ್ತು ಅನಿಲ್ ಅಂಬಾನಿಯ ಕಂಪನಿ 5 ಡೀಲ್‍ಗಳಿಗೆ ಸಹಿ ಹಾಕಿವೆ. ಇಲ್ಲಿ ಅಂತಹ ಡೀಲ್‍ಗಳ ಕೆಲವನ್ನು ಇಲ್ಲಿ ನೀಡಿದ್ದೇವೆ.

ರಕ್ಷಣೆ

ಫ್ರಾನ್ಸ್

ಮೋದಿ ಭೇಟಿ: ಏಪ್ರಿಲ್ 09-12-2015 ಮತ್ತು  ಜೂನ್ 02-03-2017 (ಅನಿಲ್ ಅಂಬಾನಿ)

ಡೀಲ್ ದಿನ: ಮಾರ್ಚ್ 28-2015

ಮೋದಿ ರಫೇಲ್ ಡೀಲ್ ಘೋಷಿಸುವ 12 ದಿನ ಮೊದಲು ಅನಿಲ್ ಅಂಬಾನಿಯ ಆಗತಾನೇ ಹುಟ್ಟಿದ ಕಂಪನಿಯೊಂದು ಡಸಾಲ್ಟ್ ಕಂಪನಿಯೊಂದಿಗೆ ರಫೇಲ್ ಡೀಲ್ ಭಾಗವಾಗಿ ಒಪ್ಪಂದ ಮಾಡಿಕೊಂಡಿತು. ಅನುಭವಿ ಸರ್ಕಾರಿ ಎಚ್‍ಎಎಲ್ ಕಂಪನಿಯನ್ನು ತಿರಸ್ಕರಿಸಿ ಅಂಬಾನಿಯ ಅನನನುಭವಿ ಕಂಪನಿಯನ್ನು ರಿಲೆಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿಕೊಳ್ಳಲು ಪ್ರಧಾನಿ ಮೋದಿಯೇ ಕಾರಣ ಎಂಬ ಆರೋಪವಿದೆ. ಎರಡು ವರ್ಷಗಳಲ್ಲಿ ರಫೇಲ್ ವಿಮಾನಗಳು ಭಾರತಕ್ಕೆ ತಲುಪಬೇಕಿತ್ತು. ಇನ್ನೂ ಒಂದೂ ವಾಯುಸೇನೆಗೆ ದೊರೆತಿಲ್ಲ.

ಸ್ವೀಡನ್

ಡೀಲ್ ದಿನ: ಮಾರ್ಚ್ 22-2015 (ಅಂಬಾನಿ)

ಸ್ವೀಡನ್ ಪ್ರಧಾನಿಯ ಭಾರತ ಭೇಟಿ: ಫೆಬ್ರುವರಿ 13, 2016

ಡೀಲ್ ದಿನ : ಸೆಪ್ಟೆಂಬರ್ 1, 2017 (ಅದಾನಿ)

ಪ್ರಧಾನಿ ಭೇಟಿ: ಏಪ್ರಿಲ್ 16-18,  2018

ಇಲ್ಲಿ ಅಂಬಾನಿಯ ಕಂಪನಿ ಸ್ವೀಡನ್ನಿನ SAAB ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಭಾರತೀಯ ನೌಕಾದಳಕ್ಕೆ ಉನಮ್ಯಾನಡ್ ಏರಿಯಲ್ ವೆಹಿಕಲ್ (ಯುಎವಿ) ಪೂರೈಸುವ ಜವಾಬ್ದಾರಿ ಹೊರುತ್ತದೆ. ಪ್ರತಿ ಸಾಧನದ ಬೆಲೆ 1 ಸಾವಿರ ಕೋಟಿ.

