Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...