Homeಕರ್ನಾಟಕಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯಲಿವೆ ಎಂಬ ನಿರ್ಧಾರವನ್ನು ವಿದ್ಯಾರ್ಥಿಗಳನ್ನು ಒಳಗೊಳ್ಳದೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದಾಗಿ ಮಾರ್ಚ್‌ನಲ್ಲಿ ಮುಂದೂಡಲ್ಪಟ್ಟ ಸೆಮಿಸ್ಟರ್ ನ ಅಂತಿಮ ಪರೀಕ್ಷೆಗಳನ್ನು ಜುಲೈ 13 ರಂದು ನಡೆಸಬೇಕು ಎನ್ನುವ ಕ್ರೈಸ್ಟ್ ವಿಶ್ವವಿದ್ಯಾನಿಲಯದ ನಿರ್ಧಾರವನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯಲಿವೆ ಎಂಬ ನಿರ್ಧಾರವನ್ನು ವಿದ್ಯಾರ್ಥಿಗಳನ್ನು ಒಳಗೊಳ್ಳದೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಾಂಕ್ರಾಮಿಕ ರೋಗದ ನಡುವೆ ಮತ್ತು ಲಾಕ್‌ಡೌನ್ ಮಧ್ಯದಲ್ಲಿ, ಪೂರ್ವಭಾವಿ ರಜೆ ಇಲ್ಲದೆ, ಒಂದು ದಿನದಲ್ಲಿ ಆನ್‌ಲೈನ್ ಪರೀಕ್ಷೆ ಅಥವಾ ಕಾಲೇಜುಗಳು ಮತ್ತೆ ತೆರೆದಾಗ  ಭೌತಿಕ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಂದನ್ನು ಆಯ್ಕೆ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳನ್ನು ಬರೆಯಬೇಕಾಗಿದೆ ಮತ್ತು ಇತರ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬಹುದು ಎಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಆದೇಶವನ್ನು ಉಲ್ಲೇಖಿಸಿ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ವಿಶ್ವವಿದ್ಯಾಲಯಕ್ಕೆ ಮನವಿ ನೀಡಿದರು.

ಹಿಂದಿನ ಸೆಮಿಸ್ಟರ್‌ನಲ್ಲಿ ಅವರ ಆಂತರಿಕ ಅಂಕಗಳು ಮತ್ತು ಸಾಧನೆಯ ಆಧಾರದ ಮೇಲೆ ಇತರ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದೆ ಎಂದು ಹೇಳಿದೆ. “ಕ್ರೈಸ್ಟ್ (ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಗಿದೆ) ಯುಜಿಸಿ ನಿಯಮಗಳು ಮತ್ತು ಮಾರ್ಗಸೂಚಿಗಳಿಂದ ನಿರ್ದೇಶಿಸಲ್ಪಡುತ್ತದೆ.

ಯುಜಿಸಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ವಿಶ್ವವಿದ್ಯಾಲಯದ ನಿರ್ಧಾರದ ಪ್ರಕಾರ 2020 ರ ಜುಲೈ 13 ರಿಂದ ನಿಗದಿತ ಪರೀಕ್ಷೆಗಳನ್ನು ಘೋಷಿಸಿದ ವೇಳಾಪಟ್ಟಿಯ ಪ್ರಕಾರ ನಡೆಸಲಾಗುವುದು” ಎಂದು ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ ಮಧ್ಯಭಾಗದಲ್ಲಿ, ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ಆರಿಸಿಕೊಳ್ಳಬೇಕು ಅಥವಾ ವಿಶ್ವವಿದ್ಯಾಲಯ ತೆರೆದಾಗ ಭೌತಿಕ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿತು. ಆದರೆ ಅವರಿಗೆ ಯಾವುದೇ ಪೂರ್ವಸಿದ್ಧತಾ ರಜೆ ದೊರೆತಿರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆಯನ್ನು ಆರಿಸಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ವಿದ್ಯಾರ್ಥಿ ಅಜಯ್ ಹೇಳಿದ್ದಾರೆ.

ಆನ್‌ಲೈನ್ ಪರೀಕ್ಷೆಗಳಿಗೆ ಹೊಸ ಸರ್ವರ್ ಸ್ಥಾಪಿಸಲು ಈಗಾಗಲೇ ಪಾವತಿಸಿರುವ ಪರೀಕ್ಷಾ ಶುಲ್ಕವನ್ನು ಹೊರತುಪಡಿಸಿ ವಿಶ್ವವಿದ್ಯಾಲಯವು 500 ರೂ ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ವಿದ್ಯಾರ್ಥಿಗಳು The news minute ಗೆ ತಿಳಿಸಿದ್ದಾರೆ.

ಆದಾಗ್ಯೂ, ಪ್ರತಿ ವಿದ್ಯಾರ್ಥಿಗೆ ಇಂಟರ್ನೆಟ್ ಸಂಪರ್ಕ ಅಥವಾ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾಲಯವು ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ ಎಂದು ಅವರು ಹೇಳುತ್ತಾರೆ.

