Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...