Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...