Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...