Homeಮುಖಪುಟಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಅಸ್ಪೃಶ್ಯತೆ ಆಚರಣೆ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಇಲ್ಲ ಎಂಬ ಕಾರಣಕ್ಕೆ ದಲಿತರು ಮತಾಂತರವಾಗಿದ್ದು, ಅಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

“ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವ ದಲಿತರಿಗೆ ಪರಿಶಿಷ್ಟ ಜಾತಿ(ಎಸ್‌ಸಿ) ಸ್ಥಾನಮಾನ ನೀಡಲು ಸಾಧ್ಯವಿಲ್ಲ” ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಕ್ರೈಸ್ತ ಮತ್ತು ಇಸ್ಲಾಂ ವಿದೇಶಿ ಧರ್ಮಗಳಾಗಿದ್ದು, ಅವುಗಳಿಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

“1950ರ ಸಂವಿಧಾನದ(ಪರಿಶಿಷ್ಟ ಜಾತಿ) ಆದೇಶದ ಪ್ರಕಾರ ಪರಿಶಿಷ್ಟ ಜಾತಿಯ ಜನರು ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರೆ ಮಾತ್ರ ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬಹುದು. ವಿದೇಶಿ ಧರ್ಮಗಳಾದ ಕ್ರೈಸ್ತ ಮತ್ತು ಇಸ್ಲಾಂಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಒಕ್ಕೂಟ ಸರ್ಕಾರವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕ್ರೈಸ್ತ ಮತ್ತು ಇಸ್ಲಾಂನಲ್ಲಿ ಅಸ್ಪೃಶ್ಯತೆಯಂತಹ ದಬ್ಬಾಳಿಕೆಗಳು ಇಲ್ಲ ಎಂಬುದನ್ನು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶವು ಈಗಾಗಲೇ ಸಾಬೀತುಪಡಿಸಿದೆ. ಆ ಎರಡೂ ಧರ್ಮಗಳಲ್ಲಿ ಅಸ್ಪೃಶ್ಯತೆಯಂಥ ಆಚರಣೆಗಳು ಇಲ್ಲ ಎಂಬ ಕಾರಣಕ್ಕೇ ದಲಿತರು ಆ ಧರ್ಮಗಳಿಗೆ ಮತಾಂತರವಾಗಿದ್ದಾರೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ. ಹಾಗಾಗಿ, ಅವರು ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಮೀಸಲಾತಿ ಪಡೆಯಲು ಸಾಧ್ಯವಿಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

“ಹಿಂದೂ ಧರ್ಮದಲ್ಲಿರುವ ದಲಿತರ ಮೇಲೆ ಅಸ್ಪೃಶ್ಯತೆಯಂಥ ದಬ್ಬಾಳಿಕೆ ಮುಂದುವರಿದಿದೆ. ಇಂಥ ಸಮಯದಲ್ಲಿ ಕ್ರಿಶ್ಚಿಯನ್‌ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವವರಿಗೆ ಮೀಸಲಾತಿ ವಿಸ್ತರಿಸಿದರೆ, ಪರಿಶಿಷ್ಟ ಜಾತಿಯ ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಹಾಗೆ ಮೀಸಲಾತಿ ವಿಸ್ತರಿಸುವುದು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆಶಯದ ಉಲ್ಲಂಘನೆಯಾಗುತ್ತದೆ” ಎಂದು ಅಫಿಡವಿಟ್‌ ಹೇಳಿದೆ.

ಇದೇ ವೇಳೆ ಒಕ್ಕೂಟ ಸರ್ಕಾರವು ಬೌದ್ಧರಿಗೆ ಮೀಸಲಾತಿ ನೀಡುವುದನ್ನು ಸಮರ್ಥಿಸಿಕೊಂಡಿದೆ. “ಕೆಲವು ಸಾಮಾಜಿಕ ಆಚರಣೆಗಳ ಕಾರಣದಿಂದ 1956ರಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಕರೆಯ ಮೇರೆಗೆ ಪರಿಶಿಷ್ಟ ಜಾತಿಯ ಜನರು ಬೌದ್ಧ ಧರ್ಮಕ್ಕೆ ಮತಾಂತರವಾದರು. ಹೀಗೆ ಮತಾಂತರ ಆದವರ ಮೂಲ ಜಾತಿ ಯಾವುದು ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಆದರೆ, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರ ಮೂಲ ಜಾತಿ ಪತ್ತೆ ಮಾಡಲು ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿದೆ.

