Homeಅಂಕಣಗಳುಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

ಮೋದಿ ಬಂಡವಾಳಶಾಹಿಗಳ ಬಾಲ ಎಂಬುದಕ್ಕೆ ಇನ್ನೆಷ್ಟು ಸಾಕ್ಷ್ಯ ಬೇಕು?

- Advertisement -
- Advertisement -

| ಮಲ್ಲಿ |

ಮೋದಿಯ ಲೋಕಸಂಚಾರದ ಫಲಾನುಭವಿಗಳು: ಅಂಬಾನಿ ಮತ್ತು ಅದಾನಿ

ಮೋದಿ ವಿದೇಶ ಪ್ರವಾಸ ಕೈಗೊಂಡಾಗ ಸಾಕಷ್ಟು ಸಲ ಅನಿಲ್ ಅಂಬಾನಿ ಮತ್ತು ಗೌತಮ್ ಅದಾನಿ ಜೊತೆಗಿದ್ದು, ಭೇಟಿಯಾದ ದೇಶಗಳ ಕಂಪನಿಗಳ ಜೊತೆಗೆ  ಇವರಿಬ್ಬರ ಕಂಪನಿಗಳು ಕನಿಷ್ಠ 18 ಪ್ರಮುಖ ಡೀಲ್‍ಗಳಿಗೆ ಸಹಿ ಹಾಕಿವೆ….. ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ.

ತಮ್ಮ ಅಧಿಕಾರವಧಿಯ ಮೊದಲ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 41 ಸಲ ವಿದೇಶ ಪ್ರವಾಸ ಮಾಡಿದ್ದು, 52 ದೇಶಗಳನ್ನು ಸಂದರ್ಶಿಸಿದ್ದಾರೆ. ಈ ಪ್ರವಾಸದ ಒಟ್ಟು ಅವಧಿ 165 ದಿನಗಳು. ಇದಕ್ಕಾಗಿ ಅವರು 355 ಕೋಟಿ ರೂ ಖರ್ಚು ಮಾಡಿದ್ದು, ಅದು ತೆರೆಗೆದಾರನ ಹಣವಾಗಿದೆ. ಬಹುಪಾಲು ವಿದೇಶಿ ಭೇಟಿಗಳಲ್ಲಿ ಅವರ ಜೊತೆ ಅಂಬಾನಿ, ಅದಾನಿ ಇದ್ದು, 16 ರಾಷ್ಟ್ರಗಳಲ್ಲಿ ಇವರಿಬ್ಬರ ಕಂಪನಿಗಳು 18 ಡೀಲ್‍ಗಳಿಗೆ ಸಹಿ ಹಾಕಿವೆ. ಇದರಲ್ಲಿ ಅದಾನಿ ಕಂಪನಿಗಳು 13 ಮತ್ತು ಅನಿಲ್ ಅಂಬಾನಿಯ ಕಂಪನಿ 5 ಡೀಲ್‍ಗಳಿಗೆ ಸಹಿ ಹಾಕಿವೆ. ಇಲ್ಲಿ ಅಂತಹ ಡೀಲ್‍ಗಳ ಕೆಲವನ್ನು ಇಲ್ಲಿ ನೀಡಿದ್ದೇವೆ.

ರಕ್ಷಣೆ

ಫ್ರಾನ್ಸ್

ಮೋದಿ ಭೇಟಿ: ಏಪ್ರಿಲ್ 09-12-2015 ಮತ್ತು  ಜೂನ್ 02-03-2017 (ಅನಿಲ್ ಅಂಬಾನಿ)

ಡೀಲ್ ದಿನ: ಮಾರ್ಚ್ 28-2015

ಮೋದಿ ರಫೇಲ್ ಡೀಲ್ ಘೋಷಿಸುವ 12 ದಿನ ಮೊದಲು ಅನಿಲ್ ಅಂಬಾನಿಯ ಆಗತಾನೇ ಹುಟ್ಟಿದ ಕಂಪನಿಯೊಂದು ಡಸಾಲ್ಟ್ ಕಂಪನಿಯೊಂದಿಗೆ ರಫೇಲ್ ಡೀಲ್ ಭಾಗವಾಗಿ ಒಪ್ಪಂದ ಮಾಡಿಕೊಂಡಿತು. ಅನುಭವಿ ಸರ್ಕಾರಿ ಎಚ್‍ಎಎಲ್ ಕಂಪನಿಯನ್ನು ತಿರಸ್ಕರಿಸಿ ಅಂಬಾನಿಯ ಅನನನುಭವಿ ಕಂಪನಿಯನ್ನು ರಿಲೆಯನ್ಸ್ ಡಿಫೆನ್ಸ್ ಅನ್ನು ಆಯ್ಕೆ ಮಾಡಿಕೊಳ್ಳಲು ಪ್ರಧಾನಿ ಮೋದಿಯೇ ಕಾರಣ ಎಂಬ ಆರೋಪವಿದೆ. ಎರಡು ವರ್ಷಗಳಲ್ಲಿ ರಫೇಲ್ ವಿಮಾನಗಳು ಭಾರತಕ್ಕೆ ತಲುಪಬೇಕಿತ್ತು. ಇನ್ನೂ ಒಂದೂ ವಾಯುಸೇನೆಗೆ ದೊರೆತಿಲ್ಲ.

