Homeಮುಖಪುಟಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಅಸ್ಪೃಶ್ಯತೆ ಆಚರಣೆ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಇಲ್ಲ ಎಂಬ ಕಾರಣಕ್ಕೆ ದಲಿತರು ಮತಾಂತರವಾಗಿದ್ದು, ಅಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

“ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿರುವ ದಲಿತರಿಗೆ ಪರಿಶಿಷ್ಟ ಜಾತಿ(ಎಸ್‌ಸಿ) ಸ್ಥಾನಮಾನ ನೀಡಲು ಸಾಧ್ಯವಿಲ್ಲ” ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಕ್ರೈಸ್ತ ಮತ್ತು ಇಸ್ಲಾಂ ವಿದೇಶಿ ಧರ್ಮಗಳಾಗಿದ್ದು, ಅವುಗಳಿಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

“1950ರ ಸಂವಿಧಾನದ(ಪರಿಶಿಷ್ಟ ಜಾತಿ) ಆದೇಶದ ಪ್ರಕಾರ ಪರಿಶಿಷ್ಟ ಜಾತಿಯ ಜನರು ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರೆ ಮಾತ್ರ ಅವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬಹುದು. ವಿದೇಶಿ ಧರ್ಮಗಳಾದ ಕ್ರೈಸ್ತ ಮತ್ತು ಇಸ್ಲಾಂಗೆ ಮತಾಂತರವಾದ ದಲಿತರಿಗೆ ಈ ಸ್ಥಾನಮಾನ ಮತ್ತು ಮೀಸಲಾತಿ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಒಕ್ಕೂಟ ಸರ್ಕಾರವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕ್ರೈಸ್ತ ಮತ್ತು ಇಸ್ಲಾಂನಲ್ಲಿ ಅಸ್ಪೃಶ್ಯತೆಯಂತಹ ದಬ್ಬಾಳಿಕೆಗಳು ಇಲ್ಲ ಎಂಬುದನ್ನು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶವು ಈಗಾಗಲೇ ಸಾಬೀತುಪಡಿಸಿದೆ. ಆ ಎರಡೂ ಧರ್ಮಗಳಲ್ಲಿ ಅಸ್ಪೃಶ್ಯತೆಯಂಥ ಆಚರಣೆಗಳು ಇಲ್ಲ ಎಂಬ ಕಾರಣಕ್ಕೇ ದಲಿತರು ಆ ಧರ್ಮಗಳಿಗೆ ಮತಾಂತರವಾಗಿದ್ದಾರೆ. ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಲ್ಲಿ ಅವರು ದೌರ್ಜನ್ಯಕ್ಕೆ ಒಳಗಾಗುತ್ತಿಲ್ಲ. ಹಾಗಾಗಿ, ಅವರು ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಮೀಸಲಾತಿ ಪಡೆಯಲು ಸಾಧ್ಯವಿಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

“ಹಿಂದೂ ಧರ್ಮದಲ್ಲಿರುವ ದಲಿತರ ಮೇಲೆ ಅಸ್ಪೃಶ್ಯತೆಯಂಥ ದಬ್ಬಾಳಿಕೆ ಮುಂದುವರಿದಿದೆ. ಇಂಥ ಸಮಯದಲ್ಲಿ ಕ್ರಿಶ್ಚಿಯನ್‌ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವವರಿಗೆ ಮೀಸಲಾತಿ ವಿಸ್ತರಿಸಿದರೆ, ಪರಿಶಿಷ್ಟ ಜಾತಿಯ ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಹಾಗೆ ಮೀಸಲಾತಿ ವಿಸ್ತರಿಸುವುದು 1950ರ ಸಂವಿಧಾನ (ಪರಿಶಿಷ್ಟ ಜಾತಿ) ಆಶಯದ ಉಲ್ಲಂಘನೆಯಾಗುತ್ತದೆ” ಎಂದು ಅಫಿಡವಿಟ್‌ ಹೇಳಿದೆ.

