HomeUncategorizedಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ: ಜೆರುಸಲೇಂನಲ್ಲಿ ಸಿಲುಕಿಕೊಂಡ ಭಾರತದ ಯಾತ್ರಿಕರು

- Advertisement -
- Advertisement -

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧ ಪರಿಸ್ಥಿತಿ ಹಿನ್ನೆಲೆ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು ಜೆರುಸಲೇಂನಲ್ಲಿ ಸಿಲುಕಿರುವ ರಾಜ್ಯದ 27 ಜನರನ್ನು ರಕ್ಷಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಾಯವನ್ನು ಕೋರಿದ್ದಾರೆ.

ರಾಜ್ಯದ ಜನರನ್ನು ಮರಳಿ ರಾಜ್ಯಕ್ಕೆ ಕರೆತರಲು ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಸಂಗ್ಮಾ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ, ಪವಿತ್ರ ತೀರ್ಥಯಾತ್ರೆಗಾಗಿ ಜೆರುಸಲೆಂಗೆ ಪ್ರಯಾಣಿಸಿದ ಮೇಘಾಲಯದ 27 ನಾಗರಿಕರು ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಪ್ರಸ್ತುತ ಉದ್ವಿಗ್ನತೆಯಿಂದಾಗಿ ಬೆಥ್ ಲೆಹೆಮ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ನಾನು ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಗಾಜಾ ಪಟ್ಟಿಯಲ್ಲಿರುವ ಆಡಳಿತಾರೂಢ ಹಮಾಸ್ ಗುಂಪು ಶನಿವಾರ ಬೆಳಗಿನ ಜಾವ ಇಸ್ರೇಲ್ ಮೇಲೆ ದಾಳಿಯನ್ನು ನಡೆಸಿದೆ. ಡಜನ್ ಗಟ್ಟಲೆ ಯೋಧರು ಭಾರಿ ಭದ್ರಪಡಿಸಿದ ಗಡಿಯನ್ನು ನುಸುಳಿ ಸಾವಿರಾರು ರಾಕೆಟ್‌ಗಳನ್ನು ಹಾರಿಸಿದ್ದಾರೆ.

ಹಮಾಸ್‌ ಹೋರಾಟಗಾರರು ಇಸ್ರೇಲ್‌ ಮೇಲೆ ರಾಕೆಟ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿದ್ದು, ಶತ್ರುಗಳು ಇದಕ್ಕಾಗಿ ತಕ್ಕ ಬೆಲೆ ತೆರಲಿದ್ದಾರೆ ಎಂದು ಇಸ್ರೇಲ್‌ ಪ್ರಧಾನಿ ಹೇಳಿದ್ದರು.

ಹಮಾಸ್ ಗುಂಪು ಶನಿವಾರ ಬೆಳಗಿನ ಜಾವ ಇಸ್ರೇಲ್ ಮೇಲೆ ನಡೆಸಿದ ದಾಳಿ ಮತ್ತು ಅದಕ್ಕೆ ಪ್ರತಿಯಾಗಿ ಯುದ್ಧ ಘೋಷಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಎರಡೂ ದೇಶಗಳ 500ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಮಹಾರಾಷ್ಟ್ರ: ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...