“ನನಗೆ ವೈಫೈ ಸಂಪರ್ಕವನ್ನು ಪಡೆಯಲು ಸಾಧ್ಯವಿಲ್ಲ. ನಾನು ಬಳಸುವ ಮೊಬೈಲ್ ನೆಟ್‌ವರ್ಕ್ ನನಗೆ ದಿನಕ್ಕೆ 1 ಜಿಬಿ ಡೇಟಾವನ್ನು ಮಾತ್ರ ಅನುಮತಿಸುತ್ತದೆ. ಆದ್ದರಿಂದ ಪರೀಕ್ಷೆಗೆ ಹಾಜರಾಗಲು, ನಾನು ಪ್ರತಿದಿನ 2 ಜಿಬಿ ರೀಚಾರ್ಜ್ ಖರೀದಿಸಬೇಕಾಗುತ್ತದೆ. ನನ್ನ ಮನೆಯೊಳಗೆ ನನಗೆ ಇಂಟರ್ನೆಟ್ ಸಿಗುವುದಿಲ್ಲ. ಆದ್ದರಿಂದ ನಾನು ಬಾಲ್ಕನಿಯಲ್ಲಿ ಅಥವಾ ನನ್ನ ಟೆರೇಸ್‌ನಲ್ಲಿ ಕುಳಿತುಕೊಳ್ಳಬೇಕು. ಪರೀಕ್ಷೆ ತೆಗೆದುಕೊಂಡ ನಂತರ 2 ನಿಮಿಷಗಳವರೆಗೆ ಉತ್ತರಿಸಲಿಲ್ಲವಾದರೆ, ನಕಲು ಕಾರಣವೆಂದು ನನ್ನ ಫಲಿತಾಂಶವನ್ನು ತಡೆಹಿಡಿಯಲಾಗುತ್ತದೆ ಎಂದು ಕ್ರೈಸ್ಟ್ ವಿವಿಯ ಇನ್ನೊಬ್ಬ ವಿದ್ಯಾರ್ಥಿ ಹೇಳಿದ್ದಾರೆ.

ಜೂನ್ 3 ರಂದು ಹೊಸ ಸೆಮಿಸ್ಟರ್‌ಗೆ ತರಗತಿಗಳು ಪ್ರಾರಂಭವಾದಾಗ, ಮಳೆಯಿಂದಾಗಿ ಅವರ ಇಂಟರ್ನೆಟ್ ಸಂಪರ್ಕಕ್ಕೆ ಅಡ್ಡಿಯುಂಟಾಗಿ ಆ ತರಗತಿಯ ಹಾಜರಾತಿಯನ್ನು ಕಳೆದುಕೊಂಡರು ಎಂದು ಅವರು ಹೇಳುತ್ತಾರೆ.

“ನಾವು ಅಗತ್ಯ ನೋಟ್ಸ್‌ಗಳನ್ನು ಹೊಂದಿಲ್ಲ. ವೈಯಕ್ತಿಕವಾಗಿ, ನಾನು ಪಿಜಿಯಲ್ಲಿ ವಾಸಿಸುತ್ತಿದ್ದೇನೆ, ನನ್ನ ನೋಟ್ಸ್‌ಗಳನ್ನು ಪಿಜಿಯಲ್ಲಿ ಬಿಟ್ಟುಬಿಟ್ಟಿದ್ದೇನೆ ಆದರೆ ಈಗ ಸುಲಭವಾಗಿ ಲಭ್ಯವಿಲ್ಲದ ಆನ್‌ಲೈನ್ ವಸ್ತುಗಳನ್ನು ಹುಡುಕುತ್ತಿದ್ದೇನೆ. ಇದು ನನ್ನ ವಿಷಯ. ಈ ರೀತಿಯಿರುವ, ಕಲಿಕಾ ಸಾಮಗ್ರಿಗಳನ್ನು ಹಾಸ್ಟೆಲ್ ಮತ್ತು ತಾವು ವಾಸವಿದ್ದ ರೂಂ ಗಳಲ್ಲಿ ಬಿಟ್ಟು ಬಂದಿರುವ ವಿದ್ಯಾರ್ಥಿಗಳ ಸಂಖ್ಯೆ ದೊಡ್ಡದಿದೆ. ಶಿಕ್ಷಕರು ಸಹ ತಮ್ಮದೇ ಆದ ಸಂಪನ್ಮೂಲಗಳನ್ನು ಹೊಂದಿಲ್ಲ ಎಂದು ಕ್ರೈಸ್ಟ್ ವಿವಿಯ ವಿದ್ಯಾರ್ಥಿ ರಾಜೀವ್  ಹೇಳುತ್ತಾರೆ.

ಆಂತರಿಕ ಸಮೀಕ್ಷೆಯಲ್ಲಿ ಭಾಗವಹಿಸಿದ 2,000- ವಿದ್ಯಾರ್ಥಿಗಳಲ್ಲಿ 90 ಪ್ರತಿಶತದಷ್ಟು ಜನರು ಆನ್‌ಲೈನ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಮತ್ತು ಆಂತರಿಕ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತಾತ್ಕಾಲಿಕವಾಗಿ ಉತ್ತೀರ್ಣಗೊಳಿಸಬೇಕೆಂದು ಮತದಾನ ಮಾಡಿದ್ದಾರೆ.

ಕ್ರೈಸ್ಟ್ ವಿಶ್ವವಿದ್ಯಾಲಯದ ಉಪಕುಲಪತಿ ಫಾದರ್ ಅಬ್ರಹಾಂ 94.47% ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಮತ್ತು ಜುಲೈನಲ್ಲಿ ನಡೆಯಲಿರುವ ಪರೀಕ್ಷೆಯನ್ನು ಬರೆಯಲು ಒಪ್ಪಿದ್ದಾರೆ ಎಂದು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.


ಇದನ್ನೂ ಓದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...