ಸ್ವೀಡನ್

ಡೀಲ್ ದಿನ: ಮಾರ್ಚ್ 22-2015 (ಅಂಬಾನಿ)

ಸ್ವೀಡನ್ ಪ್ರಧಾನಿಯ ಭಾರತ ಭೇಟಿ: ಫೆಬ್ರುವರಿ 13, 2016

ಡೀಲ್ ದಿನ : ಸೆಪ್ಟೆಂಬರ್ 1, 2017 (ಅದಾನಿ)

ಪ್ರಧಾನಿ ಭೇಟಿ: ಏಪ್ರಿಲ್ 16-18,  2018

ಇಲ್ಲಿ ಅಂಬಾನಿಯ ಕಂಪನಿ ಸ್ವೀಡನ್ನಿನ SAAB ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಭಾರತೀಯ ನೌಕಾದಳಕ್ಕೆ ಉನಮ್ಯಾನಡ್ ಏರಿಯಲ್ ವೆಹಿಕಲ್ (ಯುಎವಿ) ಪೂರೈಸುವ ಜವಾಬ್ದಾರಿ ಹೊರುತ್ತದೆ. ಪ್ರತಿ ಸಾಧನದ ಬೆಲೆ 1 ಸಾವಿರ ಕೋಟಿ.

ಅದೇ ಸ್ವೀಡನ್ ಕಂಪನಿಯೊಂದಿಗೆ ಸಿಂಗಲ್ ಎಂಜಿನ್ ಏರ್‍ಕ್ರಾಫ್ಟ್ ತಯಾರಿಸುವ 60 ಸಾವಿರ ಕೋಟಿ ಮೊತ್ತದ ಡೀಲ್‍ಗೆ ಅದಾನಿ ಸಹಿ ಮಾಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ 16 ದೇಶಗಳ  ಕಂಪನಿಗಳ ಜೊತೆಗೆ ಅಂಬಾನಿ ಮತ್ತು ಅದಾನಿಯ ಕಂಪನಿಗಳು ಡೀಲ್ ಮಾಡಿಕೊಳ್ಳುತ್ತವೆ. ಇಸ್ರೇಲ್, ರಷ್ಯಾ, ಅಮೆರಿಕ, ಜಪಾನ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಮೊಜಾಂಬಿಕ್, ಇರಾನ್, ಒಮನ್, ಬಾಂಗ್ಲಾ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದಾಗ ಅವರ ಜತೆ ಅಂಬಾನಿ ಅಥವಾ ಅದಾನಿ ಅಥವಾ ಇಬ್ಬರೂ ಇರುತ್ತಿದ್ದರು.

ಕೆಲವು ಡೀಲ್‍ಗಳು ಪ್ರಧಾನಿ ಭೇಟಿ ಸಂದರ್ಭದಲ್ಲೇ ಕುದುರಿದರೆ, ಕೆಲವು ಭೇಟಿಗೂ ಮೊದಲು, ಇನ್ನು ಕೆಲವು ಭೇಟಿಯ ನಂತರ ಕುದುರಿವೆ. ವಿಚಿತ್ರ ಎಂದರೆ ಡಿಫೆನ್ಸ್ ಸಲಕರಣೆಗಳಲ್ಲಿ ಯಾವುದೇ ಅನುಭವ ಇಲ್ಲದ ಅಂಬಾನಿ, ಅದಾನಿ ಕಂಪನಿಗಳಿಗೆ ಪ್ರಧಾನಿಯ ಪ್ರಭಾವದಿಂದ ಡಿಫೆನ್ಸ್ ಡೀಲ್‍ಗಳು ಸಿಕ್ಕಿವೆ!

 ಪಾಕ್ ಜತೆಗೂ ಚಕ್ಕಂದ!

ಮಾತೆತ್ತಿದ್ದರೆ ಪಾಕ್ ವಿರುದ್ಧ ಹರಿಹಾಯುವ ಮೋದಿ ಮತ್ತು ಅವರ ಭಕ್ತರಿಗೆ ಇದೇ ಅದಾನಿ ಪಾಕ್ ಜೊತೆಗೆ ಹಲವು ವಾಣಿಜ್ಯ ವ್ಯಹಾರ ಹೊಂದಿದ್ದಾರೆ. ಪ್ರಧಾನಿ ಏಕಾಏಕಿ 2015 ಡಿಸೆಂಬರ್ 25ರಂದು ಪಾಕ್‍ಗೆ ಭೇಟಿ ನೀಡಿದಾಗ ಅವರ ಜೊತೆ ಅದಾನಿಯೂ ಇದ್ದ! ಅದರ ಹಿಂದಿನ ವರ್ಷವೇ ಅದಾನಿ 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಡೀಲ್‍ಗೆ ಸಹಿ ಹಾಕಿದ್ದರು. ಎರಡು ದೇಶಗಳ ನಡುವಿನ ತಿಕ್ಕಾಟದ ಕಾರಣಕ್ಕೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ.

ಮೋದಿ ಗುಜರಾತಿನ ಮುಖ್ಯಮಂತ್ರಿ ಆದಾಗಿನಿಂದ ಅದಾನಿಯ ಕಂಪನಿ ಕ್ರಮೇಣ ಮುನ್ನೆಲೆಗೆ ಬಂದಿದೆ. ಪ್ರಧಾನಿಯಾದ ಮೇಲಂತೂ ಅದಾನಿಯ ಆದಾಯ ಸಿಕ್ಕಾಪಟ್ಟೆ ಏರಿಕೆ ಕಂಡಿದೆ. ಇನ್ನು ಸಾಲದ ಸುಳಿಯಲ್ಲಿದ್ದ ಅನಿಲ್ ಅಂಬಾನಿ ಚೇತರಿಸಿಕೊಳ್ಳಲೂ ಮೋದಿ ನೆರವಾಗಿದ್ದಾರೆ.

(ಆಧಾರ: ನ್ಯೂಸ್‍ಕ್ಲಿಕ್)

ಅನುವಾದ: ಮಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...