Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...