Homeಮುಖಪುಟಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ.

- Advertisement -
- Advertisement -

ಇತ್ತೀಚಿಗಷ್ಟೇ ಹರಿಯಾಣದ ಗುರ್ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಿದ್ದ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಿನ್ನೆ ಪಟೌಡಿಯ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಈ ಕುರಿತು ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗುವುದನ್ನು ನೋಡಬಹುದು.

ವ್ಯಕ್ತಿಯೊಬ್ಬ ಮೈಕ್ ಕಿತ್ತುಕೊಂಡು ನೀವು ಭಾರತೀಯ ಸಂಸ್ಕೃತಿಯನ್ನು ಸರ್ವನಾಶ ಮಾಡುತ್ತಿದ್ದೀರಿ, ಇದನ್ನು ಸಹಿಸುವುದಿಲ್ಲ, ಈ ಮಕ್ಕಳು ನಿಮ್ಮಂತಾಗಲು ಬಿಡುವುದಿಲ್ಲ, ಈ ಕೆಲಸವನ್ನು ನಾವು ಒಪ್ಪುವುದಿಲ್ಲ ಮಾತ್ರವಲ್ಲ ಇನ್ನು ಮುಂದೆ ಈ ರೀತಿ ನಡೆಯಲು ಬಿಡುವುದಿಲ್ಲ ಎಂಬ ಸಂಕಲ್ಪ ತೊಡುತ್ತೇವೆ, ಸತ್ಯ ಸನಾತನ ಧರ್ಮಕ್ಕೆ ಜಯವಾಗಲಿ ಎಂದು ಮಾತನಾಡುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳೀಯ ಪಾದ್ರಿಯೊಬ್ಬರು ಪಿಟಿಐನೊಂದಿಗೆ ಮಾತನಾಡಿ “ನಾವು ಚರ್ಚ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳೊಂದಿಗೆ ಕ್ರಿಸ್‌ಮಸ್ ಪ್ರಾರ್ಥನೆ ಮಾಡುತ್ತಿದ್ದೆವು. ಏಕಾಏಕಿ ನುಗ್ಗಿ ದಾಂಧಲೆ ನಡಿಸಿದ್ದಾರೆ. ದಿನದಿಂದ ದಿನಕ್ಕೆ ಈ ಕಿರುಕುಳ ಹೆಚ್ಚುತ್ತಿದೆ. ಇದು ಧರ್ಮ ಪಾಲಿಸುವ ಮತ್ತು ಪ್ರಾರ್ಥಿಸುವ ನಮ್ಮ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ದೂರಿದ್ದಾರೆ. ಪಟೌಡಿ ಠಾಣಾಧಿಕಾರಿ ಅಮಿತ್ ಕುಮಾರ್ ಮಾತನಾಡಿ, ಪೊಲೀಸರು ಇದುವರೆಗೆ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. ಸದ್ಯಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಲಾಗುತ್ತಿದೆ. ಅದು ಈಗ ಕ್ರಿಶ್ಚಿಯನ್ ಚರ್ಚ್‌ಗಳಿಗೂ ವ್ಯಾಪಿಸಿದೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...