Homeಮುಖಪುಟಕಾಶ್ಮೀರದಲ್ಲಿ ಕ್ರಿಶ್ಚಿಯನ್ ಮಿಷನರಿ ಗುಂಪಿನ ಮೇಲೆ ಹಿಂದುತ್ವ ಗುಂಪಿನಿಂದ ದಾಳಿ

ಕಾಶ್ಮೀರದಲ್ಲಿ ಕ್ರಿಶ್ಚಿಯನ್ ಮಿಷನರಿ ಗುಂಪಿನ ಮೇಲೆ ಹಿಂದುತ್ವ ಗುಂಪಿನಿಂದ ದಾಳಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಕುಟುಂಬದೊಂದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ತಮಿಳುನಾಡಿನ ಕ್ರಿಶ್ಚಿಯನ್ ಮಿಷನರಿಗಳ ಗುಂಪಿನ ಮೇಲೆ ಹಿಂದೂತ್ವವಾದಿ ಗುಂಪೊಂದು ದಾಳಿ ನಡೆಸಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಅವರ ಮೇಲೆ ಬಲವಂತದ ಮತಾಂತರದ ಆರೋಪ ಹೊರಿಸಲಾಗಿದೆ.

ಅಕ್ಟೋಬರ್ 23 ರಂದು, ಪ್ರಾರ್ಥನೆಯ ಮಧ್ಯದಲ್ಲಿ ಈ ಘಟನೆ ಸಂಭವಿಸಿದೆ. ಎಂಟು ಜನರ ಗುಂಪು ಪ್ರಾರ್ಥನೆಯನ್ನು ಅಡ್ಡಿಪಡಿಸಿ ಅವರ ಮೇಲೆ ದಾಳಿ ನಡೆಸಿದೆ. ಪೊಲೀಸರು ಅವರನ್ನು ತಕ್ಷಣ ಹೊರಹೋಗುವಂತೆ ಹೇಳಿದ್ದು, ಗ್ರಾಮದಿಂದ ಸುರಕ್ಷಿತವಾಗಿ ಹೊರಬರಲು ರಕ್ಷಣೆ ನೀಡುವಂತೆ ಗುಂಪು ಮನವಿ ಮಾಡಿದೆ.

ಗುಂಪು ಪೊಲೀಸ್ ವಾಹನದ ಹಿಂದೆ 500 ಮೀಟರ್‌ಗಳವರೆಗೆ ಹಿಂಬಾಲಿಸಿತು, ಆಗ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಕಬ್ಬಿಣದ ರಾಡ್‌ಗಳು ಮತ್ತು ಕೋಲುಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದ ಗುಂಒಉ ರಸ್ತೆಯನ್ನು ತಡೆದಿದ್ದಾರೆ.

“ನಮ್ಮನ್ನು ಹೊಡೆಯಲು ಮಿನಿಬಸ್ ಬಾಗಿಲುಗಳನ್ನು ಬಲವಂತವಾಗಿ ತೆರೆದರು, ವಿಂಡ್‌ಶೀಲ್ಡ್ ಮತ್ತು ಕಿಟಕಿಗಳನ್ನು ಒಡೆದು ಕೆಟ್ಟದಾಗಿ ನಿಂದಿಸಿದರು. ಗುಂಪು ಸ್ಥಳೀಯ ಹಿಂದೂಗಳನ್ನು ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸುತ್ತಿದೆ ಎಂದು ಗುಂಪು ಆರೋಪಿಸಿತು” ಎಂದು ದಾಳಿಗೊಳಗಾದವರು ಹೇಳಿದ್ದಾರೆ.

ದಾಳಿಕೋರರಿಗಿಂತ ಮೊದಲು ಬಂದ ಎಂಟು ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರು ಮಾತ್ರ ಗಲಾಟೆಯಲ್ಲಿ ಮಧ್ಯಪ್ರವೇಶಿಸಿದರು. ಇತರರು ಏನೂ ಮಾಡಲಿಲ್ಲ ಎಂದು ಮಿಷನರಿ ಸದಸ್ಯರು ನೆನಪಿಸಿಕೊಂಡರು. ಪೊಲೀಸರು ಗುಂಪಿನೊಂದಿಗೆ ಮೊದಲೇ ಒಪ್ಪಂದ ಮಾಡಿಕೊಂಡಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಓರ್ವ ಮಹಿಳೆ ಸೇರಿದಂತೆ ತಂಡದ ಸುಮಾರು ನಾಲ್ವರು ಸದಸ್ಯರು ಗಾಯಗೊಂಡರು. ದಾಳಿಯ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸ್ ಇಲಾಖೆಯ ಮುಖ್ಯಸ್ಥೆ ಮೋಹಿತಾ ಶರ್ಮಾ, ಬಲಿಪಶುಗಳು ತಮ್ಮ ವಸತಿ ಸೌಕರ್ಯವನ್ನು ತಲುಪಲು ಸಹಾಯ ಮಾಡಿದರು.

