Homeಮುಖಪುಟಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಅಸ್ಪೃಶ್ಯತೆ ಆಚರಣೆ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಇಲ್ಲ ಎಂಬ ಕಾರಣಕ್ಕೆ ದಲಿತರು ಮತಾಂತರವಾಗಿದ್ದು, ಅಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

“ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವ ದಲಿತರಿಗೆ ಪರಿಶಿಷ್ಟ ಜಾತಿ(ಎಸ್‌ಸಿ) ಸ್ಥಾನಮಾನ ನೀಡಲು ಸಾಧ್ಯವಿಲ್ಲ” ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಕ್ರೈಸ್ತ ಮತ್ತು ಇಸ್ಲಾಂ ವಿದೇಶಿ ಧರ್ಮಗಳಾಗಿದ್ದು, ಅವುಗಳಿಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

“1950ರ ಸಂವಿಧಾನದ(ಪರಿಶಿಷ್ಟ ಜಾತಿ) ಆದೇಶದ ಪ್ರಕಾರ ಪರಿಶಿಷ್ಟ ಜಾತಿಯ ಜನರು ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರೆ ಮಾತ್ರ ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬಹುದು. ವಿದೇಶಿ ಧರ್ಮಗಳಾದ ಕ್ರೈಸ್ತ ಮತ್ತು ಇಸ್ಲಾಂಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಒಕ್ಕೂಟ ಸರ್ಕಾರವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕ್ರೈಸ್ತ ಮತ್ತು ಇಸ್ಲಾಂನಲ್ಲಿ ಅಸ್ಪೃಶ್ಯತೆಯಂತಹ ದಬ್ಬಾಳಿಕೆಗಳು ಇಲ್ಲ ಎಂಬುದನ್ನು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶವು ಈಗಾಗಲೇ ಸಾಬೀತುಪಡಿಸಿದೆ. ಆ ಎರಡೂ ಧರ್ಮಗಳಲ್ಲಿ ಅಸ್ಪೃಶ್ಯತೆಯಂಥ ಆಚರಣೆಗಳು ಇಲ್ಲ ಎಂಬ ಕಾರಣಕ್ಕೇ ದಲಿತರು ಆ ಧರ್ಮಗಳಿಗೆ ಮತಾಂತರವಾಗಿದ್ದಾರೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ. ಹಾಗಾಗಿ, ಅವರು ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಮೀಸಲಾತಿ ಪಡೆಯಲು ಸಾಧ್ಯವಿಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

“ಹಿಂದೂ ಧರ್ಮದಲ್ಲಿರುವ ದಲಿತರ ಮೇಲೆ ಅಸ್ಪೃಶ್ಯತೆಯಂಥ ದಬ್ಬಾಳಿಕೆ ಮುಂದುವರಿದಿದೆ. ಇಂಥ ಸಮಯದಲ್ಲಿ ಕ್ರಿಶ್ಚಿಯನ್‌ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವವರಿಗೆ ಮೀಸಲಾತಿ ವಿಸ್ತರಿಸಿದರೆ, ಪರಿಶಿಷ್ಟ ಜಾತಿಯ ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಹಾಗೆ ಮೀಸಲಾತಿ ವಿಸ್ತರಿಸುವುದು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆಶಯದ ಉಲ್ಲಂಘನೆಯಾಗುತ್ತದೆ” ಎಂದು ಅಫಿಡವಿಟ್‌ ಹೇಳಿದೆ.

ಇದೇ ವೇಳೆ ಒಕ್ಕೂಟ ಸರ್ಕಾರವು ಬೌದ್ಧರಿಗೆ ಮೀಸಲಾತಿ ನೀಡುವುದನ್ನು ಸಮರ್ಥಿಸಿಕೊಂಡಿದೆ. “ಕೆಲವು ಸಾಮಾಜಿಕ ಆಚರಣೆಗಳ ಕಾರಣದಿಂದ 1956ರಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಕರೆಯ ಮೇರೆಗೆ ಪರಿಶಿಷ್ಟ ಜಾತಿಯ ಜನರು ಬೌದ್ಧ ಧರ್ಮಕ್ಕೆ ಮತಾಂತರವಾದರು. ಹೀಗೆ ಮತಾಂತರ ಆದವರ ಮೂಲ ಜಾತಿ ಯಾವುದು ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಆದರೆ, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರ ಮೂಲ ಜಾತಿ ಪತ್ತೆ ಮಾಡಲು ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿದೆ.

