Homeಮುಖಪುಟಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ.

- Advertisement -
- Advertisement -

ಇತ್ತೀಚಿಗಷ್ಟೇ ಹರಿಯಾಣದ ಗುರ್ಗಾಂವ್‌ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಿದ್ದ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಿನ್ನೆ ಪಟೌಡಿಯ ಚರ್ಚ್ ಒಂದಕ್ಕೆ ನುಗ್ಗಿ ದಾಂಧಲೆ ನಡೆಸಿ, ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಈ ಕುರಿತು ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಲಪಂಥೀಯ ಕಾರ್ಯಕರ್ತರು ವೇದಿಕೆಗೆ ನುಗ್ಗಿ, ಅಲ್ಲಿದ್ದವರನ್ನು ಕೆಳಗೆ ತಳ್ಳಿ, ಮೈಕ್ ಕಿತ್ತುಕೊಂಡು ಜೈ ಶ್ರೀರಾಮ್ ಮತ್ತು ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಗಳನ್ನು ಕೂಗುವುದನ್ನು ನೋಡಬಹುದು.

ವ್ಯಕ್ತಿಯೊಬ್ಬ ಮೈಕ್ ಕಿತ್ತುಕೊಂಡು ನೀವು ಭಾರತೀಯ ಸಂಸ್ಕೃತಿಯನ್ನು ಸರ್ವನಾಶ ಮಾಡುತ್ತಿದ್ದೀರಿ, ಇದನ್ನು ಸಹಿಸುವುದಿಲ್ಲ, ಈ ಮಕ್ಕಳು ನಿಮ್ಮಂತಾಗಲು ಬಿಡುವುದಿಲ್ಲ, ಈ ಕೆಲಸವನ್ನು ನಾವು ಒಪ್ಪುವುದಿಲ್ಲ ಮಾತ್ರವಲ್ಲ ಇನ್ನು ಮುಂದೆ ಈ ರೀತಿ ನಡೆಯಲು ಬಿಡುವುದಿಲ್ಲ ಎಂಬ ಸಂಕಲ್ಪ ತೊಡುತ್ತೇವೆ, ಸತ್ಯ ಸನಾತನ ಧರ್ಮಕ್ಕೆ ಜಯವಾಗಲಿ ಎಂದು ಮಾತನಾಡುವುದನ್ನು ವಿಡಿಯೋದಲ್ಲಿ ನೋಡಬಹುದು.

ಸ್ಥಳೀಯ ಪಾದ್ರಿಯೊಬ್ಬರು ಪಿಟಿಐನೊಂದಿಗೆ ಮಾತನಾಡಿ “ನಾವು ಚರ್ಚ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳೊಂದಿಗೆ ಕ್ರಿಸ್‌ಮಸ್ ಪ್ರಾರ್ಥನೆ ಮಾಡುತ್ತಿದ್ದೆವು. ಏಕಾಏಕಿ ನುಗ್ಗಿ ದಾಂಧಲೆ ನಡಿಸಿದ್ದಾರೆ. ದಿನದಿಂದ ದಿನಕ್ಕೆ ಈ ಕಿರುಕುಳ ಹೆಚ್ಚುತ್ತಿದೆ. ಇದು ಧರ್ಮ ಪಾಲಿಸುವ ಮತ್ತು ಪ್ರಾರ್ಥಿಸುವ ನಮ್ಮ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ದೂರಿದ್ದಾರೆ. ಪಟೌಡಿ ಠಾಣಾಧಿಕಾರಿ ಅಮಿತ್ ಕುಮಾರ್ ಮಾತನಾಡಿ, ಪೊಲೀಸರು ಇದುವರೆಗೆ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ತಿಳಿಸಿದ್ದಾರೆ.

ಬಹಳ ಹಿಂದಿನಿಂದಲೂ ಗುರುಗ್ರಾಮದ ಹಲವು ಖಾಲಿ ನಿವೇ‍ಶನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ವಾರದಲ್ಲಿ ಒಂದು ದಿನ ನಮಾಜ್ ಮಾಡುತ್ತಿದ್ದರು. ಆದರೆ ಅಕ್ಟೋಬರ್ ಆರಂಭದಿಂದ ಕೆಲವು ಹಿಂದುತ್ವವಾದಿ ಸಂಘಟನೆಗಳು ಅದಕ್ಕೆ ಅಡ್ಡಿಪಡಿಸಿದ್ದವು. ಮುಸ್ಲಿಮರು ನಮಾಜ್ ಮಾಡುವ ಜಾಗದಲ್ಲಿಯೇ ಈ ಸಂಘಟನೆಗಳು ಗೋವರ್ಧನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಅಲ್ಲಿ ಹಿಂದೂ ವಿರೋಧಿಗಳಿಗೆ ಗುಂಡು ಹೊಡೆಯಿರಿ ಎಂದು ಘೋಷಣೆಗಳನ್ನು ಕೂಗಲಾಗಿತ್ತು. ಕಾರ್ಯಕ್ರಮದಲ್ಲಿ ದೆಹಲಿ ಗಲಭೆಯ ಪ್ರಚೋದನಾಕಾರಿ ಭಾಷಣಕಾರರದ ಕಪಿಲ್ ಮಿಶ್ರಾ ಭಾಗವಹಿಸಿದ್ದರು. ನಂತರ ಅದೇ ಜಾಗದಲ್ಲಿ ಸಗಣಿಗಳನ್ನು ತಂದು ಹಾಕಿ ನಮಾಜ್ ಮಾಡಲು ಅಡ್ಡಿಪಡಿಸಲಾಗಿತ್ತು. ಹಾಗಾಗಿ ಜಿಲ್ಲಾಡಳಿತ ಅಲ್ಲಿ ನಮಾಜ್ ಮಾಡಲು ಅನುಮತಿ ನಿರಾಕರಿಸಲಾಗಿತ್ತು. ಈಗ ಸಿಖ್ ಮತ್ತು ಕೆಲ ಹಿಂದೂ ಜನರು ಮಸ್ಲಿಮರು ನಮ್ಮ ಸ್ಥಳಗಳಿಗೆ ಬಂದು ನಮಾಜ್ ಮಾಡಿ ಎಂದು ಆಹ್ವಾನ ನೀಡುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. ಸದ್ಯಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಅಡ್ಡಿಪಡಿಸಲಾಗುತ್ತಿದೆ. ಅದು ಈಗ ಕ್ರಿಶ್ಚಿಯನ್ ಚರ್ಚ್‌ಗಳಿಗೂ ವ್ಯಾಪಿಸಿದೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...