ದಾಳಿಕೋರರ ವಿರುದ್ಧ ಔಪಚಾರಿಕ ದೂರು ದಾಖಲಿಸುವಂತೆ ಅವರು ಸ್ಥಳೀಯ ಆತಿಥೇಯ ಕುಟುಂಬವನ್ನು ಒತ್ತಾಯಿಸಿದರು.

ಮರುದಿನ, ಪೊಲೀಸ್‌ ಇಲಾಖೆ ಕರ್ತವ್ಯ ಲೋಪಕ್ಕಾಗಿ ಎಂಟು ಅಧಿಕಾರಿಗಳನ್ನು ಅಮಾನತುಗೊಳಿಸಿದರು. ರವೀಂದ್ರ ಸಿಂಗ್ ಥೇಲಾ ಮತ್ತು ರೋಹಿತ್ ಶರ್ಮಾ ಎಂದು ಗುರುತಿಸಲಾದ ಇಬ್ಬರು ಪ್ರಮುಖ ದಾಳಿಕೋರರನ್ನು ಬಂಧಿಸಿದರು. ಇಬ್ಬರನ್ನೂ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಥೇಲಾ ಅವರನ್ನು ಗೋರಕ್ಷಕ ಕೃತ್ಯಗಳನ್ನು ನಿರ್ವಹಿಸುವ ಸ್ಥಳೀಯ ಬಿಜೆಪಿ ನಾಯಕ ಎಂದು ಕರೆಯಲಾಗುತ್ತದೆ. ಈ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳನ್ನು ವರದಿ ಮಾಡುವ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಸೇರಿದಂತೆ ಅವರ ವಿರುದ್ಧ ಹಲವಾರು ಪ್ರಕರಣಗಳು ಬಾಕಿ ಇವೆ.

ಆದರೆ, ಗುಂಪಿನ ಸದಸ್ಯರನ್ನು ಬಿಡುಗಡೆ ಮಾಡಿದ ನಂತರ, ಅವರು ಮಿಷನರಿ ಗುಂಪಿನ ವಿರುದ್ಧ ಆಹಾರ ಮತ್ತು ಹಣದ ಮೂಲಕ ನಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸುವಂತೆ ಆಮಿಷವೊಡ್ಡಿದ ಆರೋಪದ ಮೇಲೆ ದೂರು ದಾಖಲಿಸಿದರು.

ತಂಡವನ್ನು ಒಂದು ದಿನದ ಕಾಲ ಕಸ್ಟಡಿಯಲ್ಲಿ ಇರಿಸಲಾಯಿತು, ನಂತರ ನ್ಯಾಯಾಧೀಶರು ಸಾಕಷ್ಟು ಪುರಾವೆಗಳಿಲ್ಲ ಎಂದು ಹೇಳಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು. ಮರುದಿನ ಅವರನ್ನು ಖುಲಾಸೆಗೊಳಿಸಲಾಯಿತು.

ಮಿಷನರಿ ಕಳೆದ ಹತ್ತು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಬರುತ್ತಿದ್ದಾರೆ. ಸ್ಥಳೀಯ ಕುಟುಂಬವೊಂದು ಅವರನ್ನು ಪ್ರಾರ್ಥನೆ ಮತ್ತು ಊಟಕ್ಕೆ ಆಹ್ವಾನಿಸಿದಾಗ ಮಾತ್ರ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಇದಲ್ಲದೆ, ಕಳೆದ ವರ್ಷಗಳಲ್ಲಿ ಅವರು ಹಳ್ಳಿಯ ಎರಡು ಕ್ರಿಶ್ಚಿಯನ್ ಕುಟುಂಬಗಳ ಆಹ್ವಾನದ ಮೇರೆಗೆ ಪ್ರತಿ ತಿಂಗಳು ಈ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾರೆ.

ಬಿಹಾರ ಚುನಾವಣೆಯಲ್ಲಿ ವಿಶ್ವಬ್ಯಾಂಕ್‌ನ 14,000 ಕೋಟಿ ರೂಪಾಯಿಗಳ ನಿಧಿ ಬಳಕೆ: ಪ್ರಶಾಂತ್ ಕಿಶೋರ್ ಪಕ್ಷದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...