“ಆದರೆ, ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ನಡೆಯುವ ಮತಾಂತರದ ಪ್ರಕ್ರಿಯೆ ಭಿನ್ನವಾಗಿದೆ. ಜತೆಗೆ ಈ ಧರ್ಮಗಳಿಗೆ ಮತಾಂತರವಾದ ಕಾರಣಗಳೂ ಬೇರೆ ಬೇರೆ. ಶತಮಾನಗಳಿದಂದಲೂ ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗಳು ನಡೆಯುತ್ತಿವೆ”

ಇದನ್ನೂ ಓದಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

“2007ರಲ್ಲಿ ನ್ಯಾಯಮೂರ್ತಿ ರಂಗನಾಥ್‌ ಮಿಶ್ರಾ ಆಯೋಗದ ವರದಿಯಲ್ಲಿ ಎಲ್ಲ ಧರ್ಮದಲ್ಲಿರುವ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕು ಎಂದು ಹೇಳಲಾಗಿತ್ತು. ಆದರೆ, ಈ ವರದಿಯು ದೋಷಪೂರಿತವಾಗಿದೆ. ಯಾವುದೇ ಕ್ಷೇತ್ರ ಅಧ್ಯಯನ ನಡೆಸದೆ ವರದಿ ಅಂಗೀಕರಿಸಲು ಆಗಲ್ಲ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸಿಪಿಐಎಲ್‌‌ ಎಂಬ ಸ್ವಯಂಸೇವಾ ಸಂಸ್ಥೆ ಅರ್ಜಿ(ಪಿಐಎಲ್‌) ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಅರ್ಜಿ ಸಲ್ಲಿಸಿದ್ದ ವೇಳೆ, “ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಪರಿಶೀಲಿಸಲು ಆಯೋಗ ರಚಿಸುತ್ತೇವೆ” ಎಂದು ಸರ್ಕಾರವು ಪೀಠಕ್ಕೆ ತಿಳಿಸಿತ್ತು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿದ್ದು, ಆಯೋಗವು ಇನ್ನೂ ವರದಿಯನ್ನು ಸಲ್ಲಿಸಿಲ್ಲ. ಅದಕ್ಕೂ ಮುನ್ನವೇ, ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ರೈಸ್ತ ಮುಸ್ಲಿಂ ಸೆರಿದರು ದೌರ್ಜನ್ಯ ಬಿಡುವುದಿಲ್ಲ ಏಕೆಂದರೆ ಎಸ್ಸಿ ಎಸ್ಟಿ ಜನಾಂಗದವರು ಅಂತ ಗುರುತಿಸಿಕೊಂಡಿರುತ್ತಾರೆ ಹಳ್ಳಿಗಳು ಗ್ರಾಮದ ಮನೆಗಳನ್ನು ಒಂದೆ ಕಡೆ ಇರುವುದು ಹಾಗೆ ಸಂಬಂಧ ಗಳು ಹೋಗಿ ಬಾರುವುದು ಆಗಿರುತ್ತದೆ ದ್ಯಾನ ಪ್ರಾರ್ಥನೆ ಬದಲಾದರೂ ಮಾಂಸಾಹಾರಿಗಳು ಆಗಿರುವುದರಿಂದ ಕೀಳಾಗಿ ನೋಡುವುದು ಸಹಜವಾಗಿ ಬಂದಿದೆ ,ಇವರ ಆರ್ಥಿಕ ಅಭಿವೃದ್ಧಿ ಮಾಡಲೂ ಇವರಿಗು ಮೀಸಲಾತಿ ಸೌಲಭ್ಯ ಅವಶ್ಯಕತೆ ಇದೆ ಅನಿಸುತ್ತದೆ.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...