Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...