ಅದೇ ಸ್ವೀಡನ್ ಕಂಪನಿಯೊಂದಿಗೆ ಸಿಂಗಲ್ ಎಂಜಿನ್ ಏರ್‍ಕ್ರಾಫ್ಟ್ ತಯಾರಿಸುವ 60 ಸಾವಿರ ಕೋಟಿ ಮೊತ್ತದ ಡೀಲ್‍ಗೆ ಅದಾನಿ ಸಹಿ ಮಾಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ 16 ದೇಶಗಳ  ಕಂಪನಿಗಳ ಜೊತೆಗೆ ಅಂಬಾನಿ ಮತ್ತು ಅದಾನಿಯ ಕಂಪನಿಗಳು ಡೀಲ್ ಮಾಡಿಕೊಳ್ಳುತ್ತವೆ. ಇಸ್ರೇಲ್, ರಷ್ಯಾ, ಅಮೆರಿಕ, ಜಪಾನ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಮೊಜಾಂಬಿಕ್, ಇರಾನ್, ಒಮನ್, ಬಾಂಗ್ಲಾ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ ಅವರ ಜತೆ ಅಂಬಾನಿ ಅಥವಾ ಅದಾನಿ ಅಥವಾ ಇಬ್ಬರೂ ಇರುತ್ತಿದ್ದರು.

ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ. ವಿಚಿತ್ರ ಎಂದರೆ ಡಿಫೆನ್ಸ್ ಸಲಕರಣೆಗಳಲ್ಲಿ ಯಾವುದೇ ಅನುಭವ ಇಲ್ಲದ ಅಂಬಾನಿ, ಅದಾನಿ ಕಂಪನಿಗಳಿಗೆ ಪ್ರಧಾನಿಯ ಪ್ರಭಾವದಿಂದ ಡಿಫೆನ್ಸ್ ಡೀಲ್‍ಗಳು ಸಿಕ್ಕಿವೆ!

 ಪಾಕ್ ಜತೆಗೂ ಚಕ್ಕಂದ!

ಮಾತೆತ್ತಿದ್ದರೆ ಪಾಕ್ ವಿರುದ್ಧ ಹರಿಹಾಯುವ ಮೋದಿ ಮತ್ತು ಅವರ ಭಕ್ತರಿಗೆ ಇದೇ ಅದಾನಿ ಪಾಕ್ ಜೊತೆಗೆ ಹಲವು ವಾಣಿಜ್ಯ ವ್ಯಹಾರ ಹೊಂದಿದ್ದಾರೆ. ಪ್ರಧಾನಿ ಏಕಾಏಕಿ 2015 ಡಿಸೆಂಬರ್ 25ರಂದು ಪಾಕ್‍ಗೆ ಭೇಟಿ ನೀಡಿದಾಗ ಅವರ ಜೊತೆ ಅದಾನಿಯೂ ಇದ್ದ! ಅದರ ಹಿಂದಿನ ವರ್ಷವೇ ಅದಾನಿ 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಡೀಲ್‍ಗೆ ಸಹಿ ಹಾಕಿದ್ದರು. ಎರಡು ದೇಶಗಳ ನಡುವಿನ ತಿಕ್ಕಾಟದ ಕಾರಣಕ್ಕೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ.

ಮೋದಿ ಗುಜರಾತಿನ ಮುಖ್ಯಮಂತ್ರಿ ಆದಾಗಿನಿಂದ ಅದಾನಿಯ ಕಂಪನಿ ಕ್ರಮೇಣ ಮುನ್ನೆಲೆಗೆ ಬಂದಿದೆ. ಪ್ರಧಾನಿಯಾದ ಮೇಲಂತೂ ಅದಾನಿಯ ಆದಾಯ ಸಿಕ್ಕಾಪಟ್ಟೆ ಏರಿಕೆ ಕಂಡಿದೆ. ಇನ್ನು ಸಾಲದ ಸುಳಿಯಲ್ಲಿದ್ದ ಅನಿಲ್ ಅಂಬಾನಿ ಚೇತರಿಸಿಕೊಳ್ಳಲೂ ಮೋದಿ ನೆರವಾಗಿದ್ದಾರೆ.

(ಆಧಾರ: ನ್ಯೂಸ್‍ಕ್ಲಿಕ್)

ಅನುವಾದ: ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...