Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...