“ಆದರೆ, ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ನಡೆಯುವ ಮತಾಂತರದ ಪ್ರಕ್ರಿಯೆ ಭಿನ್ನವಾಗಿದೆ. ಜತೆಗೆ ಈ ಧರ್ಮಗಳಿಗೆ ಮತಾಂತರವಾದ ಕಾರಣಗಳೂ ಬೇರೆ ಬೇರೆ. ಶತಮಾನಗಳಿದಂದಲೂ ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗಳು ನಡೆಯುತ್ತಿವೆ”

ಇದನ್ನೂ ಓದಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

“2007ರಲ್ಲಿ ನ್ಯಾಯಮೂರ್ತಿ ರಂಗನಾಥ್‌ ಮಿಶ್ರಾ ಆಯೋಗದ ವರದಿಯಲ್ಲಿ ಎಲ್ಲ ಧರ್ಮದಲ್ಲಿರುವ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕು ಎಂದು ಹೇಳಲಾಗಿತ್ತು. ಆದರೆ, ಈ ವರದಿಯು ದೋಷಪೂರಿತವಾಗಿದೆ. ಯಾವುದೇ ಕ್ಷೇತ್ರ ಅಧ್ಯಯನ ನಡೆಸದೆ ವರದಿ ಅಂಗೀಕರಿಸಲು ಆಗಲ್ಲ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸಿಪಿಐಎಲ್‌‌ ಎಂಬ ಸ್ವಯಂಸೇವಾ ಸಂಸ್ಥೆ ಅರ್ಜಿ(ಪಿಐಎಲ್‌) ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಅರ್ಜಿ ಸಲ್ಲಿಸಿದ್ದ ವೇಳೆ, “ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಪರಿಶೀಲಿಸಲು ಆಯೋಗ ರಚಿಸುತ್ತೇವೆ” ಎಂದು ಸರ್ಕಾರವು ಪೀಠಕ್ಕೆ ತಿಳಿಸಿತ್ತು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿದ್ದು, ಆಯೋಗವು ಇನ್ನೂ ವರದಿಯನ್ನು ಸಲ್ಲಿಸಿಲ್ಲ. ಅದಕ್ಕೂ ಮುನ್ನವೇ, ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ರೈಸ್ತ ಮುಸ್ಲಿಂ ಸೆರಿದರು ದೌರ್ಜನ್ಯ ಬಿಡುವುದಿಲ್ಲ ಏಕೆಂದರೆ ಎಸ್ಸಿ ಎಸ್ಟಿ ಜನಾಂಗದವರು ಅಂತ ಗುರುತಿಸಿಕೊಂಡಿರುತ್ತಾರೆ ಹಳ್ಳಿಗಳು ಗ್ರಾಮದ ಮನೆಗಳನ್ನು ಒಂದೆ ಕಡೆ ಇರುವುದು ಹಾಗೆ ಸಂಬಂಧ ಗಳು ಹೋಗಿ ಬಾರುವುದು ಆಗಿರುತ್ತದೆ ದ್ಯಾನ ಪ್ರಾರ್ಥನೆ ಬದಲಾದರೂ ಮಾಂಸಾಹಾರಿಗಳು ಆಗಿರುವುದರಿಂದ ಕೀಳಾಗಿ ನೋಡುವುದು ಸಹಜವಾಗಿ ಬಂದಿದೆ ,ಇವರ ಆರ್ಥಿಕ ಅಭಿವೃದ್ಧಿ ಮಾಡಲೂ ಇವರಿಗು ಮೀಸಲಾತಿ ಸೌಲಭ್ಯ ಅವಶ್ಯಕತೆ ಇದೆ ಅನಿಸುತ್ತದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...