Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...