Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...