Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...