ಇದೇ ವೇಳೆ ಒಕ್ಕೂಟ ಸರ್ಕಾರವು ಬೌದ್ಧರಿಗೆ ಮೀಸಲಾತಿ ನೀಡುವುದನ್ನು ಸಮರ್ಥಿಸಿಕೊಂಡಿದೆ. “ಕೆಲವು ಸಾಮಾಜಿಕ ಆಚರಣೆಗಳ ಕಾರಣದಿಂದ 1956ರಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಕರೆಯ ಮೇರೆಗೆ ಪರಿಶಿಷ್ಟ ಜಾತಿಯ ಜನರು ಬೌದ್ಧ ಧರ್ಮಕ್ಕೆ ಮತಾಂತರವಾದರು. ಹೀಗೆ ಮತಾಂತರ ಆದವರ ಮೂಲ ಜಾತಿ ಯಾವುದು ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಆದರೆ, ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರ ಮೂಲ ಜಾತಿ ಪತ್ತೆ ಮಾಡಲು ಸಾಧ್ಯವಿಲ್ಲ” ಎಂದು ಸರ್ಕಾರ ಹೇಳಿದೆ.

“ಆದರೆ, ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ನಡೆಯುವ ಮತಾಂತರದ ಪ್ರಕ್ರಿಯೆ ಭಿನ್ನವಾಗಿದೆ. ಜತೆಗೆ ಈ ಧರ್ಮಗಳಿಗೆ ಮತಾಂತರವಾದ ಕಾರಣಗಳೂ ಬೇರೆ ಬೇರೆ. ಶತಮಾನಗಳಿದಂದಲೂ ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗಳು ನಡೆಯುತ್ತಿವೆ”

ಇದನ್ನೂ ಓದಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

“2007ರಲ್ಲಿ ನ್ಯಾಯಮೂರ್ತಿ ರಂಗನಾಥ್‌ ಮಿಶ್ರಾ ಆಯೋಗದ ವರದಿಯಲ್ಲಿ ಎಲ್ಲ ಧರ್ಮದಲ್ಲಿರುವ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕು ಎಂದು ಹೇಳಲಾಗಿತ್ತು. ಆದರೆ, ಈ ವರದಿಯು ದೋಷಪೂರಿತವಾಗಿದೆ. ಯಾವುದೇ ಕ್ಷೇತ್ರ ಅಧ್ಯಯನ ನಡೆಸದೆ ವರದಿ ಅಂಗೀಕರಿಸಲು ಆಗಲ್ಲ” ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸಿಪಿಐಎಲ್‌‌ ಎಂಬ ಸ್ವಯಂಸೇವಾ ಸಂಸ್ಥೆ ಅರ್ಜಿ(ಪಿಐಎಲ್‌) ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಅರ್ಜಿ ಸಲ್ಲಿಸಿದ್ದ ವೇಳೆ, “ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಪರಿಶೀಲಿಸಲು ಆಯೋಗ ರಚಿಸುತ್ತೇವೆ” ಎಂದು ಸರ್ಕಾರವು ಪೀಠಕ್ಕೆ ತಿಳಿಸಿತ್ತು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ನೇತೃತ್ವದಲ್ಲಿ ಆಯೋಗ ರಚಿಸಲಾಗಿದ್ದು, ಆಯೋಗವು ಇನ್ನೂ ವರದಿಯನ್ನು ಸಲ್ಲಿಸಿಲ್ಲ. ಅದಕ್ಕೂ ಮುನ್ನವೇ, ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕ್ರೈಸ್ತ ಮುಸ್ಲಿಂ ಸೆರಿದರು ದೌರ್ಜನ್ಯ ಬಿಡುವುದಿಲ್ಲ ಏಕೆಂದರೆ ಎಸ್ಸಿ ಎಸ್ಟಿ ಜನಾಂಗದವರು ಅಂತ ಗುರುತಿಸಿಕೊಂಡಿರುತ್ತಾರೆ ಹಳ್ಳಿಗಳು ಗ್ರಾಮದ ಮನೆಗಳನ್ನು ಒಂದೆ ಕಡೆ ಇರುವುದು ಹಾಗೆ ಸಂಬಂಧ ಗಳು ಹೋಗಿ ಬಾರುವುದು ಆಗಿರುತ್ತದೆ ದ್ಯಾನ ಪ್ರಾರ್ಥನೆ ಬದಲಾದರೂ ಮಾಂಸಾಹಾರಿಗಳು ಆಗಿರುವುದರಿಂದ ಕೀಳಾಗಿ ನೋಡುವುದು ಸಹಜವಾಗಿ ಬಂದಿದೆ ,ಇವರ ಆರ್ಥಿಕ ಅಭಿವೃದ್ಧಿ ಮಾಡಲೂ ಇವರಿಗು ಮೀಸಲಾತಿ ಸೌಲಭ್ಯ ಅವಶ್ಯಕತೆ ಇದೆ ಅನಿಸುತ್ತದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...